ಕೊರೋನಾ ರೂಪಾಂತರಿ XE ಮತ್ತು ME ಭೀತಿ ತುರ್ತು ಸಭೆ ಕರೆದ ಆರೋಗ್ಯ ಸಚಿವರು!

ಬೆಂಗಳೂರು: ಕೊರೋನಾ ಕಡಿಮೆಯಾಗಿ ಜನ ನಿಟ್ಟುಸಿರು ಬಿಡುವ ನಡುವೆಯೇ ಮತ್ತೊಂದು ಹೊಸ ರೂಪಾಂತರಿ XE ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಜೊತೆ ಆರೋಗ್ಯ ಸಚಿವ ಡಾ.‌ ಕೆ ಸುಧಾಕರ್ ತುರ್ತು ಸಭೆ ನಡೆಸಿದರು.‌ ಸಭೆ ಬಳಿಕ ಮಾತಾನಾಡಿದ ಆರೋಗ್ಯ ಸಚಿವ ಸುಧಾಕರ್, 8 ದೇಶಗಳಲ್ಲಿ ನಾಲ್ಕನೇ ಅಲೆ ಹೆಚ್ಚಾಗಿದ್ದು, XE ಹಾಗೂ ME ಎಂಬ ಹೊಸ ಪ್ರಬೇಧ ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಹರಿಯಾಣ, ದೆಹಲಿಯಲ್ಲಿ ಕಳೆದ ಮೂರು ದಿನಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ತುರ್ತು ಸಭೆ ಮಾಡಿ ಸಮಾಲೋಚನೆ ಮಾಡಿದ್ದು, ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಯಂತೆ ಸೋಂಕು ಹೆಚ್ಚಿರುವ ದೇಶಗಳಿಂದ ಬರುವವರ ಮೇಲೆ ನಿಗಾ ವಹಿಸಲು ಅಭಿಪ್ರಾಯ ವ್ಯಕ್ತವಾಗಿದೆ. ಏರ್ ಪೋರ್ಟ್ ಗೆ ಬಂದ ಬಳಿಕ ಅವರಿಗೆ ಟೆಸ್ಟ್ ಮಾಡಿ, ಮನೆಗೆ ಹೋದ ಬಳಿಕ ಟೆಲಿ ಮಾನಿಟರಿಂಗ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

IIT ಕಾನ್ಪುರ್ ರಿಪೋರ್ಟ್ ‌ಪ್ರಕಾರ ಜೂನ್- ಜುಲೈ ನಲ್ಲಿ ನಾಲ್ಕನೇ ಅಲೆ ಬರುತ್ತೆ ಎಂದು ಹೇಳಿದ್ದಾರೆ. ಆದರೆ ಜನ ಮಾಸ್ಕ್ ಹಾಕೋದನ್ನೇ ಮರೆತಿದ್ದಾರೆ, ಹೀಗಾಗಿ ಮಾಸ್ಕ್ ಬಳಕೆ ಮಾಡೋದು ಮುಂದುವರೆಸಿ. ಬೂಸ್ಟರ್ ಡೋಸ್ ಪಡೆಯುವ ಬಗ್ಗೆ ಜನರಲ್ಲಿ ನಿರ್ಲಕ್ಷ್ಯ ‌ಕಂಡುಬಂದಿದೆ. ಸೋಂಕು ಹೆಚ್ಚಳ ಆಗಿ ನಂತರ ವ್ಯಾಕ್ಸಿನೇಷನ್‌ ಗೆ ಮುಗಿಬೀಳಬೇಡಿ. ಈಗಲೇ ನಿಮ್ಮ ಅವಧಿ ಬಂದಾಗ ಬೂಸ್ಟರ್ ಡೋಸ್ ಪಡೆಯಿರಿ ಎಂದು ವಿನಂತಿಸಿದರು.

ಯಾವ್ಯಾವ ದೇಶದಲ್ಲಿ ಹೆಚ್ಚಳವಾಗ್ತಿದೆ ಸೋಂಕು?:
ದಕ್ಷಿಣ ಕೊರಿಯಾ, ಹಾಂಕಾಂಗ್, ಚೀನಾ ಈ ಮೂರು ದೇಶಗಳಲ್ಲಿ ಸೋಂಕು ಹೆಚ್ಚಿದ್ದು, ಉಳಿದಂತೆ ಯುಕೆ, ಕೊರಿಯಾ, ಜರ್ಮನಿ ಸೇರಿದಂತೆ ಎಂಟು ದೇಶಗಳಿಂದ ಬರುವವರಿಗೆ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ಸುಧಾಕರ್ ಹೇಳಿದ್ದಾರೆ. ಸದ್ಯ ರೋಗದ ತೀವ್ರತೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ಆಯಾ ದೇಶಗಳ ವರದಿ ಕೊಡುವಂತೆ ತಾಂತ್ರಿಕ ಸಲಹಾ ಸಮಿತಿಗೆ ಹೇಳಲಾಗಿದೆ. ಆದರೆ ತಜ್ಞರು ಸ್ಪಷ್ಟವಾಗಿ ಹೇಳಿದ್ದು, ತಡಮಾಡದೇ ಲಸಿಕೆ ಹಾಕಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ ಅಂತ ಸಚಿವರು ವಿವರಿಸಿದರು.

ಖಾಸಗಿ ಆಸ್ಪತ್ರೆಗಳ ಕೋವಿಡ್ ಚಿಕಿತ್ಸಾ ದರ ಪರಿಷ್ಕರಣೆ: ಕೋವಿಡ್ ಸಮಯದಲ್ಲಿ ನಿಗಧಿ ಮಾಡಲಾಗಿದ್ದ ಖಾಸಗಿ ಆಸ್ಪತ್ರೆ ದರ ಪರಿಷ್ಕರಣೆ ವಿಚಾರವಾಗಿ ಮಾತಾನಾಡಿದ ಸಚಿವ ಸುಧಾಕರ್, ಈ ಬಗ್ಗೆ ಸೂಕ್ತ ತೀರ್ಮಾನವನ್ನು ಕೈಗೊಳ್ಳುತ್ತೇವೆ. ಇದಕ್ಕಾಗಿ ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಅಂದರು.‌ ಕೆಲ ಖಾಸಗಿ ಆಸ್ಪತ್ರೆ ಗಳಲ್ಲಿ ಮನಸೋ ಇಚ್ಛೆ ದರ ನಿಗದಿ ಮಾಡ್ತಾರೆ. ಖಾಸಗಿ ಆಸ್ಪತ್ರೆ ಗಳಲ್ಲಿ ಅತಿಯಾದ ಬಿಲ್ಲಿಂಗ್ ಮಾಡೋದು ಗಮನಕ್ಕೆ ಬಂದಿದೆ. ಕೊರೋನಾ ಟೈಂ ನಲ್ಲಿ ಮಾತ್ರವಲ್ಲ ಎಲ್ಲಾ ಸಂದರ್ಭದಲ್ಲೂ ಇದು ಅಪ್ಲೇ ಆಗಬೇಕು ಅಂದರು. ಸಿಟಿ ಸ್ಕ್ಯಾನ್, ಎಂಆರ್ ಐ ಗೆ ದರ ನಿಗದಿ ಮಾಡಲಾಗಿದ್ದು, ಎರಡು ದಿನದಲ್ಲಿ ದರ ನಿಗದಿಯ ಆದೇಶ ಹೊರಡಿಸಲಾಗುತ್ತೆ. ಬಿಪಿಎಲ್ ಗೆ ಒಂದು ದರ ಎಪಿಎಲ್ ಗೆ ಒಂದು ದರ ನಿಗದಿ ಮಾಡಲಾಗಿದೆ. ರೋಗಿಗಳಿಂದ ಹಣ ಹೆಚ್ಚು ಸುಲಿಗೆ ಮಾಡಿದ್ರೇ ಲೈಸೆನ್ಸ್ ರದ್ದು ಮಾಡಲಾಗುತ್ತೆ ಅಂತ ಎಚ್ಚರಿಕೆ ನೀಡಿದರು.

ನಿರ್ಲಕ್ಷ್ಯ ಬಿಟ್ಟು ವ್ಯಾಕ್ಸಿನ್ ಹಾಕಿಸಿಕೊಳ್ಳಿ: ನಾಲ್ಕನೆಯ ಅಲೆ ಬಂದು ಆಸ್ಪತ್ರೆ ಯಲ್ಲಿ ದಾಖಲಾದ ಮೇಲೆ ಲಸಿಕೆ ಹಾಕಿಸಿಕೊಳ್ತೀರಾ‌.! ಯಾಕೆ ಈ ನಿರ್ಲಕ್ಷ್ಯ..? 60 ವರ್ಷ ಮೇಲ್ಪಟ್ಟವರು ಮೂರನೇ ಡೋಸ್ ಪಡೆಯಬೇಕಿದೆ. ಜೊತೆಗೆ ಇನ್ನೂ ಶೇ.2 ರಷ್ಟು ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಮೊದಲ ಡೋಸ್ ನಲ್ಲಿ 102% (4.97 ಕೋಟಿ ), ಎರಡನೇ ಡೋಸ್ ನಲ್ಲಿ 98% (4.77 ಕೋಟಿ) ಪ್ರಗತಿಯಾಗಿದೆ. ಇನ್ನೂ 32 ಲಕ್ಷ ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಇದು ಬಹಳ ನಿರ್ಲಕ್ಷ್ಯದ ಸಂಗತಿಯಾಗಿದ್ದು, ಯಾರೂ ಉದಾಸೀನ ತೋರಬಾರದು ಎಂದು ಸಚಿವ ಸುಧಾಕರ್ ಮನವಿ ಮಾಡಿದರು.

15-17 ವಯೋಮಾನದವರ ಲಸಿಕಾರಣದಲ್ಲಿ ಮೊದಲ ಡೋಸ್ ನಲ್ಲಿ 79% (25.11 ಲಕ್ಷ) ಪ್ರಗತಿಯಾಗಿದೆ. ಇದರ ಗುರಿ 31 ಲಕ್ಷದ ಗುರಿ ಇದೆ. ಎರಡನೇ ಡೋಸ್ ಲಸಿಕಾರಣದಲ್ಲಿ 65% ಪ್ರಗತಿಯಾಗಿದ್ದು, ಇನ್ನೂ 35% ಮಂದಿ ಲಸಿಕೆ ಪಡೆಯಬೇಕಿದೆ. 60 ವರ್ಷ ಮೇಲ್ಪಟ್ಟವರಲ್ಲಿ 49% ಮಂದಿ ಮಾತ್ರ ಮೂರನೇ ಡೋಸ್ ಪಡೆದಿದ್ದಾರೆ. ಇನ್ನೂ 51% ಮಂದಿ ಮೂರನೇ ಡೋಸ್ ಲಸಿಕೆ ಪಡೆದೇ ಇಲ್ಲ. ಈ ವಯೋಮಾನದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೇಗ ಲಸಿಕೆ ಪಡೆಯುವುದು ಸೂಕ್ತ. ಜನಸಾಮಾನ್ಯರು ಸರ್ಕಾರದಂತೆಯೇ ಜವಾಬ್ದಾರಿ ಹೊಂದಿರಬೇಕು. ಆಗ ಮಾತ್ರ ಆರೋಗ್ಯ ತುರ್ತು ಪರಿಸ್ಥಿತಿ ನಿಭಾಯಿಸಲು ಸಾಧ್ಯ 12-14 ವಯೋಮಾನದ 20 ಲಕ್ಷ ಮಕ್ಕಳು ರಾಜ್ಯದಲ್ಲಿದ್ದಾರೆ. ಈ ಪೈಕಿ 13.96 ಲಕ್ಷ ಮಕ್ಕಳು (69%) ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಉಳಿದ ಮಕ್ಕಳು ಬೇಗನೆ ಲಸಿಕೆ ಪಡೆಯಬೇಕಿದೆ ಎಂದು ತಿಳಿಸಿದರು.

Spread the love
  • Related Posts

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ D. K. Shivakumar ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲ Thaawarchand Gehlot ಅಧಿಕೃತ ಆಹ್ವಾನ ನೀಡಲಾಗಿದೆ. ಮೇ 30, 2026ರಂದು ರಾಜ್ಯಪಾಲರು ಹೊರಡಿಸಿರುವ ಪತ್ರದಲ್ಲಿ, ಡಿ.ಕೆ. ಶಿವಕುಮಾರ್ ಅವರು ಸರ್ಕಾರ ರಚಿಸಲು…

    Spread the love

    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

    ಧರ್ಮಸ್ಥಳ: ಗ್ರಾ ಮೀಣ ಪ್ರದೇಶದ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ನಿರ್ಮಾಣಗೊಂಡಿ ರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ ಉದ್ಘಾಟನಾ ಸಮಾರಂಭ ಮೇ 31ರಂದು ಬೆಳಗ್ಗೆ 10…

    Spread the love

    You Missed

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    • By admin
    • May 30, 2026
    • 19 views
    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

    • By admin
    • May 30, 2026
    • 74 views
    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 65 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2373 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 621 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 240 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ