ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ದೇವದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರ ತರಬೇತಿ ಕೇಂದ್ರದ ಸಭಾಭವನದಲ್ಲಿ ನಡೆಸಲಾಯಿತು.

CSC ಸೇವಾಕೇಂದ್ರಕ್ಕೆ ಲ್ಯಾಪ್ ಟಾಪ್ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ ಮತ್ತು ಸೇವಾ ಚಟುವಟಿಕೆಗಳ ಬಗ್ಗೆ ಮತ್ತು ಗ್ರಾಮೀಣ ಜನರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವ ಸಲುವಾಗಿ ರಾಜ್ಯಾದ್ಯಂತ 6ಸಾವಿರ CSC ಸೇವಾ ಕೇಂದ್ರಗಳನ್ನು ಮಾಡಲು ಧರ್ಮಸ್ಥಳದ ಧರ್ಮಾಧಿಕಾರಿ ಯವರು ಮಂಜೂರಾತಿ ನೀಡಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮದಲ್ಲಿಯೂ ಇಂತಹ ಸೇವಾ ಕೇಂದ್ರ ತೆರೆಯಲು ಮುಂದಾಗಿದ್ದು, ಇದರೊಂದಿಗೆ ಯುವಜನತೆಗೆ ಉದ್ಯೋಗಾವಕಾಶ ಒದಗಿಸುವ ಕೆಲಸವನ್ನು ಪೂಜ್ಯರು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಜನಸಾಮಾನ್ಯರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದಾರೆ. ಸಾಮಾನ್ಯ ಸೇವಾ ಕೇಂದ್ರಗಳಿಂದ ಸಾರ್ವಜನಿಕರಿಗೆ ಸುಮಾರು 700 ಸೇವೆಗಳು ದೊರೆಯಲಿವೆ. ಈ ಹಿನ್ನೆಲೆಯಲ್ಲಿ CSC ಕೇಂದ್ರವನ್ನು ವ್ಯವಸ್ಥಿತವಾಗಿ ನಡೆದುಕೊಂಡು ಮುನ್ನಡೆಸಲು ಉತ್ತಮ ತರಬೇತಿಯ ಅವಶ್ಯಕವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ತಿಳಿಸಿದರು.

ಅಜೀಂ ಫೌಂಡೇಶನ್ ತಾಲೂಕು ಸಂಯೋಜಕರಾದ ಡಾ. ಅಂದ್ರಾಳ ಗವಿಸಿದ್ದಪ್ಪ ರವರು ಮಾತನಾಡಿ ಯೋಜನೆ ಯೋಚನೆ ಯೊಂದಿಗೆ ಉತ್ತಮ ಸೇವೆ ನೀಡಲು ನಾವು ಜನಸಾಮಾನ್ಯರ ಜೊತೆ ಕಾಯನಿರ್ವಹಿಸಲು ಉತ್ಸಾಹ ರಿಂದ ಪೂಜ್ಯರ ಆಶಯದಂತೆ ಪಾರದರ್ಶಕ, ಪ್ರಾಮಾಣಿಕತೆಯಿಂದ ಸೇವೆಯನ್ನು ನೀಡುವ ಜೊತೆಗೆ ತಾವೂ ಉಜ್ವಲವಾಗಿ ಉತ್ಕೃಷ್ಟ ವಾಗಿ ಬೆಳೆಯಬೇಕು ಎಂದು ಶುಭಹಾರೈಸಿದರು.

ಜಿಲ್ಲಾ ಜನಜಾಗೃತಿ ಸದಸ್ಯರಾದ ಸತೀಶ್ ಬಳೆಯವರು ಮಾತನಾಡಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಜನರಿಗೆ ಉತ್ತಮ ಸೇವೆ ನೀಡಲು ಕಾರ್ಯಪ್ರವೃತ್ತರಾಗಿ ಧರ್ಮಸ್ಥಳ ಸಂಸ್ಥೆಯ ಯಾವುದೇ ಕಾರ್ಯಕ್ರಮಗಳು ಪಾರದರ್ಶಕವಾಗಿರುತ್ತದೆ. ಜನರಿಗೆ ಅರಿವು ಮೂಡಿಸುವ ಮೂಲಕ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳಾದ ಉಮೇಶ್, ರಾಜೇಶ್.ಎಂ, ರಾಷ್ಟ್ರೀಯ ಸ್ವಸಹಾಯ ತಂಡಗಳ ತರಬೇತಿ ಸಂಸ್ಥೆ ಉಡುಪಿಯ ಉಪನ್ಯಾಸಕ ರಾದ ರಮೇಶ್, ಐಟಿ ಪ್ರಬಂಧಕರಾದ ಪ್ರದೀಪ್, ಜಿಲ್ಲಾ ಸಂಯೋಜಕ ಶಿವರಾಜ್, ಶಂಕರಪ್ಪ, ರೂಪಾಶ್ರೀ, ತಾಲೂಕು ಸಂಯೋಜಕ ರಾಜು ಮತ್ತು ಗ್ರಾಮಮಟ್ಟದ VLE ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ