ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ ಪಂದಳಮ್ ಅರಮನೆಯಲ್ಲಿ ಪೆರುಮಾಳ್‌ ವಂಶಸ್ಥರ ಭೇಟಿ

ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು.

https://twitter.com/drashwathcn/status/1371852048111693824?s=20

ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ ಅವರು, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‌ಶಾಂತಿ ಅವರಾದ ವಿ.ಕೆ.ಜಯರಾಜ್‌ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು. ಇದೇ ವೇಳೆ ದೇವಳದ ಅರ್ಚಕರು, ಮುಖ್ಯ ತಂತ್ರಿ ರಾಜೀವ ಕಂದರಾರು ಉಪ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಗೌರವಿಸಿದರಲ್ಲದೆ, ಕ್ಷೇತ್ರದ ಮಹಿಮೆಯ ಬಗ್ಗೆ ಮಾಹಿತಿ ನೀಡಿದರು.

ಪಂದಳಮ್ ಅರಮನೆಗೂ ಭೇಟಿ:
ಇಂದು ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್‌ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದ ಆಶೀರ್ವಾದ ಪಡೆದರು ಡಿಸಿಎಂ. ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ‌ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು; “ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ’ ಎಂದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ