ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಕರುಣೆ, ದಯೆ ಇರುವ ಸಾಕಷ್ಟು ಜನರು ನಮಗೆ ಕಾಣಸಿಗುತ್ತಾರೆ, ಒಬ್ಬರಿಗೆ ಸಹಾಯ ಮಾಡುವುದೆಂದರೆ ಕೆಲವು ಜನರಿಗೆ ಸಾಕಷ್ಟು ಖುಷಿ ನೀಡುವ ಸಂಗತಿ, ಅಂತವರುಗಳಲ್ಲಿ ಕೆಲವರು ತಮ್ಮ ಸ್ವಂತ ದುಡ್ಡಿನಿಂದ ಸಹಾಯ ಮಾಡಿದರೆ, ಇನ್ನೂ ಹಲವರು ತಮ್ಮ ಕೈಯಲ್ಲಿದ್ದ ಅಧಿಕಾರದಿಂದ ಸಹಾಯ ಮಾಡುತ್ತಿರುತ್ತಾರೆ.

ಇಂತವರುಗಳಲ್ಲಿ ಇಂದು ನಾವು ನಿಮಗೆ ಒಬ್ಬ ಕರುಣಾಳು ಅಧಿಕಾರಿಯ ಬಗ್ಗೆ ಹಾಗೂ ಅವರ ಕಾರ್ಯಗಳ ಬಗ್ಗೆ ತಿಳಿಸುತ್ತೇವೆ ಬನ್ನಿ ನೋಡೋಣ…

ಒಬ್ಬ ಅಜ್ಜಿ ಒಂದು ಮನೆಯಲ್ಲಿ ಏಕಾಂಗಿಯಾಗಿ ಬದುಕುತ್ತಿದ್ದರು, ಆ ಅಜ್ಜಿಗೆ 80 ವರ್ಷ ವಯಸ್ಸು, ಅಷ್ಟೇ ಅಲ್ಲದೇ ದೈಹಿಕವಾಗಿ ಸಾಕಷ್ಟು ಬಳಲಿದ್ದರು, ರೋಗದಿಂದ ಕೂಡ ಬಲಳುತ್ತಿದ್ದರು. ಇವರನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ, ಅಲ್ಲದೇ ಅವರಿಗೆ ಸರಕಾರದ ಯಾವ ಯೋಜನೆಗಳು ಸಹ ಲಭಿಸುತ್ತಿರಲಿಲ್ಲ. ಆ ಅಜ್ಜಿ ಕೇವಲ ದೇವರಲ್ಲಿ ನನ್ನನ್ನು ಬೇಗನೆ ಕರೆದುಕೊಂಡು ಬಿಡು ಎಂದು ಪ್ರಾರ್ಥಿಸುತ್ತಿದ್ದರು. ಇಂತಹ ಸಮಯದಲ್ಲಿ ಆ ಅಜ್ಜಿ ವಾಸಿಸುತ್ತಿದ್ದ ಆ ಪುಟ್ಟ ಮನೆಗೆ ಸ್ವತಃ ಆ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಭೇಟಿ ನೀಡಿದರು!

ಈ ಅಜ್ಜಿ ಇರುವುದು ತಮಿಳುನಾಡಿನ ಕರೂರ್ ಎಂಬ ಜಿಲ್ಲೆಯಲ್ಲಿ ಆ ಅಜ್ಜಿಯ ಪರಿಸ್ಥಿತಿ ಆ ಜಿಲ್ಲೆಯ ಜಿಲ್ಲಾಧಿಕಾರಿ ಟಿ.ಅಂಬಜಗೇನ್ ಅವರಿಗೆ ಹೇಗೋ ಗೊತ್ತಾಗುತ್ತದೆ. ಅವರು ತಮ್ಮ ಧರ್ಮ ಪತ್ನಿಗೆ ಊಟವನ್ನು ತಯಾರಿಸಲು ಹೇಳಿದರು, ಕ್ಯಾರಿಯರ್ ಸಮೇತ ಅವರು ಆ ಅಜ್ಜಿ ಇರುವ ಜೋಪಡಿಗೆ ತೆರಳಿದರು. ಈ ಅಜ್ಜಿಯ ಅಕ್ಕ ಪಕ್ಕದವರು ಕೂಡ ಇವರೊಂದಿಗೆ ಹೆಚ್ಚು ಮಾತಾನ್ನಾಡುತ್ತಿರಲಿಲ್ಲ, ಇನ್ನೂ ಸಹಾಯದ ಮಾತಂತೂ ದೂರ. ಆದರೆ ಒಂದು ದಿನ ಆ ಜೋಪಡಿಗೆ ಇದ್ದಕ್ಕಿದ್ದ ಹಾಗೆ ಆ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಕೈಯಲ್ಲಿ ಊಟದ ಕ್ಯಾರಿಯರ್ ಹಿಡಿದು ಆ ಅಜ್ಜಿಯ ಮನೆಯ ಮುಂದೆ ನಿಂತು ಅಜ್ಜಿ “ಒಳಗೆ ಬರಬಹುದಾ ಅಜ್ಜಿ?” ಎಂದು ಕೇಳುತ್ತ ನಿಂತಿದ್ದರು. “ಅಜ್ಜಿ ನಾನು ಇವತ್ತು ನಿಮ್ಮೊಡನೆ ಊಟ ಮಾಡಲು ಬಂದಿದ್ದೇನೆ ನಡೆಯಿರಿ” ಎಂದಾಗ ಆ ಅಜ್ಜಿ ತಡವರಿಸುತ್ತ ಒಳಗೆ ಕರೆದರು. ಒಳಗೆ ಹೋಗಿ ನೆಲದ ಮೇಲೆಯೇ ಕುಳಿತುಕೊಂಡ ಜಿಲ್ಲಾಧಿಕಾರಿ ಟಿ. ಅಂಬಜಗೇನ್ ಅವರಿಗೆ ಆ ಅಜ್ಜಿ “ಸಾಹೇಬರೆ ನನ್ನ ಮನೆಯಲ್ಲಿ ಊಟ ಮಾಡಲು ತಟ್ಟೆ ಇಲ್ಲ, ಬದಲಾಗಿ ನಾನು ಬಾಳೆ ಎಲೆಯ ಮೇಲೆ ಊಟ ಮಾಡುತ್ತೇನೆ” ಎನ್ನುತ್ತಾಳೆ. ಇದಕ್ಕೆ ಬಹಳಷ್ಟು ಸಂತಸಗೊಂಡ ಇವರು “ನಾನು ಕೂಡ ಅದರಲ್ಲಿಯೇ ಊಟ ಮಾಡುತ್ತೇನೆ” ಎಂದು ಬಾಳೆ ಎಲೆಯಲ್ಲಿಯೇ ಊಟ ಮಾಡಿದರು. ಆ ಅಜ್ಜಿ ಹಾಗೂ ಅಕ್ಕ ಪಕ್ಕದ ಮನೆಯವರು ದಂಗು ಬಡಿದು ನಿಂತಿದ್ದರು.

ನಂತರ ವಾಪಸ್ ಹೋಗುವಾಗ ಅಜ್ಜಿಯ ಕೈಗೆ ಒಂದು ಕವರ್ ಇಟ್ಟರು. ಅದರಲ್ಲಿ ದುಡ್ಡಿದೆ ಅಂತ ಎಲ್ಲರೂ ಅಂದುಕೊಂಡಿದ್ದರು. ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬದಲಿಗೆ ಅದರಲ್ಲಿ ಅಜ್ಜಿಗೆ ಇಂದಿರಾ ಆವಾಸ್ ಯೋಜನೆಯ ಮನೆಪತ್ರ, ವೃದ್ದಾಪ್ಯ ವೇತನದ ದಾಖಲೆ ಸೇರಿದಂತೆ, ಆ ಅಜ್ಜಿಗೆ ನ್ಯಾಯವಾಗಿ ಸಿಗಬೇಕಾದ ಎಲ್ಲ ಯಜನೆಗಳ ದಾಖಲಾತಿಗಳಿದ್ದವು! “ನೀವು ಹಣಕ್ಕಾಗಿ ಬ್ಯಾಂಕ್ ಗೂ ಹೋಗಬೇಕಾಗಿಲ್ಲ ಬದಲಾಗಿ ಆ ಹಣವೇ ನಿಮ್ಮನ್ನು ಬಂದು ಸೇರುವಂತೆ ಮಾಡುತ್ತೇನೆ” ಎಂದು ಹೇಳಿ ಜಿಲ್ಲಾಧಿಕಾರಿ ತಮ್ಮ ಕಾರು ಏರಿ ಹೊರಟಾಗ ಅಜ್ಜಿ ಹಾಗೂ ಸುತ್ತ ನೆರೆದಿದ್ದ ಜನರ ಕಣ್ಣಲ್ಲಿ ಆನಂದಭಾಷ್ಪ ಹರಿಯುತ್ತಿದ್ದವು..! ಇಂದು ಎಲ್ಲ ಕಡೆ ಇಂಥ ಅಧಿಕಾರಿಗಳ ಅವಶ್ಯಕತೆ ಇದೆ, ಇಂತಹ ಮನಸ್ಸಿನ ಅಧಿಕಾರಿಗಳು ಇನ್ನಷ್ಟು ಹುಟ್ಟಿಬರಲಿ ಸರಕಾರದ ಕೆಲಸ ಕೇವಲ ಕಛೇರಿ ಕೆಲಸ ಮಾತ್ರ ಅಲ್ಲ ಜನರ ಸೇವೆಯೂ ಕೂಡ ಎಂದು ತೋರಿಸಿಕೊಟ್ಟ ಜಿಲ್ಲಾಧಿಕಾರಿಯವರಿಗೆ ಶುಭವಾಗಲಿ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 55 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 93 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 40 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ