ದಿನ ಬಳಕೆ ವಸ್ತುಗಳಿಗೂ ಇದೆ EXPIRY Date! ಹಾಗಾದ್ರೆ ಯಾವ ವಸ್ತು ಯಾವಾಗ ಬದಲಿಸಬೇಕು……..!?

ಮಾತ್ರೆ, ಔಷಧಿ, ಪ್ಯಾಕೆಟ್ ಆಹಾರಗಳಿಗೆ ಕೊನೆ ದಿನಾಂಕವಿರುತ್ತದೆ. ಇವುಗಳನ್ನು ತಯಾರಿಸುವ ವೇಳೆ ತಯಾರಿಸಿದ ದಿನಾಂಕದ ಜೊತೆ ಅಂತಿಮ ಬಳಕೆ ದಿನಾಂಕವನ್ನು ವಸ್ತುಗಳ ಮೇಲೆ ಹಾಕಿರಲಾಗುತ್ತದೆ.

ಆದ್ರೆ ದಿನ ಬಳಕೆಯ ಕೆಲ ವಸ್ತುಗಳಿಗೆ ಈ ದಿನಾಂಕವನ್ನು ಹಾಕಿರುವುದಿಲ್ಲ. ಅದ್ರಲ್ಲಿ ಪ್ರತಿ ದಿನ ಬಳಸುವ ಟೂತ್ ಬ್ರಶ್, ಟವಲ್, ಬಾಚಣಿಕೆ ಸೇರಿದಂತೆ ಅನೇಕ ವಸ್ತುಗಳು ಸೇರಿವೆ. ಕೊನೆ ದಿನಾಂಕ ಹಾಕಿಲ್ಲ ಎನ್ನುವ ಕಾರಣಕ್ಕೆ ಅವುಗಳನ್ನು ವರ್ಷಗಟ್ಟಲೆ ಬಳಸುವುದು ಸರಿಯಲ್ಲ.

ಪ್ರತಿ ದಿನ ಹಲ್ಲುಗಳನ್ನು ಸ್ವಚ್ಛಗೊಳಿಸಲು ಬಳಸುವ ಟೂತ್ ಬ್ರಶನ್ನು ಸಾಮಾನ್ಯವಾಗಿ ವರ್ಷಗಟ್ಟಲೆ ಬಳಸುವವರಿದ್ದಾರೆ. ಬ್ರಶ್ ಸಂಪೂರ್ಣ ಹಾಳಾಗುವವರೆಗೂ ಅದನ್ನು ಬಳಸ್ತಾರೆ. ಆದ್ರೆ ಇದು ತಪ್ಪು. ಬ್ರಶ್ ಅವಧಿ ಮೂರು ತಿಂಗಳು ಮಾತ್ರ. ಹೆಚ್ಚು ಸಮಯ ಬಳಸಿದ್ರೆ ನೆಗಡಿ, ಹಲ್ಲು ನೋವು ಸೇರಿದಂತೆ ಸೋಂಕುಗಳ ಸಮಸ್ಯೆ ಎದುರಾಗುತ್ತದೆ.

ಇನ್ನು ಟವೆಲ್ ಗಳ ಬಗ್ಗೆ ಹೇಳುವುದಾದ್ರೆ ಟವೆಲನ್ನು ಪ್ರತಿ ದಿನ ಅನೇಕ ಬಾರಿ ಬಳಸುತ್ತೇವೆ. ಟವೆಲ್ ನಲ್ಲಿ ಕೀಟಾಣುಗಳಿರುತ್ತವೆ. ಹಾಗಾಗಿ ಆಗಾಗ ಟವೆಲ್ ತೊಳೆಯಬೇಕು. ಒಮ್ಮೆ ಟವೆಲ್ ಖರೀದಿ ನಂತ್ರ ಮೂರ್ನಾಲ್ಕು ವರ್ಷ ಅದ್ರ ಸುದ್ದಿಗೆ ಹೋಗುವುದಿಲ್ಲ. ಆದ್ರೆ ಇದು ತಪ್ಪು. ಒಂದು ವರ್ಷ ಮಾತ್ರ ಒಂದು ಟವೆಲ್ ಬಳಸಬೇಕು. ನಂತ್ರ ಅದನ್ನು ಬದಲಿಸಬೇಕು. ಇಲ್ಲವಾದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ.

ಕೂದಲ ಸೌಂದರ್ಯ ವೃದ್ಧಿಗೆ ಬಳಸುವ ಬಾಚಣಿಕೆ ಕೂದಲ ಸಮಸ್ಯೆಗೆ ಕಾರಣವಾಗಬಹುದು. ಬಾಚಣಿಕೆಯಲ್ಲಿ ಕೊಳಕಿರುತ್ತದೆ. ಇದು ಹೊಟ್ಟು, ಅಲರ್ಜಿ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಆಗಾಗ ಅದನ್ನು ಸ್ವಚ್ಛಗೊಳಿಸಬೇಕು. ಜೊತೆಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಬಾಚಣಿಕೆ ಬಳಸಬಾರದು.

ಒಂದೇ ಮೇಕಪ್ ಬ್ರಶ್ ಹಾಗೂ ಸ್ಪಂಜ್ ಬಳಕೆ ಕೂಡ ಚರ್ಮದ ಸಮಸ್ಯೆಗೆ ಕಾರಣವಾಗುತ್ತದೆ. ಇದ್ರಿಂದ ಮೊಡವೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಪ್ರತಿ ಬಾರಿ ಮೇಕಪ್ ನೀಡಿದ ನಂತ್ರ ಮೇಕಪ್ ಬ್ರಶ್ ತೊಳೆಯಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ಬದಲಿಸಬೇಕು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು