ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಒಂಟೆ, ಗೋವುಗಳ ಹತ್ಯೆಗೆ ಬ್ರೇಕ್.?

ಬೆಂಗಳೂರು : ರಾಜ್ಯಾದ್ಯಂತ ಬಕ್ರೀದ್ ಸೇರಿದಂತೆ ಮುಂತಾದ ಹಬ್ಬದ ದಿನಗಳಲ್ಲಿ ಅಕ್ರಮ ಒಂಟೆ, ಗೋವುಗಳ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಹಬ್ಬದ ದಿನಗಳನ್ನು ಒಳಗೊಂಡಂತೆ ಅನಧಿಕೃತವಾಗಿ ಗೋವು, ಒಂಟೆ ಹತ್ಯೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಲು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ. ಇದೇ ರೀತಿಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸಮಿತಿ ರಚನೆಯಾಗಿ, ಅಕ್ರಮ ಗೋವು, ಒಂಟೆ ಹತ್ಯೆಗೆ ಬ್ರೇಕ್ ಹಾಕಲಾಗುತ್ತದೆ ಎನ್ನಲಾಗುತ್ತಿದೆ.

ಈ ಕುರಿತಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ ಎನ್ ಶಿವಕುಮಾರ್, ನಡಾವಳಿಯೊಂದನ್ನು ಪ್ರಕಟಿಸಿದ್ದು, ರಾಜ್ಯದಲ್ಲಿ ಹಬ್ಬದ ದಿನಗಳನ್ನೂಳಗೊಂಡಂತೆ ಅನಧಿಕೃತ ಗೋವು, ಒಂಟೆಗಳ ಹತ್ಯೆಯನ್ನು ಮತ್ತು ಸಾಮೂಹಿಕ ಹತ್ಯೆಯನ್ನು ತಡೆಗಟ್ಟಲು ಸರ್ಕಾರವು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮಿತಿಯೊಂದನ್ನು ರಚಿಸಿದ್ದು, ಸದರಿ ಸಮಿತಿಯು ಅನಧಿಕೃತ ಪ್ರಾಣಿ ಹತ್ಯೆ, ಸಾಗಾಣಿಕೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳತಕ್ಕದೆಂದು ನಿರ್ದೇಶಿಸಿರುವುದರಿಂದ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ರಾಣಿಗಳ ವಧೆಯನ್ನು ತಡೆಯುವ ನಿಟ್ಟಿನಿಂದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್ ಟಿ ಓ ಇಲಾಖೆ, ಪಶುಪಾಲನಾ ಇಲಾಖೆ, ಎನ್ ಜಿ ಒ ಮತ್ತು ಬಿಬಿಎಂಪಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಂತೆಯೇ ರಾಜ್ಯದೆಲ್ಲೆಡೆ ಹಬ್ಬದ ದಿನಗಳನ್ನೂ ಒಳಗೊಂಡಂತೆ ಅನಧಿಕೃತವಾಗಿ ಗೋವು, ಒಂಟೆಗಳ ಹತ್ಯೆಯನ್ನು ಮತ್ತು ಸಾಮೂಹಿಕ ಹತ್ಯೆಯನ್ನು ತಡೆಗಟ್ಟಲು ಸಮಿತಿ ರಚಿಸಲಾಗುತ್ತಿದೆ ಎನ್ನಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಅನಧಿಕೃತ ಗೋವು, ಒಂಟೆಗಳ ಹತ್ಯೆಗೆ ಬ್ರೇಕ್ ಹಾಕಲಿದೆ ಎಂದು ಹೇಳಲಾಗುತ್ತಿದೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ