ದಿನ ಬಳಕೆ ವಸ್ತುಗಳಿಗೂ ಇದೆ EXPIRY Date! ಹಾಗಾದ್ರೆ ಯಾವ ವಸ್ತು ಯಾವಾಗ ಬದಲಿಸಬೇಕು……..!?

ಮಾತ್ರೆ, ಔಷಧಿ, ಪ್ಯಾಕೆಟ್ ಆಹಾರಗಳಿಗೆ ಕೊನೆ ದಿನಾಂಕವಿರುತ್ತದೆ. ಇವುಗಳನ್ನು ತಯಾರಿಸುವ ವೇಳೆ ತಯಾರಿಸಿದ ದಿನಾಂಕದ ಜೊತೆ ಅಂತಿಮ ಬಳಕೆ ದಿನಾಂಕವನ್ನು ವಸ್ತುಗಳ ಮೇಲೆ ಹಾಕಿರಲಾಗುತ್ತದೆ.

ಆದ್ರೆ ದಿನ ಬಳಕೆಯ ಕೆಲ ವಸ್ತುಗಳಿಗೆ ಈ ದಿನಾಂಕವನ್ನು ಹಾಕಿರುವುದಿಲ್ಲ. ಅದ್ರಲ್ಲಿ ಪ್ರತಿ ದಿನ ಬಳಸುವ ಟೂತ್ ಬ್ರಶ್, ಟವಲ್, ಬಾಚಣಿಕೆ ಸೇರಿದಂತೆ ಅನೇಕ ವಸ್ತುಗಳು ಸೇರಿವೆ. ಕೊನೆ ದಿನಾಂಕ ಹಾಕಿಲ್ಲ ಎನ್ನುವ ಕಾರಣಕ್ಕೆ ಅವುಗಳನ್ನು ವರ್ಷಗಟ್ಟಲೆ ಬಳಸುವುದು ಸರಿಯಲ್ಲ.

ಪ್ರತಿ ದಿನ ಹಲ್ಲುಗಳನ್ನು ಸ್ವಚ್ಛಗೊಳಿಸಲು ಬಳಸುವ ಟೂತ್ ಬ್ರಶನ್ನು ಸಾಮಾನ್ಯವಾಗಿ ವರ್ಷಗಟ್ಟಲೆ ಬಳಸುವವರಿದ್ದಾರೆ. ಬ್ರಶ್ ಸಂಪೂರ್ಣ ಹಾಳಾಗುವವರೆಗೂ ಅದನ್ನು ಬಳಸ್ತಾರೆ. ಆದ್ರೆ ಇದು ತಪ್ಪು. ಬ್ರಶ್ ಅವಧಿ ಮೂರು ತಿಂಗಳು ಮಾತ್ರ. ಹೆಚ್ಚು ಸಮಯ ಬಳಸಿದ್ರೆ ನೆಗಡಿ, ಹಲ್ಲು ನೋವು ಸೇರಿದಂತೆ ಸೋಂಕುಗಳ ಸಮಸ್ಯೆ ಎದುರಾಗುತ್ತದೆ.

ಇನ್ನು ಟವೆಲ್ ಗಳ ಬಗ್ಗೆ ಹೇಳುವುದಾದ್ರೆ ಟವೆಲನ್ನು ಪ್ರತಿ ದಿನ ಅನೇಕ ಬಾರಿ ಬಳಸುತ್ತೇವೆ. ಟವೆಲ್ ನಲ್ಲಿ ಕೀಟಾಣುಗಳಿರುತ್ತವೆ. ಹಾಗಾಗಿ ಆಗಾಗ ಟವೆಲ್ ತೊಳೆಯಬೇಕು. ಒಮ್ಮೆ ಟವೆಲ್ ಖರೀದಿ ನಂತ್ರ ಮೂರ್ನಾಲ್ಕು ವರ್ಷ ಅದ್ರ ಸುದ್ದಿಗೆ ಹೋಗುವುದಿಲ್ಲ. ಆದ್ರೆ ಇದು ತಪ್ಪು. ಒಂದು ವರ್ಷ ಮಾತ್ರ ಒಂದು ಟವೆಲ್ ಬಳಸಬೇಕು. ನಂತ್ರ ಅದನ್ನು ಬದಲಿಸಬೇಕು. ಇಲ್ಲವಾದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ.

ಕೂದಲ ಸೌಂದರ್ಯ ವೃದ್ಧಿಗೆ ಬಳಸುವ ಬಾಚಣಿಕೆ ಕೂದಲ ಸಮಸ್ಯೆಗೆ ಕಾರಣವಾಗಬಹುದು. ಬಾಚಣಿಕೆಯಲ್ಲಿ ಕೊಳಕಿರುತ್ತದೆ. ಇದು ಹೊಟ್ಟು, ಅಲರ್ಜಿ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಆಗಾಗ ಅದನ್ನು ಸ್ವಚ್ಛಗೊಳಿಸಬೇಕು. ಜೊತೆಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಬಾಚಣಿಕೆ ಬಳಸಬಾರದು.

ಒಂದೇ ಮೇಕಪ್ ಬ್ರಶ್ ಹಾಗೂ ಸ್ಪಂಜ್ ಬಳಕೆ ಕೂಡ ಚರ್ಮದ ಸಮಸ್ಯೆಗೆ ಕಾರಣವಾಗುತ್ತದೆ. ಇದ್ರಿಂದ ಮೊಡವೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಪ್ರತಿ ಬಾರಿ ಮೇಕಪ್ ನೀಡಿದ ನಂತ್ರ ಮೇಕಪ್ ಬ್ರಶ್ ತೊಳೆಯಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ಬದಲಿಸಬೇಕು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 332 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ