ಕೊರೋನಾ ರೂಪಾಂತರಿ XE ಮತ್ತು ME ಭೀತಿ ತುರ್ತು ಸಭೆ ಕರೆದ ಆರೋಗ್ಯ ಸಚಿವರು!

ಬೆಂಗಳೂರು: ಕೊರೋನಾ ಕಡಿಮೆಯಾಗಿ ಜನ ನಿಟ್ಟುಸಿರು ಬಿಡುವ ನಡುವೆಯೇ ಮತ್ತೊಂದು ಹೊಸ ರೂಪಾಂತರಿ XE ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಜೊತೆ ಆರೋಗ್ಯ ಸಚಿವ ಡಾ.‌ ಕೆ ಸುಧಾಕರ್ ತುರ್ತು ಸಭೆ ನಡೆಸಿದರು.‌ ಸಭೆ ಬಳಿಕ ಮಾತಾನಾಡಿದ ಆರೋಗ್ಯ ಸಚಿವ ಸುಧಾಕರ್, 8 ದೇಶಗಳಲ್ಲಿ ನಾಲ್ಕನೇ ಅಲೆ ಹೆಚ್ಚಾಗಿದ್ದು, XE ಹಾಗೂ ME ಎಂಬ ಹೊಸ ಪ್ರಬೇಧ ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಹರಿಯಾಣ, ದೆಹಲಿಯಲ್ಲಿ ಕಳೆದ ಮೂರು ದಿನಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ತುರ್ತು ಸಭೆ ಮಾಡಿ ಸಮಾಲೋಚನೆ ಮಾಡಿದ್ದು, ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಯಂತೆ ಸೋಂಕು ಹೆಚ್ಚಿರುವ ದೇಶಗಳಿಂದ ಬರುವವರ ಮೇಲೆ ನಿಗಾ ವಹಿಸಲು ಅಭಿಪ್ರಾಯ ವ್ಯಕ್ತವಾಗಿದೆ. ಏರ್ ಪೋರ್ಟ್ ಗೆ ಬಂದ ಬಳಿಕ ಅವರಿಗೆ ಟೆಸ್ಟ್ ಮಾಡಿ, ಮನೆಗೆ ಹೋದ ಬಳಿಕ ಟೆಲಿ ಮಾನಿಟರಿಂಗ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

IIT ಕಾನ್ಪುರ್ ರಿಪೋರ್ಟ್ ‌ಪ್ರಕಾರ ಜೂನ್- ಜುಲೈ ನಲ್ಲಿ ನಾಲ್ಕನೇ ಅಲೆ ಬರುತ್ತೆ ಎಂದು ಹೇಳಿದ್ದಾರೆ. ಆದರೆ ಜನ ಮಾಸ್ಕ್ ಹಾಕೋದನ್ನೇ ಮರೆತಿದ್ದಾರೆ, ಹೀಗಾಗಿ ಮಾಸ್ಕ್ ಬಳಕೆ ಮಾಡೋದು ಮುಂದುವರೆಸಿ. ಬೂಸ್ಟರ್ ಡೋಸ್ ಪಡೆಯುವ ಬಗ್ಗೆ ಜನರಲ್ಲಿ ನಿರ್ಲಕ್ಷ್ಯ ‌ಕಂಡುಬಂದಿದೆ. ಸೋಂಕು ಹೆಚ್ಚಳ ಆಗಿ ನಂತರ ವ್ಯಾಕ್ಸಿನೇಷನ್‌ ಗೆ ಮುಗಿಬೀಳಬೇಡಿ. ಈಗಲೇ ನಿಮ್ಮ ಅವಧಿ ಬಂದಾಗ ಬೂಸ್ಟರ್ ಡೋಸ್ ಪಡೆಯಿರಿ ಎಂದು ವಿನಂತಿಸಿದರು.

ಯಾವ್ಯಾವ ದೇಶದಲ್ಲಿ ಹೆಚ್ಚಳವಾಗ್ತಿದೆ ಸೋಂಕು?:
ದಕ್ಷಿಣ ಕೊರಿಯಾ, ಹಾಂಕಾಂಗ್, ಚೀನಾ ಈ ಮೂರು ದೇಶಗಳಲ್ಲಿ ಸೋಂಕು ಹೆಚ್ಚಿದ್ದು, ಉಳಿದಂತೆ ಯುಕೆ, ಕೊರಿಯಾ, ಜರ್ಮನಿ ಸೇರಿದಂತೆ ಎಂಟು ದೇಶಗಳಿಂದ ಬರುವವರಿಗೆ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ಸುಧಾಕರ್ ಹೇಳಿದ್ದಾರೆ. ಸದ್ಯ ರೋಗದ ತೀವ್ರತೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ಆಯಾ ದೇಶಗಳ ವರದಿ ಕೊಡುವಂತೆ ತಾಂತ್ರಿಕ ಸಲಹಾ ಸಮಿತಿಗೆ ಹೇಳಲಾಗಿದೆ. ಆದರೆ ತಜ್ಞರು ಸ್ಪಷ್ಟವಾಗಿ ಹೇಳಿದ್ದು, ತಡಮಾಡದೇ ಲಸಿಕೆ ಹಾಕಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ ಅಂತ ಸಚಿವರು ವಿವರಿಸಿದರು.

ಖಾಸಗಿ ಆಸ್ಪತ್ರೆಗಳ ಕೋವಿಡ್ ಚಿಕಿತ್ಸಾ ದರ ಪರಿಷ್ಕರಣೆ: ಕೋವಿಡ್ ಸಮಯದಲ್ಲಿ ನಿಗಧಿ ಮಾಡಲಾಗಿದ್ದ ಖಾಸಗಿ ಆಸ್ಪತ್ರೆ ದರ ಪರಿಷ್ಕರಣೆ ವಿಚಾರವಾಗಿ ಮಾತಾನಾಡಿದ ಸಚಿವ ಸುಧಾಕರ್, ಈ ಬಗ್ಗೆ ಸೂಕ್ತ ತೀರ್ಮಾನವನ್ನು ಕೈಗೊಳ್ಳುತ್ತೇವೆ. ಇದಕ್ಕಾಗಿ ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಅಂದರು.‌ ಕೆಲ ಖಾಸಗಿ ಆಸ್ಪತ್ರೆ ಗಳಲ್ಲಿ ಮನಸೋ ಇಚ್ಛೆ ದರ ನಿಗದಿ ಮಾಡ್ತಾರೆ. ಖಾಸಗಿ ಆಸ್ಪತ್ರೆ ಗಳಲ್ಲಿ ಅತಿಯಾದ ಬಿಲ್ಲಿಂಗ್ ಮಾಡೋದು ಗಮನಕ್ಕೆ ಬಂದಿದೆ. ಕೊರೋನಾ ಟೈಂ ನಲ್ಲಿ ಮಾತ್ರವಲ್ಲ ಎಲ್ಲಾ ಸಂದರ್ಭದಲ್ಲೂ ಇದು ಅಪ್ಲೇ ಆಗಬೇಕು ಅಂದರು. ಸಿಟಿ ಸ್ಕ್ಯಾನ್, ಎಂಆರ್ ಐ ಗೆ ದರ ನಿಗದಿ ಮಾಡಲಾಗಿದ್ದು, ಎರಡು ದಿನದಲ್ಲಿ ದರ ನಿಗದಿಯ ಆದೇಶ ಹೊರಡಿಸಲಾಗುತ್ತೆ. ಬಿಪಿಎಲ್ ಗೆ ಒಂದು ದರ ಎಪಿಎಲ್ ಗೆ ಒಂದು ದರ ನಿಗದಿ ಮಾಡಲಾಗಿದೆ. ರೋಗಿಗಳಿಂದ ಹಣ ಹೆಚ್ಚು ಸುಲಿಗೆ ಮಾಡಿದ್ರೇ ಲೈಸೆನ್ಸ್ ರದ್ದು ಮಾಡಲಾಗುತ್ತೆ ಅಂತ ಎಚ್ಚರಿಕೆ ನೀಡಿದರು.

ನಿರ್ಲಕ್ಷ್ಯ ಬಿಟ್ಟು ವ್ಯಾಕ್ಸಿನ್ ಹಾಕಿಸಿಕೊಳ್ಳಿ: ನಾಲ್ಕನೆಯ ಅಲೆ ಬಂದು ಆಸ್ಪತ್ರೆ ಯಲ್ಲಿ ದಾಖಲಾದ ಮೇಲೆ ಲಸಿಕೆ ಹಾಕಿಸಿಕೊಳ್ತೀರಾ‌.! ಯಾಕೆ ಈ ನಿರ್ಲಕ್ಷ್ಯ..? 60 ವರ್ಷ ಮೇಲ್ಪಟ್ಟವರು ಮೂರನೇ ಡೋಸ್ ಪಡೆಯಬೇಕಿದೆ. ಜೊತೆಗೆ ಇನ್ನೂ ಶೇ.2 ರಷ್ಟು ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಮೊದಲ ಡೋಸ್ ನಲ್ಲಿ 102% (4.97 ಕೋಟಿ ), ಎರಡನೇ ಡೋಸ್ ನಲ್ಲಿ 98% (4.77 ಕೋಟಿ) ಪ್ರಗತಿಯಾಗಿದೆ. ಇನ್ನೂ 32 ಲಕ್ಷ ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಇದು ಬಹಳ ನಿರ್ಲಕ್ಷ್ಯದ ಸಂಗತಿಯಾಗಿದ್ದು, ಯಾರೂ ಉದಾಸೀನ ತೋರಬಾರದು ಎಂದು ಸಚಿವ ಸುಧಾಕರ್ ಮನವಿ ಮಾಡಿದರು.

15-17 ವಯೋಮಾನದವರ ಲಸಿಕಾರಣದಲ್ಲಿ ಮೊದಲ ಡೋಸ್ ನಲ್ಲಿ 79% (25.11 ಲಕ್ಷ) ಪ್ರಗತಿಯಾಗಿದೆ. ಇದರ ಗುರಿ 31 ಲಕ್ಷದ ಗುರಿ ಇದೆ. ಎರಡನೇ ಡೋಸ್ ಲಸಿಕಾರಣದಲ್ಲಿ 65% ಪ್ರಗತಿಯಾಗಿದ್ದು, ಇನ್ನೂ 35% ಮಂದಿ ಲಸಿಕೆ ಪಡೆಯಬೇಕಿದೆ. 60 ವರ್ಷ ಮೇಲ್ಪಟ್ಟವರಲ್ಲಿ 49% ಮಂದಿ ಮಾತ್ರ ಮೂರನೇ ಡೋಸ್ ಪಡೆದಿದ್ದಾರೆ. ಇನ್ನೂ 51% ಮಂದಿ ಮೂರನೇ ಡೋಸ್ ಲಸಿಕೆ ಪಡೆದೇ ಇಲ್ಲ. ಈ ವಯೋಮಾನದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೇಗ ಲಸಿಕೆ ಪಡೆಯುವುದು ಸೂಕ್ತ. ಜನಸಾಮಾನ್ಯರು ಸರ್ಕಾರದಂತೆಯೇ ಜವಾಬ್ದಾರಿ ಹೊಂದಿರಬೇಕು. ಆಗ ಮಾತ್ರ ಆರೋಗ್ಯ ತುರ್ತು ಪರಿಸ್ಥಿತಿ ನಿಭಾಯಿಸಲು ಸಾಧ್ಯ 12-14 ವಯೋಮಾನದ 20 ಲಕ್ಷ ಮಕ್ಕಳು ರಾಜ್ಯದಲ್ಲಿದ್ದಾರೆ. ಈ ಪೈಕಿ 13.96 ಲಕ್ಷ ಮಕ್ಕಳು (69%) ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಉಳಿದ ಮಕ್ಕಳು ಬೇಗನೆ ಲಸಿಕೆ ಪಡೆಯಬೇಕಿದೆ ಎಂದು ತಿಳಿಸಿದರು.

Spread the love
  • Related Posts

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆಯ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿದು ಬಿದ್ದು ರಿಕ್ಷಾ ಜಂಖಂಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನ 3.30 ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ‌. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಸಂಪೂರ್ಣ…

    Spread the love

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ರಾಜ್ಯಾದ್ಯಂತ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ಶೈಕ್ಷಣಿಕ ರಂಗದಲ್ಲಿ ತನ್ನ ಸಾಧನೆಗಳಿಂದ ನೂತನ ಮೈಲಿಗಲ್ಲು ಸ್ಥಾಪಿಸಿದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿನೂತನ ಅವಕಾಶ ಕಲ್ಪಿಸಿದೆ. 7…

    Spread the love

    You Missed

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    • By admin
    • March 28, 2026
    • 52 views
    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 34 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 25 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    • By admin
    • March 23, 2026
    • 79 views
    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 92 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    • By admin
    • March 22, 2026
    • 49 views
    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ