ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ದೇವದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರ ತರಬೇತಿ ಕೇಂದ್ರದ ಸಭಾಭವನದಲ್ಲಿ ನಡೆಸಲಾಯಿತು.

CSC ಸೇವಾಕೇಂದ್ರಕ್ಕೆ ಲ್ಯಾಪ್ ಟಾಪ್ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ ಮತ್ತು ಸೇವಾ ಚಟುವಟಿಕೆಗಳ ಬಗ್ಗೆ ಮತ್ತು ಗ್ರಾಮೀಣ ಜನರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವ ಸಲುವಾಗಿ ರಾಜ್ಯಾದ್ಯಂತ 6ಸಾವಿರ CSC ಸೇವಾ ಕೇಂದ್ರಗಳನ್ನು ಮಾಡಲು ಧರ್ಮಸ್ಥಳದ ಧರ್ಮಾಧಿಕಾರಿ ಯವರು ಮಂಜೂರಾತಿ ನೀಡಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮದಲ್ಲಿಯೂ ಇಂತಹ ಸೇವಾ ಕೇಂದ್ರ ತೆರೆಯಲು ಮುಂದಾಗಿದ್ದು, ಇದರೊಂದಿಗೆ ಯುವಜನತೆಗೆ ಉದ್ಯೋಗಾವಕಾಶ ಒದಗಿಸುವ ಕೆಲಸವನ್ನು ಪೂಜ್ಯರು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಜನಸಾಮಾನ್ಯರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದಾರೆ. ಸಾಮಾನ್ಯ ಸೇವಾ ಕೇಂದ್ರಗಳಿಂದ ಸಾರ್ವಜನಿಕರಿಗೆ ಸುಮಾರು 700 ಸೇವೆಗಳು ದೊರೆಯಲಿವೆ. ಈ ಹಿನ್ನೆಲೆಯಲ್ಲಿ CSC ಕೇಂದ್ರವನ್ನು ವ್ಯವಸ್ಥಿತವಾಗಿ ನಡೆದುಕೊಂಡು ಮುನ್ನಡೆಸಲು ಉತ್ತಮ ತರಬೇತಿಯ ಅವಶ್ಯಕವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ತಿಳಿಸಿದರು.

ಅಜೀಂ ಫೌಂಡೇಶನ್ ತಾಲೂಕು ಸಂಯೋಜಕರಾದ ಡಾ. ಅಂದ್ರಾಳ ಗವಿಸಿದ್ದಪ್ಪ ರವರು ಮಾತನಾಡಿ ಯೋಜನೆ ಯೋಚನೆ ಯೊಂದಿಗೆ ಉತ್ತಮ ಸೇವೆ ನೀಡಲು ನಾವು ಜನಸಾಮಾನ್ಯರ ಜೊತೆ ಕಾಯನಿರ್ವಹಿಸಲು ಉತ್ಸಾಹ ರಿಂದ ಪೂಜ್ಯರ ಆಶಯದಂತೆ ಪಾರದರ್ಶಕ, ಪ್ರಾಮಾಣಿಕತೆಯಿಂದ ಸೇವೆಯನ್ನು ನೀಡುವ ಜೊತೆಗೆ ತಾವೂ ಉಜ್ವಲವಾಗಿ ಉತ್ಕೃಷ್ಟ ವಾಗಿ ಬೆಳೆಯಬೇಕು ಎಂದು ಶುಭಹಾರೈಸಿದರು.

ಜಿಲ್ಲಾ ಜನಜಾಗೃತಿ ಸದಸ್ಯರಾದ ಸತೀಶ್ ಬಳೆಯವರು ಮಾತನಾಡಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಜನರಿಗೆ ಉತ್ತಮ ಸೇವೆ ನೀಡಲು ಕಾರ್ಯಪ್ರವೃತ್ತರಾಗಿ ಧರ್ಮಸ್ಥಳ ಸಂಸ್ಥೆಯ ಯಾವುದೇ ಕಾರ್ಯಕ್ರಮಗಳು ಪಾರದರ್ಶಕವಾಗಿರುತ್ತದೆ. ಜನರಿಗೆ ಅರಿವು ಮೂಡಿಸುವ ಮೂಲಕ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳಾದ ಉಮೇಶ್, ರಾಜೇಶ್.ಎಂ, ರಾಷ್ಟ್ರೀಯ ಸ್ವಸಹಾಯ ತಂಡಗಳ ತರಬೇತಿ ಸಂಸ್ಥೆ ಉಡುಪಿಯ ಉಪನ್ಯಾಸಕ ರಾದ ರಮೇಶ್, ಐಟಿ ಪ್ರಬಂಧಕರಾದ ಪ್ರದೀಪ್, ಜಿಲ್ಲಾ ಸಂಯೋಜಕ ಶಿವರಾಜ್, ಶಂಕರಪ್ಪ, ರೂಪಾಶ್ರೀ, ತಾಲೂಕು ಸಂಯೋಜಕ ರಾಜು ಮತ್ತು ಗ್ರಾಮಮಟ್ಟದ VLE ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 68 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️