🚩 ಗುರುವಾರದ ರಾಶಿಫಲ ಯಾವ ರಾಶಿಯವರಿಗೆ ಇಂದು ಶುಭದಿನ..?

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ತೃತೀಯಾ ತಿಥಿ,
ಸಂಜೆ 5:04 ನಂತರ ಚತುರ್ಥಿ,
ಗುರುವಾರ, ಮಖ ನಕ್ಷತ್ರ,
ಸಂಜೆ 5:08 ಪೂರ್ವಫಾಲ್ಗುಣಿ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:05 ರಿಂದ 3:41
ಗುಳಿಕಕಾಲ: ಬೆಳಗ್ಗೆ 9:18 ರಿಂದ 10:54
ಯಮಗಂಡಕಾಲ: ಬೆಳಗ್ಗೆ 6:07 ರಿಂದ 7:42

ಮೇಷ

ವಾಹನ ಖರೀದಿಯ ಅವಕಾಶಗಳು ಕಂಡುಬರುತ್ತಿವೆ. ಸ್ವಉದ್ಯೋಗಗಳಲ್ಲಿ ತೊಡಗಿಕೊಳ್ಳಲು ಸಕಾಲ. ಸಣ್ಣ ವ್ಯಾಪಾರ, ಗುಡಿ ಕೈಗಾರಿಕೆಗಳಿಂದ ಲಾಭ. ದೊಡ್ಡ ಉದ್ಯಮಕ್ಕೆ ಯೋಜನೆಗಳು ಹೊಂದಾಣಿಕೆಯಾಗುವವು.

ವೃಷಭ

ಆದಾಯಕ್ಕೂ ಮೀರಿದ ಖರ್ಚು ತಲೆದೋರಬಹುದು. ಭೂ ಸಂಬಂಧಿ ತಗಾದೆಗಳು ಪ್ರಾರಂಭವಾಗುವ ಸಾಧ್ಯತೆ. ಅಡ್ಡಿ ಆತಂಕಗಳ ನಡುವೆಯೂ ಶುಭಕಾರ್ಯಗಳು ಕೈಗೂಡುವವು. ಕೆಟ್ಟ ಮಾತುಗಳಿಂದ ಧೃತಿಗೆಡಬೇಡಿ.

ಮಿಥುನ

ಧನಾಗಮನ. ವೃತ್ತಿರಂಗದಲ್ಲಿ ಅಧಿಕ ಒತ್ತಡದಿಂದಾಗಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ. ದಾಂಪತ್ಯದಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳು ಎದುರಾಗಬಹುದು. ಮಕ್ಕಳಿಂದ ನಿರ್ಲಕ್ಷ್ಯಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸಿ.

ಕಟಕ

ದಾಯಾದಿಗಳು ಶತ್ರುಗಳಾಗಿ ಕಾಡುವ ಸಾಧ್ಯತೆ. ವ್ಯಾಪಾರದಲ್ಲಿ ಲಾಭ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ. ಸಂಗಾತಿಯ ಹಿತೋಕ್ತಿಯನ್ನು ಕಡೆಗಣಿಸದಿರಿ. ಮಾತೃವರ್ಗದವರಿಂದ ಆರ್ಥಿಕ ಸಹಾಯ ಒದಗಿ ಬರುವುದು. ‌

ಸಿಂಹ

ದೂರ ಪ್ರಯಾಣದಿಂದ ಅನುಕೂಲ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ ಇರಲಿ. ಹಿರಿಯರೊಂದಿಗೆ ವಾದ–ವಿವಾದಗಳು ಬೇಡ. ವಿಳಂಬವಾದ ಸರ್ಕಾರಿ ಕೆಲಸ–ಕಾರ್ಯಗಳು ಪರಿಪೂರ್ಣಗೊಳ್ಳುವವು.

ಕನ್ಯಾ

ದೇವತಾ ಕಾರ್ಯಗಳಿಗೆ ಹಣ ವಿನಿಯೋಗಿಸುವ ಸಾಧ್ಯತೆ. ತಾಳ್ಮೆ ಸಮಾಧಾನದಿಂದ ಸಾಂಸಾರಿಕ ನೆಮ್ಮದಿ ಕಾಯ್ದುಕೊಳ್ಳಿ. ವ್ಯಾಪಾರ ವ್ಯವಹಾರಗಳು ಅಭಿವೃದ್ಧಿಯತ್ತ ಸಾಗಲಿವೆ.

ತುಲಾ

ಅತಿಯಾದ ಕಾರ್ಯಬಾಹುಳ್ಯದಿಂದಾಗಿ ಒತ್ತಡದ ಸ್ಥಿತಿ. ವಿದ್ಯಾರ್ಥಿಗಳ ಕೆಲಸ–ಕಾರ್ಯಗಳಲ್ಲಿ ಅತಿಯಾದ ಪರಿಶ್ರಮ. ಆರೋಗ್ಯದಲ್ಲಿ ವ್ಯತ್ಯಯದ ಸಾಧ್ಯತೆ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ದೊರಕುವುದು.

ವೃಶ್ಚಿಕ

ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರುವ ಸಾಧ್ಯತೆ. ವಾಹನ ಪ್ರಯಾಣದಲ್ಲಿ ಎಚ್ಚರಿಕೆ. ನೀರಿನ ಸಂಬಂಧದ ತಗಾದೆಗಳು ಪ್ರಾರಂಭವಾಗಬಹುದು. ಅಧಿಕಾರಿಗಳನ್ನು ಎದುರಿಸಬೇಕಾದ ಸಂಭವವಿದೆ.

ಧನು

ವಿದ್ಯಾರ್ಥಿಗಳ ಪ್ರಗತಿಯಲ್ಲಿ ಸಂತಸ ಮೂಡುವುದು. ದಾಂಪತ್ಯದಲ್ಲಿ ಸಣ್ಣ ಪುಟ್ಟ ಘರ್ಷಣೆಯಾಗಬಹುದು. ಪುಟ್ಟ ಮಕ್ಕಳ ಮಧ್ಯಪ್ರವೇಶದಿಂದ ಎಲ್ಲವೂ ನಿರಾಳ. ಪ್ರೀತಿಪಾತ್ರರೊಂದಿಗಿನ ಅಭಿಲಾಷೆಗಳು ನೆರವೇರುವ ಸಾಧ್ಯತೆ.

ಮಕರ

ಶೀತದಿಂದಾಗಿ ಮೂಗು, ಗಂಟಲಿಗೆ ಸಂಬಂಧಿಸಿದ ವ್ಯಾಧಿಗಳು ಬಾಧಿಸುವ ಸಾಧ್ಯತೆ. ಕಾರ್ಮಿಕ ವರ್ಗದವರಿಗೆ ನಿರಾಶೆ. ಸಾರ್ವಜನಿಕ ಕೆಲಸಗಳಲ್ಲಿ ಪ್ರಗತಿಯ ಜೊತೆಗೆ ಅಪವಾದ ಎದುರಿಸಬೇಕಾದೀತು.

ಕುಂಭ

ನಿರೀಕ್ಷಿತ ಕಾರ್ಯಗಳು ಕೈಗೂಡಿದ ಸಂತೋಷ. ನಿರುದ್ಯೋಗಿಗಳಿಗೆ ವಿದೇಶಗಳಲ್ಲಿ ಉದ್ಯೋಗ ದೊರಕುವ ಸಾಧ್ಯತೆ. ವಿದೇಶ ಪ್ರಯಾಣ. ಧನಾಗಮನದಿಂದ ಆರ್ಥಿಕ ಸುಸ್ಥಿತಿ. ಕಲಾವಿದರಿಗೆ ವಿಫುಲ ಅವಕಾಶ.

ಮೀನ

ಆರೋಗ್ಯದ ಬಗ್ಗೆ ವಿಶೇಷ ಗಮನ ಅಗತ್ಯ. ಉದ್ಯೋಗಾಂಕ್ಷಿಗಳಿಗೆ ಉದ್ಯೋಗದ ನಿಮಿತ್ತ ತಿರುಗಾಡಬೇಕಾದೀತು. ದೇವತಾ ದರ್ಶನ ಭಾಗ್ಯ. ಸಾಂಸಾರಿಕ ಕಿರಿಕಿರಿಯ ಅನುಭವ. ಹಿರಿಯರ ಮಾತುಗಳನ್ನು ಗೌರವಿಸಿ.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 3 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 8 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 7 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 9 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ