ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಕರುಣೆ, ದಯೆ ಇರುವ ಸಾಕಷ್ಟು ಜನರು ನಮಗೆ ಕಾಣಸಿಗುತ್ತಾರೆ, ಒಬ್ಬರಿಗೆ ಸಹಾಯ ಮಾಡುವುದೆಂದರೆ ಕೆಲವು ಜನರಿಗೆ ಸಾಕಷ್ಟು ಖುಷಿ ನೀಡುವ ಸಂಗತಿ, ಅಂತವರುಗಳಲ್ಲಿ ಕೆಲವರು ತಮ್ಮ ಸ್ವಂತ ದುಡ್ಡಿನಿಂದ ಸಹಾಯ ಮಾಡಿದರೆ, ಇನ್ನೂ ಹಲವರು ತಮ್ಮ ಕೈಯಲ್ಲಿದ್ದ ಅಧಿಕಾರದಿಂದ ಸಹಾಯ ಮಾಡುತ್ತಿರುತ್ತಾರೆ.

ಇಂತವರುಗಳಲ್ಲಿ ಇಂದು ನಾವು ನಿಮಗೆ ಒಬ್ಬ ಕರುಣಾಳು ಅಧಿಕಾರಿಯ ಬಗ್ಗೆ ಹಾಗೂ ಅವರ ಕಾರ್ಯಗಳ ಬಗ್ಗೆ ತಿಳಿಸುತ್ತೇವೆ ಬನ್ನಿ ನೋಡೋಣ…

ಒಬ್ಬ ಅಜ್ಜಿ ಒಂದು ಮನೆಯಲ್ಲಿ ಏಕಾಂಗಿಯಾಗಿ ಬದುಕುತ್ತಿದ್ದರು, ಆ ಅಜ್ಜಿಗೆ 80 ವರ್ಷ ವಯಸ್ಸು, ಅಷ್ಟೇ ಅಲ್ಲದೇ ದೈಹಿಕವಾಗಿ ಸಾಕಷ್ಟು ಬಳಲಿದ್ದರು, ರೋಗದಿಂದ ಕೂಡ ಬಲಳುತ್ತಿದ್ದರು. ಇವರನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ, ಅಲ್ಲದೇ ಅವರಿಗೆ ಸರಕಾರದ ಯಾವ ಯೋಜನೆಗಳು ಸಹ ಲಭಿಸುತ್ತಿರಲಿಲ್ಲ. ಆ ಅಜ್ಜಿ ಕೇವಲ ದೇವರಲ್ಲಿ ನನ್ನನ್ನು ಬೇಗನೆ ಕರೆದುಕೊಂಡು ಬಿಡು ಎಂದು ಪ್ರಾರ್ಥಿಸುತ್ತಿದ್ದರು. ಇಂತಹ ಸಮಯದಲ್ಲಿ ಆ ಅಜ್ಜಿ ವಾಸಿಸುತ್ತಿದ್ದ ಆ ಪುಟ್ಟ ಮನೆಗೆ ಸ್ವತಃ ಆ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಭೇಟಿ ನೀಡಿದರು!

ಈ ಅಜ್ಜಿ ಇರುವುದು ತಮಿಳುನಾಡಿನ ಕರೂರ್ ಎಂಬ ಜಿಲ್ಲೆಯಲ್ಲಿ ಆ ಅಜ್ಜಿಯ ಪರಿಸ್ಥಿತಿ ಆ ಜಿಲ್ಲೆಯ ಜಿಲ್ಲಾಧಿಕಾರಿ ಟಿ.ಅಂಬಜಗೇನ್ ಅವರಿಗೆ ಹೇಗೋ ಗೊತ್ತಾಗುತ್ತದೆ. ಅವರು ತಮ್ಮ ಧರ್ಮ ಪತ್ನಿಗೆ ಊಟವನ್ನು ತಯಾರಿಸಲು ಹೇಳಿದರು, ಕ್ಯಾರಿಯರ್ ಸಮೇತ ಅವರು ಆ ಅಜ್ಜಿ ಇರುವ ಜೋಪಡಿಗೆ ತೆರಳಿದರು. ಈ ಅಜ್ಜಿಯ ಅಕ್ಕ ಪಕ್ಕದವರು ಕೂಡ ಇವರೊಂದಿಗೆ ಹೆಚ್ಚು ಮಾತಾನ್ನಾಡುತ್ತಿರಲಿಲ್ಲ, ಇನ್ನೂ ಸಹಾಯದ ಮಾತಂತೂ ದೂರ. ಆದರೆ ಒಂದು ದಿನ ಆ ಜೋಪಡಿಗೆ ಇದ್ದಕ್ಕಿದ್ದ ಹಾಗೆ ಆ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಕೈಯಲ್ಲಿ ಊಟದ ಕ್ಯಾರಿಯರ್ ಹಿಡಿದು ಆ ಅಜ್ಜಿಯ ಮನೆಯ ಮುಂದೆ ನಿಂತು ಅಜ್ಜಿ “ಒಳಗೆ ಬರಬಹುದಾ ಅಜ್ಜಿ?” ಎಂದು ಕೇಳುತ್ತ ನಿಂತಿದ್ದರು. “ಅಜ್ಜಿ ನಾನು ಇವತ್ತು ನಿಮ್ಮೊಡನೆ ಊಟ ಮಾಡಲು ಬಂದಿದ್ದೇನೆ ನಡೆಯಿರಿ” ಎಂದಾಗ ಆ ಅಜ್ಜಿ ತಡವರಿಸುತ್ತ ಒಳಗೆ ಕರೆದರು. ಒಳಗೆ ಹೋಗಿ ನೆಲದ ಮೇಲೆಯೇ ಕುಳಿತುಕೊಂಡ ಜಿಲ್ಲಾಧಿಕಾರಿ ಟಿ. ಅಂಬಜಗೇನ್ ಅವರಿಗೆ ಆ ಅಜ್ಜಿ “ಸಾಹೇಬರೆ ನನ್ನ ಮನೆಯಲ್ಲಿ ಊಟ ಮಾಡಲು ತಟ್ಟೆ ಇಲ್ಲ, ಬದಲಾಗಿ ನಾನು ಬಾಳೆ ಎಲೆಯ ಮೇಲೆ ಊಟ ಮಾಡುತ್ತೇನೆ” ಎನ್ನುತ್ತಾಳೆ. ಇದಕ್ಕೆ ಬಹಳಷ್ಟು ಸಂತಸಗೊಂಡ ಇವರು “ನಾನು ಕೂಡ ಅದರಲ್ಲಿಯೇ ಊಟ ಮಾಡುತ್ತೇನೆ” ಎಂದು ಬಾಳೆ ಎಲೆಯಲ್ಲಿಯೇ ಊಟ ಮಾಡಿದರು. ಆ ಅಜ್ಜಿ ಹಾಗೂ ಅಕ್ಕ ಪಕ್ಕದ ಮನೆಯವರು ದಂಗು ಬಡಿದು ನಿಂತಿದ್ದರು.

ನಂತರ ವಾಪಸ್ ಹೋಗುವಾಗ ಅಜ್ಜಿಯ ಕೈಗೆ ಒಂದು ಕವರ್ ಇಟ್ಟರು. ಅದರಲ್ಲಿ ದುಡ್ಡಿದೆ ಅಂತ ಎಲ್ಲರೂ ಅಂದುಕೊಂಡಿದ್ದರು. ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬದಲಿಗೆ ಅದರಲ್ಲಿ ಅಜ್ಜಿಗೆ ಇಂದಿರಾ ಆವಾಸ್ ಯೋಜನೆಯ ಮನೆಪತ್ರ, ವೃದ್ದಾಪ್ಯ ವೇತನದ ದಾಖಲೆ ಸೇರಿದಂತೆ, ಆ ಅಜ್ಜಿಗೆ ನ್ಯಾಯವಾಗಿ ಸಿಗಬೇಕಾದ ಎಲ್ಲ ಯಜನೆಗಳ ದಾಖಲಾತಿಗಳಿದ್ದವು! “ನೀವು ಹಣಕ್ಕಾಗಿ ಬ್ಯಾಂಕ್ ಗೂ ಹೋಗಬೇಕಾಗಿಲ್ಲ ಬದಲಾಗಿ ಆ ಹಣವೇ ನಿಮ್ಮನ್ನು ಬಂದು ಸೇರುವಂತೆ ಮಾಡುತ್ತೇನೆ” ಎಂದು ಹೇಳಿ ಜಿಲ್ಲಾಧಿಕಾರಿ ತಮ್ಮ ಕಾರು ಏರಿ ಹೊರಟಾಗ ಅಜ್ಜಿ ಹಾಗೂ ಸುತ್ತ ನೆರೆದಿದ್ದ ಜನರ ಕಣ್ಣಲ್ಲಿ ಆನಂದಭಾಷ್ಪ ಹರಿಯುತ್ತಿದ್ದವು..! ಇಂದು ಎಲ್ಲ ಕಡೆ ಇಂಥ ಅಧಿಕಾರಿಗಳ ಅವಶ್ಯಕತೆ ಇದೆ, ಇಂತಹ ಮನಸ್ಸಿನ ಅಧಿಕಾರಿಗಳು ಇನ್ನಷ್ಟು ಹುಟ್ಟಿಬರಲಿ ಸರಕಾರದ ಕೆಲಸ ಕೇವಲ ಕಛೇರಿ ಕೆಲಸ ಮಾತ್ರ ಅಲ್ಲ ಜನರ ಸೇವೆಯೂ ಕೂಡ ಎಂದು ತೋರಿಸಿಕೊಟ್ಟ ಜಿಲ್ಲಾಧಿಕಾರಿಯವರಿಗೆ ಶುಭವಾಗಲಿ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️