ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಕರುಣೆ, ದಯೆ ಇರುವ ಸಾಕಷ್ಟು ಜನರು ನಮಗೆ ಕಾಣಸಿಗುತ್ತಾರೆ, ಒಬ್ಬರಿಗೆ ಸಹಾಯ ಮಾಡುವುದೆಂದರೆ ಕೆಲವು ಜನರಿಗೆ ಸಾಕಷ್ಟು ಖುಷಿ ನೀಡುವ ಸಂಗತಿ, ಅಂತವರುಗಳಲ್ಲಿ ಕೆಲವರು ತಮ್ಮ ಸ್ವಂತ ದುಡ್ಡಿನಿಂದ ಸಹಾಯ ಮಾಡಿದರೆ, ಇನ್ನೂ ಹಲವರು ತಮ್ಮ ಕೈಯಲ್ಲಿದ್ದ ಅಧಿಕಾರದಿಂದ ಸಹಾಯ ಮಾಡುತ್ತಿರುತ್ತಾರೆ.

ಇಂತವರುಗಳಲ್ಲಿ ಇಂದು ನಾವು ನಿಮಗೆ ಒಬ್ಬ ಕರುಣಾಳು ಅಧಿಕಾರಿಯ ಬಗ್ಗೆ ಹಾಗೂ ಅವರ ಕಾರ್ಯಗಳ ಬಗ್ಗೆ ತಿಳಿಸುತ್ತೇವೆ ಬನ್ನಿ ನೋಡೋಣ…

ಒಬ್ಬ ಅಜ್ಜಿ ಒಂದು ಮನೆಯಲ್ಲಿ ಏಕಾಂಗಿಯಾಗಿ ಬದುಕುತ್ತಿದ್ದರು, ಆ ಅಜ್ಜಿಗೆ 80 ವರ್ಷ ವಯಸ್ಸು, ಅಷ್ಟೇ ಅಲ್ಲದೇ ದೈಹಿಕವಾಗಿ ಸಾಕಷ್ಟು ಬಳಲಿದ್ದರು, ರೋಗದಿಂದ ಕೂಡ ಬಲಳುತ್ತಿದ್ದರು. ಇವರನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ, ಅಲ್ಲದೇ ಅವರಿಗೆ ಸರಕಾರದ ಯಾವ ಯೋಜನೆಗಳು ಸಹ ಲಭಿಸುತ್ತಿರಲಿಲ್ಲ. ಆ ಅಜ್ಜಿ ಕೇವಲ ದೇವರಲ್ಲಿ ನನ್ನನ್ನು ಬೇಗನೆ ಕರೆದುಕೊಂಡು ಬಿಡು ಎಂದು ಪ್ರಾರ್ಥಿಸುತ್ತಿದ್ದರು. ಇಂತಹ ಸಮಯದಲ್ಲಿ ಆ ಅಜ್ಜಿ ವಾಸಿಸುತ್ತಿದ್ದ ಆ ಪುಟ್ಟ ಮನೆಗೆ ಸ್ವತಃ ಆ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಭೇಟಿ ನೀಡಿದರು!

ಈ ಅಜ್ಜಿ ಇರುವುದು ತಮಿಳುನಾಡಿನ ಕರೂರ್ ಎಂಬ ಜಿಲ್ಲೆಯಲ್ಲಿ ಆ ಅಜ್ಜಿಯ ಪರಿಸ್ಥಿತಿ ಆ ಜಿಲ್ಲೆಯ ಜಿಲ್ಲಾಧಿಕಾರಿ ಟಿ.ಅಂಬಜಗೇನ್ ಅವರಿಗೆ ಹೇಗೋ ಗೊತ್ತಾಗುತ್ತದೆ. ಅವರು ತಮ್ಮ ಧರ್ಮ ಪತ್ನಿಗೆ ಊಟವನ್ನು ತಯಾರಿಸಲು ಹೇಳಿದರು, ಕ್ಯಾರಿಯರ್ ಸಮೇತ ಅವರು ಆ ಅಜ್ಜಿ ಇರುವ ಜೋಪಡಿಗೆ ತೆರಳಿದರು. ಈ ಅಜ್ಜಿಯ ಅಕ್ಕ ಪಕ್ಕದವರು ಕೂಡ ಇವರೊಂದಿಗೆ ಹೆಚ್ಚು ಮಾತಾನ್ನಾಡುತ್ತಿರಲಿಲ್ಲ, ಇನ್ನೂ ಸಹಾಯದ ಮಾತಂತೂ ದೂರ. ಆದರೆ ಒಂದು ದಿನ ಆ ಜೋಪಡಿಗೆ ಇದ್ದಕ್ಕಿದ್ದ ಹಾಗೆ ಆ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಕೈಯಲ್ಲಿ ಊಟದ ಕ್ಯಾರಿಯರ್ ಹಿಡಿದು ಆ ಅಜ್ಜಿಯ ಮನೆಯ ಮುಂದೆ ನಿಂತು ಅಜ್ಜಿ “ಒಳಗೆ ಬರಬಹುದಾ ಅಜ್ಜಿ?” ಎಂದು ಕೇಳುತ್ತ ನಿಂತಿದ್ದರು. “ಅಜ್ಜಿ ನಾನು ಇವತ್ತು ನಿಮ್ಮೊಡನೆ ಊಟ ಮಾಡಲು ಬಂದಿದ್ದೇನೆ ನಡೆಯಿರಿ” ಎಂದಾಗ ಆ ಅಜ್ಜಿ ತಡವರಿಸುತ್ತ ಒಳಗೆ ಕರೆದರು. ಒಳಗೆ ಹೋಗಿ ನೆಲದ ಮೇಲೆಯೇ ಕುಳಿತುಕೊಂಡ ಜಿಲ್ಲಾಧಿಕಾರಿ ಟಿ. ಅಂಬಜಗೇನ್ ಅವರಿಗೆ ಆ ಅಜ್ಜಿ “ಸಾಹೇಬರೆ ನನ್ನ ಮನೆಯಲ್ಲಿ ಊಟ ಮಾಡಲು ತಟ್ಟೆ ಇಲ್ಲ, ಬದಲಾಗಿ ನಾನು ಬಾಳೆ ಎಲೆಯ ಮೇಲೆ ಊಟ ಮಾಡುತ್ತೇನೆ” ಎನ್ನುತ್ತಾಳೆ. ಇದಕ್ಕೆ ಬಹಳಷ್ಟು ಸಂತಸಗೊಂಡ ಇವರು “ನಾನು ಕೂಡ ಅದರಲ್ಲಿಯೇ ಊಟ ಮಾಡುತ್ತೇನೆ” ಎಂದು ಬಾಳೆ ಎಲೆಯಲ್ಲಿಯೇ ಊಟ ಮಾಡಿದರು. ಆ ಅಜ್ಜಿ ಹಾಗೂ ಅಕ್ಕ ಪಕ್ಕದ ಮನೆಯವರು ದಂಗು ಬಡಿದು ನಿಂತಿದ್ದರು.

ನಂತರ ವಾಪಸ್ ಹೋಗುವಾಗ ಅಜ್ಜಿಯ ಕೈಗೆ ಒಂದು ಕವರ್ ಇಟ್ಟರು. ಅದರಲ್ಲಿ ದುಡ್ಡಿದೆ ಅಂತ ಎಲ್ಲರೂ ಅಂದುಕೊಂಡಿದ್ದರು. ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬದಲಿಗೆ ಅದರಲ್ಲಿ ಅಜ್ಜಿಗೆ ಇಂದಿರಾ ಆವಾಸ್ ಯೋಜನೆಯ ಮನೆಪತ್ರ, ವೃದ್ದಾಪ್ಯ ವೇತನದ ದಾಖಲೆ ಸೇರಿದಂತೆ, ಆ ಅಜ್ಜಿಗೆ ನ್ಯಾಯವಾಗಿ ಸಿಗಬೇಕಾದ ಎಲ್ಲ ಯಜನೆಗಳ ದಾಖಲಾತಿಗಳಿದ್ದವು! “ನೀವು ಹಣಕ್ಕಾಗಿ ಬ್ಯಾಂಕ್ ಗೂ ಹೋಗಬೇಕಾಗಿಲ್ಲ ಬದಲಾಗಿ ಆ ಹಣವೇ ನಿಮ್ಮನ್ನು ಬಂದು ಸೇರುವಂತೆ ಮಾಡುತ್ತೇನೆ” ಎಂದು ಹೇಳಿ ಜಿಲ್ಲಾಧಿಕಾರಿ ತಮ್ಮ ಕಾರು ಏರಿ ಹೊರಟಾಗ ಅಜ್ಜಿ ಹಾಗೂ ಸುತ್ತ ನೆರೆದಿದ್ದ ಜನರ ಕಣ್ಣಲ್ಲಿ ಆನಂದಭಾಷ್ಪ ಹರಿಯುತ್ತಿದ್ದವು..! ಇಂದು ಎಲ್ಲ ಕಡೆ ಇಂಥ ಅಧಿಕಾರಿಗಳ ಅವಶ್ಯಕತೆ ಇದೆ, ಇಂತಹ ಮನಸ್ಸಿನ ಅಧಿಕಾರಿಗಳು ಇನ್ನಷ್ಟು ಹುಟ್ಟಿಬರಲಿ ಸರಕಾರದ ಕೆಲಸ ಕೇವಲ ಕಛೇರಿ ಕೆಲಸ ಮಾತ್ರ ಅಲ್ಲ ಜನರ ಸೇವೆಯೂ ಕೂಡ ಎಂದು ತೋರಿಸಿಕೊಟ್ಟ ಜಿಲ್ಲಾಧಿಕಾರಿಯವರಿಗೆ ಶುಭವಾಗಲಿ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ