ಕೋವಿಶೀಲ್ಡ್ ಲಸಿಕೆ 300 ರುಪಾಯಿಗಳಿಗೆ ಒದಗಿಸಲು ಸೇರಮ್ ಸಮ್ಮತಿ

ಮುಂಬೈ: ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ, ಆಸ್ಟ್ರಾಜೆನೆಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಲಸಿಕೆ ಕೋವಿಶೀಲ್ಡ್​ನ ಪ್ರತಿ ಡೋಸ್​ ₹ 300ಕ್ಕೆ ರಾಜ್ಯ ಸರ್ಕಾರಕ್ಕೆ ಒದಗಿಸಲು ಪುಣೆಯ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನಾವಾಲಾ ಒಪ್ಪಿಕೊಂಡಿದ್ದಾರೆ.

ಕಂಪನಿಯು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇರುವ ಸಂಪನ್ಮೂಲದಲ್ಲಿಯೇ ಹೆಚ್ಚಿನ ಸಂಖ್ಯೆಯ ಲಸಿಕೆ ಬಾಟಲಿಗಳನ್ನು ಖರೀದಿಸಲು ರಾಜ್ಯಗಳಿಗೆ ಅನುಕೂಲ ಮಾಡಿಕೊಡಲೆಂದು ‘ಉದಾರ’ ಮನೋಭಾವದಿಂದ ಕಂಪನಿಯು ಲಸಿಕೆಯ ಬೆಲೆಯಲ್ಲಿ ಶೇ 25ರಷ್ಟು ರಿಯಾಯ್ತಿ ನೀಡಲು ನಿರ್ಧರಿಸಿದೆ.

ಪ್ರತಿ ಡೋಸ್​ ಇನ್ನು ಮುಂದೆ ರಾಜ್ಯ ಸರ್ಕಾರಗಳಿಗೆ ₹ 300ಕ್ಕೆ ಲಭ್ಯವಾಗಲಿದೆ ಎಂದು ಹೇಳಿದೆ.

ದೇಶದ ಅತಿದೊಡ್ಡ ಲಸಿಕೆ ಉತ್ಪಾದಕಾ ಕಂಪನಿಯಾಗಿರುವ ಸೆರಮ್ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ಈ ಹಿಂದೆ ರಾಜ್ಯ ಸರ್ಕಾರಗಳಿಗೆ ಕೋವಿಶೀಲ್ಡ್​ನ ಪ್ರತಿ ಡೋಸ್​ ₹ 400ಕ್ಕೆ ಒದಗಿಸಲು ಒಪ್ಪಿಕೊಂಡಿತ್ತು. ಖಾಸಗಿ ಆಸ್ಪತ್ರೆಗಳಿಗೆ ಈ ದರ ₹ 600 ಆಗಿರುತ್ತದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಕ್ಸ್​ಫರ್ಡ್​-ಆಸ್ಟ್ರಜೆನೆಕಾ ಲಸಿಕೆಯ ಭಾರತೀಯ ಆವೃತ್ತಿಯಾಗಿರುವ ಕೋವಿಶೀಲ್ಡ್​ ಲಸಿಕೆಯನ್ನು ಭಾರತದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ನೀಡಲಾಗುತ್ತಿದೆ. ಇದರ ಜೊತೆಗೆ ಭಾರತ್​ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನೂ ಭಾರತದಲ್ಲಿ ನೀಡಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ಕೋವ್ಯಾಕ್ಸಿನ್ ₹ 600ಕ್ಕೆ ಸಿಗುತ್ತಿದೆ. ಖಾಸಗಿ ಆಸ್ಪತ್ರೆಗಳು ₹ 1200 ಪಾವತಿಸಿ ಪಡೆದುಕೊಳ್ಳುತ್ತಿವೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ