“ದೊಡ್ಡ ತಲೆಗಳೇ ಉರುಳುತ್ತವೆ” ಹೂತ ಹೆಣಗಳು ಎದ್ದು ಮಾತಾಡುತ್ತವೆ- ಪ್ರೇತ ಭಾದೆ ಎದುರಾಗಲಿದೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು!

ಹಾಸನ: ಕೊರೋನಾ 2ನೇ ಅಲೆ ನಿಯಂತ್ರಣ ಆಗುತ್ತಿರುವ ಬೆನ್ನಲ್ಲೇ ಕೋಡಿ ಮಠದ ಶ್ರೀಗಳು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.

ಔಷಧಿಯೇ ಇಲ್ಲದಂತಹ ಕಾಯಿಲೆಗಳು ಭಾರೀ ಪ್ರಭಾವವನ್ನು ಬೀರುತ್ತದೆ ಎಂದು ಎರಡು ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಗಳು, ಮತ್ತೆ ಭವಿಷ್ಯವನ್ನು ನುಡಿದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜೂನ್ 20ರ ವೇಳೆಯಲ್ಲಿ ಇದರ ಹಾವಳಿ ಕ್ಷೀಣಿಸಲಿದೆ ಎಂದು ಹೇಳಿದ್ದಾರೆ.

ಆದರೆ ಮುಂದೆ ಕಾದಿದೆ ಮಾರಿಹಬ್ಬ ಎನ್ನುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ಗಮನಿಸಬೇಕಾದ ವಿಚಾರ ಏನಂದರೆ, ಕಳೆದ ಕಾರ್ತಿಕ ಮಾಸದಲ್ಲಿ ಕೊರೊನಾ ಮೊದಲನೇ ಕಮ್ಮಿಯಾಗುತ್ತದೆ ಎಂದು ಕೋಡಿಶ್ರೀಗಳು, ಮುಂಬರುವ ಕಾರ್ತಿಕದಲ್ಲಿ ದೇಶಕ್ಕೆ ಹೊಸ ಸಮಸ್ಯೆ/ಕಾಯಿಲೆ ಎದುರಾಗಲಿದೆ ಎಂದು ಹೇಳಿರುವುದು ಜ್ಯೋತಿಷ್ಯ ಶಾಸ್ತ್ರ ನಂಬುವವರನ್ನು ಆತಂಕಕ್ಕೆ ದೂಡಿದೆ.

ಈಗಿನ ಕಾಯಿಲೆ ಜೂನ್ ಇಪ್ಪತ್ತರ ಮೇಲೆ ಕಮ್ಮಿಯಾಗುತ್ತಾ ಬರುತ್ತದೆ
ಕೊರೊನಾ ಎನ್ನುವ ಕಾಯಿಲೆ ಏನು ವಿಶ್ವವನ್ನು ಕಾಡುತ್ತಿದೆಯೋ ಅದು ಸಂಪೂರ್ಣ ಹೋಗಲು ಇನ್ನು ಹತ್ತು ವರ್ಷ ಬೇಕಾದೀತು. ಆದರೆ, ಈಗಿನ ಕಾಯಿಲೆ ಜೂನ್ ಇಪ್ಪತ್ತರ ಮೇಲೆ ಕಮ್ಮಿಯಾಗುತ್ತಾ ಬರುತ್ತದೆ. ಈಗ ಬಂದಿರುವ ರೋಗವನ್ನು ನಾವು ಗಂಟಲು ಬೇನೆ ಎಂದು ಕರೆಯುತ್ತಿದ್ದೆವು. ಯಾವಾಗ ಮನುಷ್ಯನಲ್ಲಿ ಸ್ವಚ್ಚತೆ ಹೋಯಿತೋ ಆಗ ಇಂತಹ ಕಾಯಿಲೆಗಳು ಕಫ, ಪಿತ್ತ, ವಾತ ರೀತಿಯಲ್ಲಿ ಮನುಷ್ಯನನ್ನು ಆವರಿಸುತ್ತದೆ.

ಮನುಷ್ಯ ತನ್ನ ನಿಯಂತ್ರಣ ತಪ್ಪಿದಾಗ ಇಂತಹ ಕಾಯಿಲೆಗಳು ಜನರನ್ನು ಕಾಡಲು ಆರಂಭಿಸುತ್ತದೆ

ಕಾಯಿಲೆಗಳು ಮಾರಕವಾಗದಿದ್ದರೂ, ಮನುಷ್ಯ ತನ್ನ ನಿಯಂತ್ರಣ ತಪ್ಪಿದಾಗ ಇಂತಹ ಕಾಯಿಲೆಗಳು ಜನರನ್ನು ಕಾಡಲು ಆರಂಭಿಸುತ್ತದೆ. ಮುಂದಿನ ದಿನಗಳಲ್ಲಿ ಇನ್ನೊಂದು ಅಲೆ ಎದುರಾಗಲಿದೆ. ಸಾವಿರಾರು ಸಾವುಗಳಾಗಿವೆ, ಎಲ್ಲರೂ ಮೆಡಿಶಿನ್ ಹಾಕಿ ಸತ್ತು ಹೋದವರು. ಇದರ ವಿಷ ಭೂಮಿಯನ್ನು ಸೇರುತ್ತಿದೆ, ಅದು ಹೊರಗೆ ಬರುತ್ತದೆ
ಕುಂಭ ರಾಶಿಯಲ್ಲಿ ಗುರು ಬಂದರೆ ಆ ವರ್ಷವೆಲ್ಲಾ ಮಳೆ ಬೆಳೆ ಜಾಸ್ತಿಯಾಗುತ್ತೆ.

ಹೋದ ಹೊತ್ತಲ್ಲೇ ಸತ್ತ, ಬಿದ್ದ ಎಂದು ನಮ್ಮ ಪೂರ್ವಿಕರು ಹೇಳುತ್ತಿದ್ದರು. ಅಂತಹ ಕಾಯಿಲೆ ಮುಂದೆ ಬರುತ್ತದೆ, ಕುಂಭದಲ್ಲಿ ಗುರು ಬರಲು, ತುಂಬೋ ಕೆರೆಕಟ್ಟೆ ಶಂಭವಿನ ಪದಶಾಕ್ಷಿ ಡಬ್ಬವೆನಿಸಬೇಡಿ ಎನ್ನುವ ಪದ ನಮ್ಮಲ್ಲಿ ಬಳಕೆಯಲ್ಲಿದೆ.


ಹೂತ ಹೆಣಗಳು ಎದ್ದು ಮಾತಾಡುತ್ತಾವೆ. ಪ್ರೇತಗಳ ಭಾದೆ ಎದುರಾಗಲಿದೆ:

ಕಾರ್ತಿಕದ ವರೆಗೂ ಮಳೆ ಸುರಿಯುತ್ತೆ, ಮಳೆ ಬಂದರೆ ಶೀತ, ಇದು ಈಗಿನ ಕಾಯಿಲೆಯ ಸ್ನೇಹಿತ. ಜಗತ್ತಿಗೆ ಅಪಾಯಕಾರಿ ಸನ್ನಿವೇಶ ಎದುರಾಗಲಿದೆ, ದೊಡ್ಡದೊಡ್ಡ ತಲೆಗಳು ಉರುಳಲಿವೆ, ರಾಜಕೀಯ ವಿಪ್ಲವವಾಗಲಿದೆ. ಸಾಮೂಹಿಕ ಸಾವುನೋವುಗಳು ಆಗುತ್ತವೆ, ಹೂತ ಹೆಣಗಳು ಎದ್ದು ಮಾತಾಡುತ್ತಾವೆ. ಪ್ರೇತಗಳ ಭಾದೆ ಎದುರಾಗಲಿದೆ

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 25 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 64 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 83 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ