ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…

ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ  16 ರಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.  ಈ ವೇಳೆ ಅವರ ಮೊಬೈಲ್ ನ್ನು ಪಾಪಿಗಳು ಯಾರೋ ಕದ್ದಿದ್ದಾರೆ. ಇದೀಗ ಅವರ ಪುಟ್ಟ ಮಗಳು ಅಮ್ಮನ ಮೊಬೈಲ್ ದಯವಿಟ್ಟು ಹುಡುಕಿ ಕೊಡಿ, ತೆಗೆದುಕೊಂಡವರು ದಯವಿಟ್ಟು ವಾಪಾಸ್ ಕೊಡಿ ಎಂದು ಅಂಗಲಾಚುತ್ತಿದ್ದಾಳೆ.

ಅಲ್ಲದೇ ಅದರಲ್ಲಿ ನನ್ನ ಅಮ್ಮನ ಸವಿ ನೆನಪುಗಳಿವೆ. ಅದರಲ್ಲಿ ಆಕೆಯ ಫೋಟೋಗಳಿವೆ ಎಂದು  ಬೇಡಿಕೊಂಡಿದ್ದಾಳೆ. ಅಲ್ಲದೇ ಪತ್ರ ಕೂಡ ಬರೆದಿದ್ದಾಳೆ.

ಪತ್ರದಲ್ಲಿ ಏನಿದೆ?

ಕೊಡಗು ಜಿಲ್ಲಾಧಿಕಾರಿಗಳು ಮತ್ತು ಶಾಸಕರುಗಳು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆ ಸಿಬ್ಬಂದಿಗಳಲ್ಲಿ ಮನವಿ..

ಸುಮಾರು 15 ದಿನಗಳ ಹಿಂದೆ ನಾನು ಮತ್ತು ಅಪ್ಪ, ಅಮ್ಮ ಅವರು ಕೋವಿಡ್ ಗೆ ತುತ್ತಾಗಿದ್ದು, ತಾಯಿಯವರು 15 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆ, ಮಡಿಕೇರಿ ಇಲ್ಲಿಗೆ ಕಾಯಿಲೆ ಉಲ್ಬಣಗೊಂಡು, ಸೇರಿರುತ್ತಾರೆ.

ನಾನು ಮತ್ತು ಅಪ್ಪ, ಹೋಂ ಕ್ವಾರೆಂಟ್ ಆಗಿದ್ದು, ಹೊರಗೆ ಬರಲಾರದ ಸ್ಥಿತಿಯಲ್ಲಿದ್ದು, ತಂದೆಯವರು ದಿನಗೂಲಿ ನೌಕರರಾಗಿದ್ದು, ಅಕ್ಕ-ಪಕ್ಕದವರ ಸಹಾಯದಿಂದ ಈ ದಿನಗಳನ್ನು ಕಳೆದೆವು.

ದಿನಾಂಕ 16-05-2021ರಂದು ನಮ್ಮ ತಾಯಿಯವರು ಮೃತರಾದರು. ಅವರ ಜೊತೆಯಲ್ಲಿ ಇದ್ದಂತಹ ಮೊಬೈಲ್ ಅನ್ನು ಯಾರೋ ತೆಗೆದುಕೊಂಡಿರುತ್ತಾರೆ. ನಾನು ತಬ್ಬಲಿಯಾಗಿದ್ದು, ನನ್ನ ತಾಯಿಯ ನೆನಪುಗಳು ಆ ಮೊಬೈಲ್ ನಲ್ಲಿ ಇರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದಾರೆ ಅಥವಾ ಸಿಕ್ಕಿದ್ದರೆ, ದಯವಿಟ್ಟು ಈ ತಬ್ಬಲಿಯ ವಿಳಾಸ ಹಾರಂಗಿ ರಸ್ತೆ, ಗುಮ್ಮನಕೊಲ್ಲಿ ಗ್ರಾಮ, ಬಸಪ್ಪ ಬಡಾವಣೆ, ಕುಶಾಲನಗರ-571234, ಕೊಡಗು ಜಿಲ್ಲೆ ಇಲ್ಲಿಗೆ ತಲುಪಿಸಿ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ.

ಇಂತಿ……… ತಾಯಿಯನ್ನು ಕಳೆದುಕೊಂಡ ನತದೃಷ್ಟೆ, ಹೃತಿಕ್ಷ

ಹೀಗೆಂದು ಬರೆದುಕೊಂಡಿದ್ದು ಬಾಲಕಿಯ ಮನವಿ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅನೇಕರು ಮೊಬೈಲ್ ಕದ್ದವರು ದಯವಿಟ್ಟು ವಾಪಾಸ್ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Spread the love
  • Related Posts

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 42 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2335 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 614 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 236 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 72 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 52 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ