ವಿದ್ಯುತ್ ಇನ್ಮುಂದೆ ಗ್ರಾಹಕರ ಹಕ್ಕು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಜಮೆಯಾಗಲಿದೆ ಸಬ್ಸಿಡಿ ಹಣ!

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ತನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿಯಮಾವಳಿ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಇದು ಜಾರಿಗೆ ಬಂದರೆ ವಿದ್ಯುತ್‌ ಪಡೆಯುವುದು ಈ ದೇಶದಲ್ಲಿರುವ ಎಲ್ಲರ ಹಕ್ಕಾಗಲಿದೆ.

ಪದೇಪದೇ ಕರೆಂಟ್‌ ಹೋಗುತ್ತದೆ, ಎಸ್ಕಾಂನವರಿಗೆ ಎಷ್ಟುಫೋನ್‌ ಮಾಡಿದರೂ ಪ್ರಯೋಜನವಿಲ್ಲ, ಅರ್ಜಿ ಸಲ್ಲಿಸಿ ಎಷ್ಟುದಿನವಾದರೂ ವಿದ್ಯುತ್‌ ಸಂಪರ್ಕ ನೀಡುತ್ತಿಲ್ಲ, ಹಳ್ಳಿಯಲ್ಲಿ ವಿದ್ಯುತ್ತೇ ಇರುವುದಿಲ್ಲ ಆದರೆ ಬಿಲ್‌ ಮಾತ್ರ ಬರುತ್ತದೆ ಇಂತಹ ಸಮಸ್ಯೆಗಳಿಗೆಲ್ಲ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇತಿಶ್ರೀ ಹಾಡಲಿದೆ.

ಅರ್ಜಿ ಸಲ್ಲಿಸಿದ ನಿರ್ದಿಷ್ಟ ಸಮಯದೊಳಗೆ ಇಂಧನ ಇಲಾಖೆ ವಿದ್ಯುತ್‌ ಸಂಪರ್ಕ ನೀಡಬೇಕಾಗುತ್ತದೆ. ಅಲ್ಲದೆ, ವಿದ್ಯುತ್‌ ಗ್ರಾಹಕರ ಎಲ್ಲಾ ಸಮಸ್ಯೆಗಳನ್ನೂ ನಿರ್ದಿಷ್ಟ ಸಮಯದೊಳಗೆ ಆನ್‌ಲೈನ್‌ನಲ್ಲೇ ಬಗೆಹರಿಸಬೇಕಾಗುತ್ತದೆ.

ಈ ಸಂಬಂಧ ಕೇಂದ್ರ ಇಂಧನ ಇಲಾಖೆಯು ಕರಡು ನಿಯಮಾವಳಿ ರೂಪಿಸಿದ್ದು, ಅದಕ್ಕೆ ಈ ವರ್ಷದ ಸೆ.30ರೊಳಗೆ ಜನರಿಂದ ಆಕ್ಷೇಪಣೆ ಆಹ್ವಾನಿಸಿದೆ. ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮವಾಗಿ ‘ವಿದ್ಯುತ್‌ (ಗ್ರಾಹಕರ ಹಕ್ಕು) ನಿಯಮಾವಳಿ-2020’ನ್ನು ಪ್ರಕಟಿಸಲಿದೆ.

ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಸಬ್ಸಿಡಿ ಹಣ ಜಮೆ.

ಜನರು ಕೇವಲ 2 ದಾಖಲೆ ಸಲ್ಲಿಸಿ ವಿದ್ಯುತ್‌ ಸಂಪರ್ಕ ಪಡೆಯಲು ಸರಳ ವ್ಯವಸ್ಥೆ ಇರಬೇಕು.

ಮೆಟ್ರೋ ನಗರಗಳಲ್ಲಿ ಜನರು ಅರ್ಜಿ ಸಲ್ಲಿಸಿದ 7 ದಿನ, ಮುನ್ಸಿಪಲ್‌ ಪಟ್ಟಣಗಳಲ್ಲಿ 15 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 30 ದಿನದೊಳಗೆ ವಿದ್ಯುತ್‌ ಸಂಪರ್ಕ ನೀಡಬೇಕು ಅಥವಾ ಈಗಾಗಲೇ ನೀಡಿರುವ ಸಂಪರ್ಕವನ್ನು ಬದಲಿಸಿಕೊಡಬೇಕು.

ಒಂದು ವರ್ಷಕ್ಕೆ ಒಬ್ಬ ಗ್ರಾಹಕನಿಗೆ ಗರಿಷ್ಠ ಇಷ್ಟೇ ಸಲ ಹಾಗೂ ಇಷ್ಟುತಾಸು ಮಾತ್ರ ವಿದ್ಯುತ್‌ ಕಡಿತಗೊಳಿಸಬಹುದು ಎಂಬ ಮಿತಿ ಇರಬೇಕು.

ಹೊಸ ಸಂಪರ್ಕ, ವರ್ಗಾವಣೆ, ರಿಪೇರಿ, ವಿದ್ಯುತ್‌ ಕಡಿತ ಇತ್ಯಾದಿ ಸಮಸ್ಯೆಗಳನ್ನು ಗ್ರಾಹಕರು ಬಗೆಹರಿಸಿಕೊಳ್ಳಲು ಆಯಪ್‌ ಆಧಾರಿತ ವ್ಯವಸ್ಥೆ ತರಬೇಕು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 55 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 93 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 40 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ