“ದೊಡ್ಡ ತಲೆಗಳೇ ಉರುಳುತ್ತವೆ” ಹೂತ ಹೆಣಗಳು ಎದ್ದು ಮಾತಾಡುತ್ತವೆ- ಪ್ರೇತ ಭಾದೆ ಎದುರಾಗಲಿದೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು!

ಹಾಸನ: ಕೊರೋನಾ 2ನೇ ಅಲೆ ನಿಯಂತ್ರಣ ಆಗುತ್ತಿರುವ ಬೆನ್ನಲ್ಲೇ ಕೋಡಿ ಮಠದ ಶ್ರೀಗಳು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.

ಔಷಧಿಯೇ ಇಲ್ಲದಂತಹ ಕಾಯಿಲೆಗಳು ಭಾರೀ ಪ್ರಭಾವವನ್ನು ಬೀರುತ್ತದೆ ಎಂದು ಎರಡು ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಗಳು, ಮತ್ತೆ ಭವಿಷ್ಯವನ್ನು ನುಡಿದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜೂನ್ 20ರ ವೇಳೆಯಲ್ಲಿ ಇದರ ಹಾವಳಿ ಕ್ಷೀಣಿಸಲಿದೆ ಎಂದು ಹೇಳಿದ್ದಾರೆ.

ಆದರೆ ಮುಂದೆ ಕಾದಿದೆ ಮಾರಿಹಬ್ಬ ಎನ್ನುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ಗಮನಿಸಬೇಕಾದ ವಿಚಾರ ಏನಂದರೆ, ಕಳೆದ ಕಾರ್ತಿಕ ಮಾಸದಲ್ಲಿ ಕೊರೊನಾ ಮೊದಲನೇ ಕಮ್ಮಿಯಾಗುತ್ತದೆ ಎಂದು ಕೋಡಿಶ್ರೀಗಳು, ಮುಂಬರುವ ಕಾರ್ತಿಕದಲ್ಲಿ ದೇಶಕ್ಕೆ ಹೊಸ ಸಮಸ್ಯೆ/ಕಾಯಿಲೆ ಎದುರಾಗಲಿದೆ ಎಂದು ಹೇಳಿರುವುದು ಜ್ಯೋತಿಷ್ಯ ಶಾಸ್ತ್ರ ನಂಬುವವರನ್ನು ಆತಂಕಕ್ಕೆ ದೂಡಿದೆ.

ಈಗಿನ ಕಾಯಿಲೆ ಜೂನ್ ಇಪ್ಪತ್ತರ ಮೇಲೆ ಕಮ್ಮಿಯಾಗುತ್ತಾ ಬರುತ್ತದೆ
ಕೊರೊನಾ ಎನ್ನುವ ಕಾಯಿಲೆ ಏನು ವಿಶ್ವವನ್ನು ಕಾಡುತ್ತಿದೆಯೋ ಅದು ಸಂಪೂರ್ಣ ಹೋಗಲು ಇನ್ನು ಹತ್ತು ವರ್ಷ ಬೇಕಾದೀತು. ಆದರೆ, ಈಗಿನ ಕಾಯಿಲೆ ಜೂನ್ ಇಪ್ಪತ್ತರ ಮೇಲೆ ಕಮ್ಮಿಯಾಗುತ್ತಾ ಬರುತ್ತದೆ. ಈಗ ಬಂದಿರುವ ರೋಗವನ್ನು ನಾವು ಗಂಟಲು ಬೇನೆ ಎಂದು ಕರೆಯುತ್ತಿದ್ದೆವು. ಯಾವಾಗ ಮನುಷ್ಯನಲ್ಲಿ ಸ್ವಚ್ಚತೆ ಹೋಯಿತೋ ಆಗ ಇಂತಹ ಕಾಯಿಲೆಗಳು ಕಫ, ಪಿತ್ತ, ವಾತ ರೀತಿಯಲ್ಲಿ ಮನುಷ್ಯನನ್ನು ಆವರಿಸುತ್ತದೆ.

ಮನುಷ್ಯ ತನ್ನ ನಿಯಂತ್ರಣ ತಪ್ಪಿದಾಗ ಇಂತಹ ಕಾಯಿಲೆಗಳು ಜನರನ್ನು ಕಾಡಲು ಆರಂಭಿಸುತ್ತದೆ

ಕಾಯಿಲೆಗಳು ಮಾರಕವಾಗದಿದ್ದರೂ, ಮನುಷ್ಯ ತನ್ನ ನಿಯಂತ್ರಣ ತಪ್ಪಿದಾಗ ಇಂತಹ ಕಾಯಿಲೆಗಳು ಜನರನ್ನು ಕಾಡಲು ಆರಂಭಿಸುತ್ತದೆ. ಮುಂದಿನ ದಿನಗಳಲ್ಲಿ ಇನ್ನೊಂದು ಅಲೆ ಎದುರಾಗಲಿದೆ. ಸಾವಿರಾರು ಸಾವುಗಳಾಗಿವೆ, ಎಲ್ಲರೂ ಮೆಡಿಶಿನ್ ಹಾಕಿ ಸತ್ತು ಹೋದವರು. ಇದರ ವಿಷ ಭೂಮಿಯನ್ನು ಸೇರುತ್ತಿದೆ, ಅದು ಹೊರಗೆ ಬರುತ್ತದೆ
ಕುಂಭ ರಾಶಿಯಲ್ಲಿ ಗುರು ಬಂದರೆ ಆ ವರ್ಷವೆಲ್ಲಾ ಮಳೆ ಬೆಳೆ ಜಾಸ್ತಿಯಾಗುತ್ತೆ.

ಹೋದ ಹೊತ್ತಲ್ಲೇ ಸತ್ತ, ಬಿದ್ದ ಎಂದು ನಮ್ಮ ಪೂರ್ವಿಕರು ಹೇಳುತ್ತಿದ್ದರು. ಅಂತಹ ಕಾಯಿಲೆ ಮುಂದೆ ಬರುತ್ತದೆ, ಕುಂಭದಲ್ಲಿ ಗುರು ಬರಲು, ತುಂಬೋ ಕೆರೆಕಟ್ಟೆ ಶಂಭವಿನ ಪದಶಾಕ್ಷಿ ಡಬ್ಬವೆನಿಸಬೇಡಿ ಎನ್ನುವ ಪದ ನಮ್ಮಲ್ಲಿ ಬಳಕೆಯಲ್ಲಿದೆ.


ಹೂತ ಹೆಣಗಳು ಎದ್ದು ಮಾತಾಡುತ್ತಾವೆ. ಪ್ರೇತಗಳ ಭಾದೆ ಎದುರಾಗಲಿದೆ:

ಕಾರ್ತಿಕದ ವರೆಗೂ ಮಳೆ ಸುರಿಯುತ್ತೆ, ಮಳೆ ಬಂದರೆ ಶೀತ, ಇದು ಈಗಿನ ಕಾಯಿಲೆಯ ಸ್ನೇಹಿತ. ಜಗತ್ತಿಗೆ ಅಪಾಯಕಾರಿ ಸನ್ನಿವೇಶ ಎದುರಾಗಲಿದೆ, ದೊಡ್ಡದೊಡ್ಡ ತಲೆಗಳು ಉರುಳಲಿವೆ, ರಾಜಕೀಯ ವಿಪ್ಲವವಾಗಲಿದೆ. ಸಾಮೂಹಿಕ ಸಾವುನೋವುಗಳು ಆಗುತ್ತವೆ, ಹೂತ ಹೆಣಗಳು ಎದ್ದು ಮಾತಾಡುತ್ತಾವೆ. ಪ್ರೇತಗಳ ಭಾದೆ ಎದುರಾಗಲಿದೆ

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 59 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 53 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 70 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 163 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 152 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 45 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ