ಯೆನೇಪೋಯಾ ಶಿಕ್ಷಣ ಸಂಸ್ಥೆಗೆ ಕೊರೋನಾ ಶಾಕ್! 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಆಡಳಿತ ಮಂಡಳಿಯ ನಿರ್ಧಾರ!

ಮಂಗಳೂರು: ಯೆನೇಪೋಯಾ ಶಿಕ್ಷಣ ಸಂಸ್ಥೆಗೆ ಕೊರೋನಾ ಶಾಕ್ ನೀಡಿದ್ದು ಕಳೆದ 4ದಿನಗಳಲ್ಲಿ 20ಕ್ಕೂ ಅಧಿಕ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಆಡಳಿತ ಮಂಡಳಿಯ ನಿರ್ಧರಿಸಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯುನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ದಿಢೀರ್ ಆಗಿ ಮುಚ್ಚಲಾಗಿದೆ. 

ಈ ಬಗ್ಗೆ ಯೇನಪೋಯ ವಿವಿಯ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಆಯಾ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ಮುಂದಿನ ಆದೇಶದ ವರೆಗೆ ಕಾಲೇಜು ಮುಚ್ಚುವಂತೆ ಸೂಚನೆ ನೀಡಿದ್ದಾರೆ. 

ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಮತ್ತು ರೀಸರ್ಚ್ ಸೆಂಟರ್, ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್, ಆಯುರ್ವೇದ ಕಾಲೇಜು, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಕಾಲೇಜು ವಿಭಾಗವನ್ನು ಮುಚ್ಚುವಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ. 

Not wearing a mask is now a public offence in Bengaluru - The Week

ಹೀಗಿದ್ದರೂ ಪಿಜಿ ಕಲಿಯುವ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ ಕಾಲೇಜಿಗೆ ಹಾಜರಾಗಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಯೂ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಿರುವ ರಿಜಿಸ್ಟ್ರಾರ್, ಆದೇಶ ಪತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಅದರ ಕಾರಣ ಕಾಲೇಜು ಬಂದ್ ಮಾಡುತ್ತಿದ್ದೇವೆ ಎಂದೂ ತಿಳಿಸಿಲ್ಲ. 

ಮಾಹಿತಿ ಪ್ರಕಾರ ಯೇನಪೋಯ ಕಾಲೇಜಿನ ಹಾಸ್ಟೆಲಿನಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿತ್ತು. ಆದರೆ, ಇಂದು ಅತಿ ಹೆಚ್ಚು ಮಂದಿಗೆ ಸೋಂಕು ಹರಡಿರುವ ಸಾಧ್ಯತೆಯಿದ್ದು ಇಡೀ ಮೆಡಿಕಲ್ ಕಾಲೇಜನ್ನೇ ಬಂದ್ ಮಾಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ