ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…

ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ  16 ರಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.  ಈ ವೇಳೆ ಅವರ ಮೊಬೈಲ್ ನ್ನು ಪಾಪಿಗಳು ಯಾರೋ ಕದ್ದಿದ್ದಾರೆ. ಇದೀಗ ಅವರ ಪುಟ್ಟ ಮಗಳು ಅಮ್ಮನ ಮೊಬೈಲ್ ದಯವಿಟ್ಟು ಹುಡುಕಿ ಕೊಡಿ, ತೆಗೆದುಕೊಂಡವರು ದಯವಿಟ್ಟು ವಾಪಾಸ್ ಕೊಡಿ ಎಂದು ಅಂಗಲಾಚುತ್ತಿದ್ದಾಳೆ.

ಅಲ್ಲದೇ ಅದರಲ್ಲಿ ನನ್ನ ಅಮ್ಮನ ಸವಿ ನೆನಪುಗಳಿವೆ. ಅದರಲ್ಲಿ ಆಕೆಯ ಫೋಟೋಗಳಿವೆ ಎಂದು  ಬೇಡಿಕೊಂಡಿದ್ದಾಳೆ. ಅಲ್ಲದೇ ಪತ್ರ ಕೂಡ ಬರೆದಿದ್ದಾಳೆ.

ಪತ್ರದಲ್ಲಿ ಏನಿದೆ?

ಕೊಡಗು ಜಿಲ್ಲಾಧಿಕಾರಿಗಳು ಮತ್ತು ಶಾಸಕರುಗಳು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆ ಸಿಬ್ಬಂದಿಗಳಲ್ಲಿ ಮನವಿ..

ಸುಮಾರು 15 ದಿನಗಳ ಹಿಂದೆ ನಾನು ಮತ್ತು ಅಪ್ಪ, ಅಮ್ಮ ಅವರು ಕೋವಿಡ್ ಗೆ ತುತ್ತಾಗಿದ್ದು, ತಾಯಿಯವರು 15 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆ, ಮಡಿಕೇರಿ ಇಲ್ಲಿಗೆ ಕಾಯಿಲೆ ಉಲ್ಬಣಗೊಂಡು, ಸೇರಿರುತ್ತಾರೆ.

ನಾನು ಮತ್ತು ಅಪ್ಪ, ಹೋಂ ಕ್ವಾರೆಂಟ್ ಆಗಿದ್ದು, ಹೊರಗೆ ಬರಲಾರದ ಸ್ಥಿತಿಯಲ್ಲಿದ್ದು, ತಂದೆಯವರು ದಿನಗೂಲಿ ನೌಕರರಾಗಿದ್ದು, ಅಕ್ಕ-ಪಕ್ಕದವರ ಸಹಾಯದಿಂದ ಈ ದಿನಗಳನ್ನು ಕಳೆದೆವು.

ದಿನಾಂಕ 16-05-2021ರಂದು ನಮ್ಮ ತಾಯಿಯವರು ಮೃತರಾದರು. ಅವರ ಜೊತೆಯಲ್ಲಿ ಇದ್ದಂತಹ ಮೊಬೈಲ್ ಅನ್ನು ಯಾರೋ ತೆಗೆದುಕೊಂಡಿರುತ್ತಾರೆ. ನಾನು ತಬ್ಬಲಿಯಾಗಿದ್ದು, ನನ್ನ ತಾಯಿಯ ನೆನಪುಗಳು ಆ ಮೊಬೈಲ್ ನಲ್ಲಿ ಇರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದಾರೆ ಅಥವಾ ಸಿಕ್ಕಿದ್ದರೆ, ದಯವಿಟ್ಟು ಈ ತಬ್ಬಲಿಯ ವಿಳಾಸ ಹಾರಂಗಿ ರಸ್ತೆ, ಗುಮ್ಮನಕೊಲ್ಲಿ ಗ್ರಾಮ, ಬಸಪ್ಪ ಬಡಾವಣೆ, ಕುಶಾಲನಗರ-571234, ಕೊಡಗು ಜಿಲ್ಲೆ ಇಲ್ಲಿಗೆ ತಲುಪಿಸಿ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ.

ಇಂತಿ……… ತಾಯಿಯನ್ನು ಕಳೆದುಕೊಂಡ ನತದೃಷ್ಟೆ, ಹೃತಿಕ್ಷ

ಹೀಗೆಂದು ಬರೆದುಕೊಂಡಿದ್ದು ಬಾಲಕಿಯ ಮನವಿ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅನೇಕರು ಮೊಬೈಲ್ ಕದ್ದವರು ದಯವಿಟ್ಟು ವಾಪಾಸ್ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ