ಕೋವಿಶೀಲ್ಡ್ ಲಸಿಕೆ 300 ರುಪಾಯಿಗಳಿಗೆ ಒದಗಿಸಲು ಸೇರಮ್ ಸಮ್ಮತಿ

ಮುಂಬೈ: ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ, ಆಸ್ಟ್ರಾಜೆನೆಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಲಸಿಕೆ ಕೋವಿಶೀಲ್ಡ್​ನ ಪ್ರತಿ ಡೋಸ್​ ₹ 300ಕ್ಕೆ ರಾಜ್ಯ ಸರ್ಕಾರಕ್ಕೆ ಒದಗಿಸಲು ಪುಣೆಯ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನಾವಾಲಾ ಒಪ್ಪಿಕೊಂಡಿದ್ದಾರೆ.

ಕಂಪನಿಯು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇರುವ ಸಂಪನ್ಮೂಲದಲ್ಲಿಯೇ ಹೆಚ್ಚಿನ ಸಂಖ್ಯೆಯ ಲಸಿಕೆ ಬಾಟಲಿಗಳನ್ನು ಖರೀದಿಸಲು ರಾಜ್ಯಗಳಿಗೆ ಅನುಕೂಲ ಮಾಡಿಕೊಡಲೆಂದು ‘ಉದಾರ’ ಮನೋಭಾವದಿಂದ ಕಂಪನಿಯು ಲಸಿಕೆಯ ಬೆಲೆಯಲ್ಲಿ ಶೇ 25ರಷ್ಟು ರಿಯಾಯ್ತಿ ನೀಡಲು ನಿರ್ಧರಿಸಿದೆ.

ಪ್ರತಿ ಡೋಸ್​ ಇನ್ನು ಮುಂದೆ ರಾಜ್ಯ ಸರ್ಕಾರಗಳಿಗೆ ₹ 300ಕ್ಕೆ ಲಭ್ಯವಾಗಲಿದೆ ಎಂದು ಹೇಳಿದೆ.

ದೇಶದ ಅತಿದೊಡ್ಡ ಲಸಿಕೆ ಉತ್ಪಾದಕಾ ಕಂಪನಿಯಾಗಿರುವ ಸೆರಮ್ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ಈ ಹಿಂದೆ ರಾಜ್ಯ ಸರ್ಕಾರಗಳಿಗೆ ಕೋವಿಶೀಲ್ಡ್​ನ ಪ್ರತಿ ಡೋಸ್​ ₹ 400ಕ್ಕೆ ಒದಗಿಸಲು ಒಪ್ಪಿಕೊಂಡಿತ್ತು. ಖಾಸಗಿ ಆಸ್ಪತ್ರೆಗಳಿಗೆ ಈ ದರ ₹ 600 ಆಗಿರುತ್ತದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಕ್ಸ್​ಫರ್ಡ್​-ಆಸ್ಟ್ರಜೆನೆಕಾ ಲಸಿಕೆಯ ಭಾರತೀಯ ಆವೃತ್ತಿಯಾಗಿರುವ ಕೋವಿಶೀಲ್ಡ್​ ಲಸಿಕೆಯನ್ನು ಭಾರತದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ನೀಡಲಾಗುತ್ತಿದೆ. ಇದರ ಜೊತೆಗೆ ಭಾರತ್​ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನೂ ಭಾರತದಲ್ಲಿ ನೀಡಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ಕೋವ್ಯಾಕ್ಸಿನ್ ₹ 600ಕ್ಕೆ ಸಿಗುತ್ತಿದೆ. ಖಾಸಗಿ ಆಸ್ಪತ್ರೆಗಳು ₹ 1200 ಪಾವತಿಸಿ ಪಡೆದುಕೊಳ್ಳುತ್ತಿವೆ.

Spread the love
  • Related Posts

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.…

    Spread the love

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Spread the…

    Spread the love

    You Missed

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 9 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 72 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 66 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 72 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 168 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 153 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ