ವಿದ್ಯುತ್ ಇನ್ಮುಂದೆ ಗ್ರಾಹಕರ ಹಕ್ಕು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಜಮೆಯಾಗಲಿದೆ ಸಬ್ಸಿಡಿ ಹಣ!

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ತನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿಯಮಾವಳಿ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಇದು ಜಾರಿಗೆ ಬಂದರೆ ವಿದ್ಯುತ್‌ ಪಡೆಯುವುದು ಈ ದೇಶದಲ್ಲಿರುವ ಎಲ್ಲರ ಹಕ್ಕಾಗಲಿದೆ.

ಪದೇಪದೇ ಕರೆಂಟ್‌ ಹೋಗುತ್ತದೆ, ಎಸ್ಕಾಂನವರಿಗೆ ಎಷ್ಟುಫೋನ್‌ ಮಾಡಿದರೂ ಪ್ರಯೋಜನವಿಲ್ಲ, ಅರ್ಜಿ ಸಲ್ಲಿಸಿ ಎಷ್ಟುದಿನವಾದರೂ ವಿದ್ಯುತ್‌ ಸಂಪರ್ಕ ನೀಡುತ್ತಿಲ್ಲ, ಹಳ್ಳಿಯಲ್ಲಿ ವಿದ್ಯುತ್ತೇ ಇರುವುದಿಲ್ಲ ಆದರೆ ಬಿಲ್‌ ಮಾತ್ರ ಬರುತ್ತದೆ ಇಂತಹ ಸಮಸ್ಯೆಗಳಿಗೆಲ್ಲ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇತಿಶ್ರೀ ಹಾಡಲಿದೆ.

ಅರ್ಜಿ ಸಲ್ಲಿಸಿದ ನಿರ್ದಿಷ್ಟ ಸಮಯದೊಳಗೆ ಇಂಧನ ಇಲಾಖೆ ವಿದ್ಯುತ್‌ ಸಂಪರ್ಕ ನೀಡಬೇಕಾಗುತ್ತದೆ. ಅಲ್ಲದೆ, ವಿದ್ಯುತ್‌ ಗ್ರಾಹಕರ ಎಲ್ಲಾ ಸಮಸ್ಯೆಗಳನ್ನೂ ನಿರ್ದಿಷ್ಟ ಸಮಯದೊಳಗೆ ಆನ್‌ಲೈನ್‌ನಲ್ಲೇ ಬಗೆಹರಿಸಬೇಕಾಗುತ್ತದೆ.

ಈ ಸಂಬಂಧ ಕೇಂದ್ರ ಇಂಧನ ಇಲಾಖೆಯು ಕರಡು ನಿಯಮಾವಳಿ ರೂಪಿಸಿದ್ದು, ಅದಕ್ಕೆ ಈ ವರ್ಷದ ಸೆ.30ರೊಳಗೆ ಜನರಿಂದ ಆಕ್ಷೇಪಣೆ ಆಹ್ವಾನಿಸಿದೆ. ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮವಾಗಿ ‘ವಿದ್ಯುತ್‌ (ಗ್ರಾಹಕರ ಹಕ್ಕು) ನಿಯಮಾವಳಿ-2020’ನ್ನು ಪ್ರಕಟಿಸಲಿದೆ.

ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಸಬ್ಸಿಡಿ ಹಣ ಜಮೆ.

ಜನರು ಕೇವಲ 2 ದಾಖಲೆ ಸಲ್ಲಿಸಿ ವಿದ್ಯುತ್‌ ಸಂಪರ್ಕ ಪಡೆಯಲು ಸರಳ ವ್ಯವಸ್ಥೆ ಇರಬೇಕು.

ಮೆಟ್ರೋ ನಗರಗಳಲ್ಲಿ ಜನರು ಅರ್ಜಿ ಸಲ್ಲಿಸಿದ 7 ದಿನ, ಮುನ್ಸಿಪಲ್‌ ಪಟ್ಟಣಗಳಲ್ಲಿ 15 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 30 ದಿನದೊಳಗೆ ವಿದ್ಯುತ್‌ ಸಂಪರ್ಕ ನೀಡಬೇಕು ಅಥವಾ ಈಗಾಗಲೇ ನೀಡಿರುವ ಸಂಪರ್ಕವನ್ನು ಬದಲಿಸಿಕೊಡಬೇಕು.

ಒಂದು ವರ್ಷಕ್ಕೆ ಒಬ್ಬ ಗ್ರಾಹಕನಿಗೆ ಗರಿಷ್ಠ ಇಷ್ಟೇ ಸಲ ಹಾಗೂ ಇಷ್ಟುತಾಸು ಮಾತ್ರ ವಿದ್ಯುತ್‌ ಕಡಿತಗೊಳಿಸಬಹುದು ಎಂಬ ಮಿತಿ ಇರಬೇಕು.

ಹೊಸ ಸಂಪರ್ಕ, ವರ್ಗಾವಣೆ, ರಿಪೇರಿ, ವಿದ್ಯುತ್‌ ಕಡಿತ ಇತ್ಯಾದಿ ಸಮಸ್ಯೆಗಳನ್ನು ಗ್ರಾಹಕರು ಬಗೆಹರಿಸಿಕೊಳ್ಳಲು ಆಯಪ್‌ ಆಧಾರಿತ ವ್ಯವಸ್ಥೆ ತರಬೇಕು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 4 views

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 12 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 7 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ