ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ದೇವದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರ ತರಬೇತಿ ಕೇಂದ್ರದ ಸಭಾಭವನದಲ್ಲಿ ನಡೆಸಲಾಯಿತು.

CSC ಸೇವಾಕೇಂದ್ರಕ್ಕೆ ಲ್ಯಾಪ್ ಟಾಪ್ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ ಮತ್ತು ಸೇವಾ ಚಟುವಟಿಕೆಗಳ ಬಗ್ಗೆ ಮತ್ತು ಗ್ರಾಮೀಣ ಜನರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವ ಸಲುವಾಗಿ ರಾಜ್ಯಾದ್ಯಂತ 6ಸಾವಿರ CSC ಸೇವಾ ಕೇಂದ್ರಗಳನ್ನು ಮಾಡಲು ಧರ್ಮಸ್ಥಳದ ಧರ್ಮಾಧಿಕಾರಿ ಯವರು ಮಂಜೂರಾತಿ ನೀಡಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮದಲ್ಲಿಯೂ ಇಂತಹ ಸೇವಾ ಕೇಂದ್ರ ತೆರೆಯಲು ಮುಂದಾಗಿದ್ದು, ಇದರೊಂದಿಗೆ ಯುವಜನತೆಗೆ ಉದ್ಯೋಗಾವಕಾಶ ಒದಗಿಸುವ ಕೆಲಸವನ್ನು ಪೂಜ್ಯರು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಜನಸಾಮಾನ್ಯರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದಾರೆ. ಸಾಮಾನ್ಯ ಸೇವಾ ಕೇಂದ್ರಗಳಿಂದ ಸಾರ್ವಜನಿಕರಿಗೆ ಸುಮಾರು 700 ಸೇವೆಗಳು ದೊರೆಯಲಿವೆ. ಈ ಹಿನ್ನೆಲೆಯಲ್ಲಿ CSC ಕೇಂದ್ರವನ್ನು ವ್ಯವಸ್ಥಿತವಾಗಿ ನಡೆದುಕೊಂಡು ಮುನ್ನಡೆಸಲು ಉತ್ತಮ ತರಬೇತಿಯ ಅವಶ್ಯಕವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ತಿಳಿಸಿದರು.

ಅಜೀಂ ಫೌಂಡೇಶನ್ ತಾಲೂಕು ಸಂಯೋಜಕರಾದ ಡಾ. ಅಂದ್ರಾಳ ಗವಿಸಿದ್ದಪ್ಪ ರವರು ಮಾತನಾಡಿ ಯೋಜನೆ ಯೋಚನೆ ಯೊಂದಿಗೆ ಉತ್ತಮ ಸೇವೆ ನೀಡಲು ನಾವು ಜನಸಾಮಾನ್ಯರ ಜೊತೆ ಕಾಯನಿರ್ವಹಿಸಲು ಉತ್ಸಾಹ ರಿಂದ ಪೂಜ್ಯರ ಆಶಯದಂತೆ ಪಾರದರ್ಶಕ, ಪ್ರಾಮಾಣಿಕತೆಯಿಂದ ಸೇವೆಯನ್ನು ನೀಡುವ ಜೊತೆಗೆ ತಾವೂ ಉಜ್ವಲವಾಗಿ ಉತ್ಕೃಷ್ಟ ವಾಗಿ ಬೆಳೆಯಬೇಕು ಎಂದು ಶುಭಹಾರೈಸಿದರು.

ಜಿಲ್ಲಾ ಜನಜಾಗೃತಿ ಸದಸ್ಯರಾದ ಸತೀಶ್ ಬಳೆಯವರು ಮಾತನಾಡಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಜನರಿಗೆ ಉತ್ತಮ ಸೇವೆ ನೀಡಲು ಕಾರ್ಯಪ್ರವೃತ್ತರಾಗಿ ಧರ್ಮಸ್ಥಳ ಸಂಸ್ಥೆಯ ಯಾವುದೇ ಕಾರ್ಯಕ್ರಮಗಳು ಪಾರದರ್ಶಕವಾಗಿರುತ್ತದೆ. ಜನರಿಗೆ ಅರಿವು ಮೂಡಿಸುವ ಮೂಲಕ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳಾದ ಉಮೇಶ್, ರಾಜೇಶ್.ಎಂ, ರಾಷ್ಟ್ರೀಯ ಸ್ವಸಹಾಯ ತಂಡಗಳ ತರಬೇತಿ ಸಂಸ್ಥೆ ಉಡುಪಿಯ ಉಪನ್ಯಾಸಕ ರಾದ ರಮೇಶ್, ಐಟಿ ಪ್ರಬಂಧಕರಾದ ಪ್ರದೀಪ್, ಜಿಲ್ಲಾ ಸಂಯೋಜಕ ಶಿವರಾಜ್, ಶಂಕರಪ್ಪ, ರೂಪಾಶ್ರೀ, ತಾಲೂಕು ಸಂಯೋಜಕ ರಾಜು ಮತ್ತು ಗ್ರಾಮಮಟ್ಟದ VLE ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ