ದಿನ ಬಳಕೆ ವಸ್ತುಗಳಿಗೂ ಇದೆ EXPIRY Date! ಹಾಗಾದ್ರೆ ಯಾವ ವಸ್ತು ಯಾವಾಗ ಬದಲಿಸಬೇಕು……..!?

ಮಾತ್ರೆ, ಔಷಧಿ, ಪ್ಯಾಕೆಟ್ ಆಹಾರಗಳಿಗೆ ಕೊನೆ ದಿನಾಂಕವಿರುತ್ತದೆ. ಇವುಗಳನ್ನು ತಯಾರಿಸುವ ವೇಳೆ ತಯಾರಿಸಿದ ದಿನಾಂಕದ ಜೊತೆ ಅಂತಿಮ ಬಳಕೆ ದಿನಾಂಕವನ್ನು ವಸ್ತುಗಳ ಮೇಲೆ ಹಾಕಿರಲಾಗುತ್ತದೆ.

ಆದ್ರೆ ದಿನ ಬಳಕೆಯ ಕೆಲ ವಸ್ತುಗಳಿಗೆ ಈ ದಿನಾಂಕವನ್ನು ಹಾಕಿರುವುದಿಲ್ಲ. ಅದ್ರಲ್ಲಿ ಪ್ರತಿ ದಿನ ಬಳಸುವ ಟೂತ್ ಬ್ರಶ್, ಟವಲ್, ಬಾಚಣಿಕೆ ಸೇರಿದಂತೆ ಅನೇಕ ವಸ್ತುಗಳು ಸೇರಿವೆ. ಕೊನೆ ದಿನಾಂಕ ಹಾಕಿಲ್ಲ ಎನ್ನುವ ಕಾರಣಕ್ಕೆ ಅವುಗಳನ್ನು ವರ್ಷಗಟ್ಟಲೆ ಬಳಸುವುದು ಸರಿಯಲ್ಲ.

ಪ್ರತಿ ದಿನ ಹಲ್ಲುಗಳನ್ನು ಸ್ವಚ್ಛಗೊಳಿಸಲು ಬಳಸುವ ಟೂತ್ ಬ್ರಶನ್ನು ಸಾಮಾನ್ಯವಾಗಿ ವರ್ಷಗಟ್ಟಲೆ ಬಳಸುವವರಿದ್ದಾರೆ. ಬ್ರಶ್ ಸಂಪೂರ್ಣ ಹಾಳಾಗುವವರೆಗೂ ಅದನ್ನು ಬಳಸ್ತಾರೆ. ಆದ್ರೆ ಇದು ತಪ್ಪು. ಬ್ರಶ್ ಅವಧಿ ಮೂರು ತಿಂಗಳು ಮಾತ್ರ. ಹೆಚ್ಚು ಸಮಯ ಬಳಸಿದ್ರೆ ನೆಗಡಿ, ಹಲ್ಲು ನೋವು ಸೇರಿದಂತೆ ಸೋಂಕುಗಳ ಸಮಸ್ಯೆ ಎದುರಾಗುತ್ತದೆ.

ಇನ್ನು ಟವೆಲ್ ಗಳ ಬಗ್ಗೆ ಹೇಳುವುದಾದ್ರೆ ಟವೆಲನ್ನು ಪ್ರತಿ ದಿನ ಅನೇಕ ಬಾರಿ ಬಳಸುತ್ತೇವೆ. ಟವೆಲ್ ನಲ್ಲಿ ಕೀಟಾಣುಗಳಿರುತ್ತವೆ. ಹಾಗಾಗಿ ಆಗಾಗ ಟವೆಲ್ ತೊಳೆಯಬೇಕು. ಒಮ್ಮೆ ಟವೆಲ್ ಖರೀದಿ ನಂತ್ರ ಮೂರ್ನಾಲ್ಕು ವರ್ಷ ಅದ್ರ ಸುದ್ದಿಗೆ ಹೋಗುವುದಿಲ್ಲ. ಆದ್ರೆ ಇದು ತಪ್ಪು. ಒಂದು ವರ್ಷ ಮಾತ್ರ ಒಂದು ಟವೆಲ್ ಬಳಸಬೇಕು. ನಂತ್ರ ಅದನ್ನು ಬದಲಿಸಬೇಕು. ಇಲ್ಲವಾದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ.

ಕೂದಲ ಸೌಂದರ್ಯ ವೃದ್ಧಿಗೆ ಬಳಸುವ ಬಾಚಣಿಕೆ ಕೂದಲ ಸಮಸ್ಯೆಗೆ ಕಾರಣವಾಗಬಹುದು. ಬಾಚಣಿಕೆಯಲ್ಲಿ ಕೊಳಕಿರುತ್ತದೆ. ಇದು ಹೊಟ್ಟು, ಅಲರ್ಜಿ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಆಗಾಗ ಅದನ್ನು ಸ್ವಚ್ಛಗೊಳಿಸಬೇಕು. ಜೊತೆಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಬಾಚಣಿಕೆ ಬಳಸಬಾರದು.

ಒಂದೇ ಮೇಕಪ್ ಬ್ರಶ್ ಹಾಗೂ ಸ್ಪಂಜ್ ಬಳಕೆ ಕೂಡ ಚರ್ಮದ ಸಮಸ್ಯೆಗೆ ಕಾರಣವಾಗುತ್ತದೆ. ಇದ್ರಿಂದ ಮೊಡವೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಪ್ರತಿ ಬಾರಿ ಮೇಕಪ್ ನೀಡಿದ ನಂತ್ರ ಮೇಕಪ್ ಬ್ರಶ್ ತೊಳೆಯಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ಬದಲಿಸಬೇಕು.

Spread the love
  • Related Posts

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…

    Spread the love

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ…

    Spread the love

    You Missed

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 5 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 5 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 5 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 8 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 10 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 14 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್