ದಿನ ಬಳಕೆ ವಸ್ತುಗಳಿಗೂ ಇದೆ EXPIRY Date! ಹಾಗಾದ್ರೆ ಯಾವ ವಸ್ತು ಯಾವಾಗ ಬದಲಿಸಬೇಕು……..!?

ಮಾತ್ರೆ, ಔಷಧಿ, ಪ್ಯಾಕೆಟ್ ಆಹಾರಗಳಿಗೆ ಕೊನೆ ದಿನಾಂಕವಿರುತ್ತದೆ. ಇವುಗಳನ್ನು ತಯಾರಿಸುವ ವೇಳೆ ತಯಾರಿಸಿದ ದಿನಾಂಕದ ಜೊತೆ ಅಂತಿಮ ಬಳಕೆ ದಿನಾಂಕವನ್ನು ವಸ್ತುಗಳ ಮೇಲೆ ಹಾಕಿರಲಾಗುತ್ತದೆ.

ಆದ್ರೆ ದಿನ ಬಳಕೆಯ ಕೆಲ ವಸ್ತುಗಳಿಗೆ ಈ ದಿನಾಂಕವನ್ನು ಹಾಕಿರುವುದಿಲ್ಲ. ಅದ್ರಲ್ಲಿ ಪ್ರತಿ ದಿನ ಬಳಸುವ ಟೂತ್ ಬ್ರಶ್, ಟವಲ್, ಬಾಚಣಿಕೆ ಸೇರಿದಂತೆ ಅನೇಕ ವಸ್ತುಗಳು ಸೇರಿವೆ. ಕೊನೆ ದಿನಾಂಕ ಹಾಕಿಲ್ಲ ಎನ್ನುವ ಕಾರಣಕ್ಕೆ ಅವುಗಳನ್ನು ವರ್ಷಗಟ್ಟಲೆ ಬಳಸುವುದು ಸರಿಯಲ್ಲ.

ಪ್ರತಿ ದಿನ ಹಲ್ಲುಗಳನ್ನು ಸ್ವಚ್ಛಗೊಳಿಸಲು ಬಳಸುವ ಟೂತ್ ಬ್ರಶನ್ನು ಸಾಮಾನ್ಯವಾಗಿ ವರ್ಷಗಟ್ಟಲೆ ಬಳಸುವವರಿದ್ದಾರೆ. ಬ್ರಶ್ ಸಂಪೂರ್ಣ ಹಾಳಾಗುವವರೆಗೂ ಅದನ್ನು ಬಳಸ್ತಾರೆ. ಆದ್ರೆ ಇದು ತಪ್ಪು. ಬ್ರಶ್ ಅವಧಿ ಮೂರು ತಿಂಗಳು ಮಾತ್ರ. ಹೆಚ್ಚು ಸಮಯ ಬಳಸಿದ್ರೆ ನೆಗಡಿ, ಹಲ್ಲು ನೋವು ಸೇರಿದಂತೆ ಸೋಂಕುಗಳ ಸಮಸ್ಯೆ ಎದುರಾಗುತ್ತದೆ.

ಇನ್ನು ಟವೆಲ್ ಗಳ ಬಗ್ಗೆ ಹೇಳುವುದಾದ್ರೆ ಟವೆಲನ್ನು ಪ್ರತಿ ದಿನ ಅನೇಕ ಬಾರಿ ಬಳಸುತ್ತೇವೆ. ಟವೆಲ್ ನಲ್ಲಿ ಕೀಟಾಣುಗಳಿರುತ್ತವೆ. ಹಾಗಾಗಿ ಆಗಾಗ ಟವೆಲ್ ತೊಳೆಯಬೇಕು. ಒಮ್ಮೆ ಟವೆಲ್ ಖರೀದಿ ನಂತ್ರ ಮೂರ್ನಾಲ್ಕು ವರ್ಷ ಅದ್ರ ಸುದ್ದಿಗೆ ಹೋಗುವುದಿಲ್ಲ. ಆದ್ರೆ ಇದು ತಪ್ಪು. ಒಂದು ವರ್ಷ ಮಾತ್ರ ಒಂದು ಟವೆಲ್ ಬಳಸಬೇಕು. ನಂತ್ರ ಅದನ್ನು ಬದಲಿಸಬೇಕು. ಇಲ್ಲವಾದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ.

ಕೂದಲ ಸೌಂದರ್ಯ ವೃದ್ಧಿಗೆ ಬಳಸುವ ಬಾಚಣಿಕೆ ಕೂದಲ ಸಮಸ್ಯೆಗೆ ಕಾರಣವಾಗಬಹುದು. ಬಾಚಣಿಕೆಯಲ್ಲಿ ಕೊಳಕಿರುತ್ತದೆ. ಇದು ಹೊಟ್ಟು, ಅಲರ್ಜಿ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಆಗಾಗ ಅದನ್ನು ಸ್ವಚ್ಛಗೊಳಿಸಬೇಕು. ಜೊತೆಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಬಾಚಣಿಕೆ ಬಳಸಬಾರದು.

ಒಂದೇ ಮೇಕಪ್ ಬ್ರಶ್ ಹಾಗೂ ಸ್ಪಂಜ್ ಬಳಕೆ ಕೂಡ ಚರ್ಮದ ಸಮಸ್ಯೆಗೆ ಕಾರಣವಾಗುತ್ತದೆ. ಇದ್ರಿಂದ ಮೊಡವೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಪ್ರತಿ ಬಾರಿ ಮೇಕಪ್ ನೀಡಿದ ನಂತ್ರ ಮೇಕಪ್ ಬ್ರಶ್ ತೊಳೆಯಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ಬದಲಿಸಬೇಕು.

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 5 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 5 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 4 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 6 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 7 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 10 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ