ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…

ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ  16 ರಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.  ಈ ವೇಳೆ ಅವರ ಮೊಬೈಲ್ ನ್ನು ಪಾಪಿಗಳು ಯಾರೋ ಕದ್ದಿದ್ದಾರೆ. ಇದೀಗ ಅವರ ಪುಟ್ಟ ಮಗಳು ಅಮ್ಮನ ಮೊಬೈಲ್ ದಯವಿಟ್ಟು ಹುಡುಕಿ ಕೊಡಿ, ತೆಗೆದುಕೊಂಡವರು ದಯವಿಟ್ಟು ವಾಪಾಸ್ ಕೊಡಿ ಎಂದು ಅಂಗಲಾಚುತ್ತಿದ್ದಾಳೆ.

ಅಲ್ಲದೇ ಅದರಲ್ಲಿ ನನ್ನ ಅಮ್ಮನ ಸವಿ ನೆನಪುಗಳಿವೆ. ಅದರಲ್ಲಿ ಆಕೆಯ ಫೋಟೋಗಳಿವೆ ಎಂದು  ಬೇಡಿಕೊಂಡಿದ್ದಾಳೆ. ಅಲ್ಲದೇ ಪತ್ರ ಕೂಡ ಬರೆದಿದ್ದಾಳೆ.

ಪತ್ರದಲ್ಲಿ ಏನಿದೆ?

ಕೊಡಗು ಜಿಲ್ಲಾಧಿಕಾರಿಗಳು ಮತ್ತು ಶಾಸಕರುಗಳು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆ ಸಿಬ್ಬಂದಿಗಳಲ್ಲಿ ಮನವಿ..

ಸುಮಾರು 15 ದಿನಗಳ ಹಿಂದೆ ನಾನು ಮತ್ತು ಅಪ್ಪ, ಅಮ್ಮ ಅವರು ಕೋವಿಡ್ ಗೆ ತುತ್ತಾಗಿದ್ದು, ತಾಯಿಯವರು 15 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆ, ಮಡಿಕೇರಿ ಇಲ್ಲಿಗೆ ಕಾಯಿಲೆ ಉಲ್ಬಣಗೊಂಡು, ಸೇರಿರುತ್ತಾರೆ.

ನಾನು ಮತ್ತು ಅಪ್ಪ, ಹೋಂ ಕ್ವಾರೆಂಟ್ ಆಗಿದ್ದು, ಹೊರಗೆ ಬರಲಾರದ ಸ್ಥಿತಿಯಲ್ಲಿದ್ದು, ತಂದೆಯವರು ದಿನಗೂಲಿ ನೌಕರರಾಗಿದ್ದು, ಅಕ್ಕ-ಪಕ್ಕದವರ ಸಹಾಯದಿಂದ ಈ ದಿನಗಳನ್ನು ಕಳೆದೆವು.

ದಿನಾಂಕ 16-05-2021ರಂದು ನಮ್ಮ ತಾಯಿಯವರು ಮೃತರಾದರು. ಅವರ ಜೊತೆಯಲ್ಲಿ ಇದ್ದಂತಹ ಮೊಬೈಲ್ ಅನ್ನು ಯಾರೋ ತೆಗೆದುಕೊಂಡಿರುತ್ತಾರೆ. ನಾನು ತಬ್ಬಲಿಯಾಗಿದ್ದು, ನನ್ನ ತಾಯಿಯ ನೆನಪುಗಳು ಆ ಮೊಬೈಲ್ ನಲ್ಲಿ ಇರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದಾರೆ ಅಥವಾ ಸಿಕ್ಕಿದ್ದರೆ, ದಯವಿಟ್ಟು ಈ ತಬ್ಬಲಿಯ ವಿಳಾಸ ಹಾರಂಗಿ ರಸ್ತೆ, ಗುಮ್ಮನಕೊಲ್ಲಿ ಗ್ರಾಮ, ಬಸಪ್ಪ ಬಡಾವಣೆ, ಕುಶಾಲನಗರ-571234, ಕೊಡಗು ಜಿಲ್ಲೆ ಇಲ್ಲಿಗೆ ತಲುಪಿಸಿ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ.

ಇಂತಿ……… ತಾಯಿಯನ್ನು ಕಳೆದುಕೊಂಡ ನತದೃಷ್ಟೆ, ಹೃತಿಕ್ಷ

ಹೀಗೆಂದು ಬರೆದುಕೊಂಡಿದ್ದು ಬಾಲಕಿಯ ಮನವಿ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅನೇಕರು ಮೊಬೈಲ್ ಕದ್ದವರು ದಯವಿಟ್ಟು ವಾಪಾಸ್ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Spread the love
  • Related Posts

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…

    Spread the love

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    You Missed

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 36 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 170 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 82 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 281 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 192 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 114 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು