ಕೊರೋನಾ ರೂಪಾಂತರಿ XE ಮತ್ತು ME ಭೀತಿ ತುರ್ತು ಸಭೆ ಕರೆದ ಆರೋಗ್ಯ ಸಚಿವರು!

ಬೆಂಗಳೂರು: ಕೊರೋನಾ ಕಡಿಮೆಯಾಗಿ ಜನ ನಿಟ್ಟುಸಿರು ಬಿಡುವ ನಡುವೆಯೇ ಮತ್ತೊಂದು ಹೊಸ ರೂಪಾಂತರಿ XE ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಜೊತೆ ಆರೋಗ್ಯ ಸಚಿವ ಡಾ.‌ ಕೆ ಸುಧಾಕರ್ ತುರ್ತು ಸಭೆ ನಡೆಸಿದರು.‌ ಸಭೆ ಬಳಿಕ ಮಾತಾನಾಡಿದ ಆರೋಗ್ಯ ಸಚಿವ ಸುಧಾಕರ್, 8 ದೇಶಗಳಲ್ಲಿ ನಾಲ್ಕನೇ ಅಲೆ ಹೆಚ್ಚಾಗಿದ್ದು, XE ಹಾಗೂ ME ಎಂಬ ಹೊಸ ಪ್ರಬೇಧ ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಹರಿಯಾಣ, ದೆಹಲಿಯಲ್ಲಿ ಕಳೆದ ಮೂರು ದಿನಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ತುರ್ತು ಸಭೆ ಮಾಡಿ ಸಮಾಲೋಚನೆ ಮಾಡಿದ್ದು, ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಯಂತೆ ಸೋಂಕು ಹೆಚ್ಚಿರುವ ದೇಶಗಳಿಂದ ಬರುವವರ ಮೇಲೆ ನಿಗಾ ವಹಿಸಲು ಅಭಿಪ್ರಾಯ ವ್ಯಕ್ತವಾಗಿದೆ. ಏರ್ ಪೋರ್ಟ್ ಗೆ ಬಂದ ಬಳಿಕ ಅವರಿಗೆ ಟೆಸ್ಟ್ ಮಾಡಿ, ಮನೆಗೆ ಹೋದ ಬಳಿಕ ಟೆಲಿ ಮಾನಿಟರಿಂಗ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

IIT ಕಾನ್ಪುರ್ ರಿಪೋರ್ಟ್ ‌ಪ್ರಕಾರ ಜೂನ್- ಜುಲೈ ನಲ್ಲಿ ನಾಲ್ಕನೇ ಅಲೆ ಬರುತ್ತೆ ಎಂದು ಹೇಳಿದ್ದಾರೆ. ಆದರೆ ಜನ ಮಾಸ್ಕ್ ಹಾಕೋದನ್ನೇ ಮರೆತಿದ್ದಾರೆ, ಹೀಗಾಗಿ ಮಾಸ್ಕ್ ಬಳಕೆ ಮಾಡೋದು ಮುಂದುವರೆಸಿ. ಬೂಸ್ಟರ್ ಡೋಸ್ ಪಡೆಯುವ ಬಗ್ಗೆ ಜನರಲ್ಲಿ ನಿರ್ಲಕ್ಷ್ಯ ‌ಕಂಡುಬಂದಿದೆ. ಸೋಂಕು ಹೆಚ್ಚಳ ಆಗಿ ನಂತರ ವ್ಯಾಕ್ಸಿನೇಷನ್‌ ಗೆ ಮುಗಿಬೀಳಬೇಡಿ. ಈಗಲೇ ನಿಮ್ಮ ಅವಧಿ ಬಂದಾಗ ಬೂಸ್ಟರ್ ಡೋಸ್ ಪಡೆಯಿರಿ ಎಂದು ವಿನಂತಿಸಿದರು.

ಯಾವ್ಯಾವ ದೇಶದಲ್ಲಿ ಹೆಚ್ಚಳವಾಗ್ತಿದೆ ಸೋಂಕು?:
ದಕ್ಷಿಣ ಕೊರಿಯಾ, ಹಾಂಕಾಂಗ್, ಚೀನಾ ಈ ಮೂರು ದೇಶಗಳಲ್ಲಿ ಸೋಂಕು ಹೆಚ್ಚಿದ್ದು, ಉಳಿದಂತೆ ಯುಕೆ, ಕೊರಿಯಾ, ಜರ್ಮನಿ ಸೇರಿದಂತೆ ಎಂಟು ದೇಶಗಳಿಂದ ಬರುವವರಿಗೆ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ಸುಧಾಕರ್ ಹೇಳಿದ್ದಾರೆ. ಸದ್ಯ ರೋಗದ ತೀವ್ರತೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ಆಯಾ ದೇಶಗಳ ವರದಿ ಕೊಡುವಂತೆ ತಾಂತ್ರಿಕ ಸಲಹಾ ಸಮಿತಿಗೆ ಹೇಳಲಾಗಿದೆ. ಆದರೆ ತಜ್ಞರು ಸ್ಪಷ್ಟವಾಗಿ ಹೇಳಿದ್ದು, ತಡಮಾಡದೇ ಲಸಿಕೆ ಹಾಕಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ ಅಂತ ಸಚಿವರು ವಿವರಿಸಿದರು.

ಖಾಸಗಿ ಆಸ್ಪತ್ರೆಗಳ ಕೋವಿಡ್ ಚಿಕಿತ್ಸಾ ದರ ಪರಿಷ್ಕರಣೆ: ಕೋವಿಡ್ ಸಮಯದಲ್ಲಿ ನಿಗಧಿ ಮಾಡಲಾಗಿದ್ದ ಖಾಸಗಿ ಆಸ್ಪತ್ರೆ ದರ ಪರಿಷ್ಕರಣೆ ವಿಚಾರವಾಗಿ ಮಾತಾನಾಡಿದ ಸಚಿವ ಸುಧಾಕರ್, ಈ ಬಗ್ಗೆ ಸೂಕ್ತ ತೀರ್ಮಾನವನ್ನು ಕೈಗೊಳ್ಳುತ್ತೇವೆ. ಇದಕ್ಕಾಗಿ ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಅಂದರು.‌ ಕೆಲ ಖಾಸಗಿ ಆಸ್ಪತ್ರೆ ಗಳಲ್ಲಿ ಮನಸೋ ಇಚ್ಛೆ ದರ ನಿಗದಿ ಮಾಡ್ತಾರೆ. ಖಾಸಗಿ ಆಸ್ಪತ್ರೆ ಗಳಲ್ಲಿ ಅತಿಯಾದ ಬಿಲ್ಲಿಂಗ್ ಮಾಡೋದು ಗಮನಕ್ಕೆ ಬಂದಿದೆ. ಕೊರೋನಾ ಟೈಂ ನಲ್ಲಿ ಮಾತ್ರವಲ್ಲ ಎಲ್ಲಾ ಸಂದರ್ಭದಲ್ಲೂ ಇದು ಅಪ್ಲೇ ಆಗಬೇಕು ಅಂದರು. ಸಿಟಿ ಸ್ಕ್ಯಾನ್, ಎಂಆರ್ ಐ ಗೆ ದರ ನಿಗದಿ ಮಾಡಲಾಗಿದ್ದು, ಎರಡು ದಿನದಲ್ಲಿ ದರ ನಿಗದಿಯ ಆದೇಶ ಹೊರಡಿಸಲಾಗುತ್ತೆ. ಬಿಪಿಎಲ್ ಗೆ ಒಂದು ದರ ಎಪಿಎಲ್ ಗೆ ಒಂದು ದರ ನಿಗದಿ ಮಾಡಲಾಗಿದೆ. ರೋಗಿಗಳಿಂದ ಹಣ ಹೆಚ್ಚು ಸುಲಿಗೆ ಮಾಡಿದ್ರೇ ಲೈಸೆನ್ಸ್ ರದ್ದು ಮಾಡಲಾಗುತ್ತೆ ಅಂತ ಎಚ್ಚರಿಕೆ ನೀಡಿದರು.

ನಿರ್ಲಕ್ಷ್ಯ ಬಿಟ್ಟು ವ್ಯಾಕ್ಸಿನ್ ಹಾಕಿಸಿಕೊಳ್ಳಿ: ನಾಲ್ಕನೆಯ ಅಲೆ ಬಂದು ಆಸ್ಪತ್ರೆ ಯಲ್ಲಿ ದಾಖಲಾದ ಮೇಲೆ ಲಸಿಕೆ ಹಾಕಿಸಿಕೊಳ್ತೀರಾ‌.! ಯಾಕೆ ಈ ನಿರ್ಲಕ್ಷ್ಯ..? 60 ವರ್ಷ ಮೇಲ್ಪಟ್ಟವರು ಮೂರನೇ ಡೋಸ್ ಪಡೆಯಬೇಕಿದೆ. ಜೊತೆಗೆ ಇನ್ನೂ ಶೇ.2 ರಷ್ಟು ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಮೊದಲ ಡೋಸ್ ನಲ್ಲಿ 102% (4.97 ಕೋಟಿ ), ಎರಡನೇ ಡೋಸ್ ನಲ್ಲಿ 98% (4.77 ಕೋಟಿ) ಪ್ರಗತಿಯಾಗಿದೆ. ಇನ್ನೂ 32 ಲಕ್ಷ ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಇದು ಬಹಳ ನಿರ್ಲಕ್ಷ್ಯದ ಸಂಗತಿಯಾಗಿದ್ದು, ಯಾರೂ ಉದಾಸೀನ ತೋರಬಾರದು ಎಂದು ಸಚಿವ ಸುಧಾಕರ್ ಮನವಿ ಮಾಡಿದರು.

15-17 ವಯೋಮಾನದವರ ಲಸಿಕಾರಣದಲ್ಲಿ ಮೊದಲ ಡೋಸ್ ನಲ್ಲಿ 79% (25.11 ಲಕ್ಷ) ಪ್ರಗತಿಯಾಗಿದೆ. ಇದರ ಗುರಿ 31 ಲಕ್ಷದ ಗುರಿ ಇದೆ. ಎರಡನೇ ಡೋಸ್ ಲಸಿಕಾರಣದಲ್ಲಿ 65% ಪ್ರಗತಿಯಾಗಿದ್ದು, ಇನ್ನೂ 35% ಮಂದಿ ಲಸಿಕೆ ಪಡೆಯಬೇಕಿದೆ. 60 ವರ್ಷ ಮೇಲ್ಪಟ್ಟವರಲ್ಲಿ 49% ಮಂದಿ ಮಾತ್ರ ಮೂರನೇ ಡೋಸ್ ಪಡೆದಿದ್ದಾರೆ. ಇನ್ನೂ 51% ಮಂದಿ ಮೂರನೇ ಡೋಸ್ ಲಸಿಕೆ ಪಡೆದೇ ಇಲ್ಲ. ಈ ವಯೋಮಾನದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೇಗ ಲಸಿಕೆ ಪಡೆಯುವುದು ಸೂಕ್ತ. ಜನಸಾಮಾನ್ಯರು ಸರ್ಕಾರದಂತೆಯೇ ಜವಾಬ್ದಾರಿ ಹೊಂದಿರಬೇಕು. ಆಗ ಮಾತ್ರ ಆರೋಗ್ಯ ತುರ್ತು ಪರಿಸ್ಥಿತಿ ನಿಭಾಯಿಸಲು ಸಾಧ್ಯ 12-14 ವಯೋಮಾನದ 20 ಲಕ್ಷ ಮಕ್ಕಳು ರಾಜ್ಯದಲ್ಲಿದ್ದಾರೆ. ಈ ಪೈಕಿ 13.96 ಲಕ್ಷ ಮಕ್ಕಳು (69%) ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಉಳಿದ ಮಕ್ಕಳು ಬೇಗನೆ ಲಸಿಕೆ ಪಡೆಯಬೇಕಿದೆ ಎಂದು ತಿಳಿಸಿದರು.

Spread the love
  • Related Posts

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    You Missed

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 5 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 8 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 14 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 28 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 13 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 17 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ