ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ ಪಂದಳಮ್ ಅರಮನೆಯಲ್ಲಿ ಪೆರುಮಾಳ್‌ ವಂಶಸ್ಥರ ಭೇಟಿ

ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು.

https://twitter.com/drashwathcn/status/1371852048111693824?s=20

ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ ಅವರು, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‌ಶಾಂತಿ ಅವರಾದ ವಿ.ಕೆ.ಜಯರಾಜ್‌ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು. ಇದೇ ವೇಳೆ ದೇವಳದ ಅರ್ಚಕರು, ಮುಖ್ಯ ತಂತ್ರಿ ರಾಜೀವ ಕಂದರಾರು ಉಪ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಗೌರವಿಸಿದರಲ್ಲದೆ, ಕ್ಷೇತ್ರದ ಮಹಿಮೆಯ ಬಗ್ಗೆ ಮಾಹಿತಿ ನೀಡಿದರು.

ಪಂದಳಮ್ ಅರಮನೆಗೂ ಭೇಟಿ:
ಇಂದು ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್‌ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದ ಆಶೀರ್ವಾದ ಪಡೆದರು ಡಿಸಿಎಂ. ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ‌ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು; “ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ’ ಎಂದರು.

Spread the love
  • Related Posts

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    You Missed

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 30 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 218 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 55 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 53 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 50 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ