ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಜ್ವರದಂತಹ ಅನಾರೋಗ್ಯ ಸಮಸ್ಯೆಗಳು ಕಂಡುಬಂದರೆ ಮಕ್ಕಳನ್ನು ಶಾಲೆಗೆ ಕಳುಹಿಸದೆ, ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ಕ್ರಮಗಳನ್ನು ಪಾಲಿಸಬೇಕು. ಸಂಪೂರ್ಣವಾಗಿ ಗುಣಮುಖರಾದ ಬಳಿಕವೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಶಾಲೆಯಲ್ಲಿ ಯಾವುದೇ ಮಗುವಿಗೆ ನೆಗಡಿ, ಜ್ವರ, ಕೆಮ್ಮು ಕಂಡುಬಂದಲ್ಲಿ ಕೂಡಲೇ ಪೋಷಕರಿಗೆ ಮಾಹಿತಿ ನೀಡಿ, ಮನೆಗೆ ಕಳುಹಿಸಬೇಕು. ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯಲ್ಲಿ ಜ್ವರದಂತಹ ಸಮಸ್ಯೆ ಕಾಣಿಸಿಕೊಂಡಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸೂಚಿಸಿದ್ದಾರೆ. ಮಕ್ಕಳ ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಉಸಿರಾಟದ ತೀವ್ರ ಸಮಸ್ಯೆಯ ಎಲ್ಲ ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಸೂಚಿಸಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು, ಶೇ 5ರಷ್ಟು ಶೀತಜ್ವರ ಮಾದರಿ ಅನಾರೋಗ್ಯ ಸಮಸ್ಯೆ ಪ್ರಕರಣಗಳಲ್ಲಿ ಗಂಟಲು ದ್ರವದ ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಕಳುಹಿಸಬೇಕು ಎಂದು ಕೋವಿಡ್ ನೋಡಲ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಅವರು ಸುತ್ತೋಲೆ ಹೊರಡಿಸಿದ್ದು, ಎಲ್ಲ ಕೋವಿಡ್ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗಾಲಯಗಳಲ್ಲಿಯೇ ನಡೆಸಬೇಕು. ಲಭ್ಯವಿರುವ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ, ಹಲವೆಡೆ ಜಲಾವೃತ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.…

    Spread the love

    You Missed

    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    • By admin
    • July 30, 2025
    • 15 views
    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    • By admin
    • July 30, 2025
    • 26 views
    ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    • By admin
    • July 29, 2025
    • 68 views
    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    • By admin
    • July 28, 2025
    • 105 views
    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    • By admin
    • July 28, 2025
    • 158 views
    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

    • By admin
    • July 27, 2025
    • 95 views
    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌