ಆರೋಗ್ಯ ಸಿಬ್ಬಂದಿಗಳ ಮಹಾಎಡವಟ್ಟು, ಸ್ಮಶಾನದಲ್ಲಿ ಮೃತದೇಹ ಅದಲು ಬದಲು!

ಕುಂದಾಪುರ: ಕೊರೋನಾ ಹೆಸರಲ್ಲಿ ಬೇರೆ ಬೇರೆ ಅವಾಂತರಗಳು ನಡೆಯುತ್ತಿದೆ. ಕೋವಿಡ್‌ನಿಂದ ಸತ್ತ ವ್ಯಕ್ತಿಯ ಶವದ ಬದಲು ಬೇರೆ ಮೃತ ವ್ಯಕ್ತಿಯ ಶವವನ್ನು ಕಳುಹಿಸಿದ ಘಟನೆ ಕುಂದಾಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಂಬುಲೆನ್ಸ್‌ನಲ್ಲಿ ಬಂದ ಬೇರೆ ಶವವನ್ನು ಕಂಡು ಬಂಧುಗಳು, ಮನೆಯವರು ಹಾಗೂ ಸಾರ್ವಜನಿಕರು ಕುಂದಾಪುರ ಸ್ಮಶಾನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದು ಉಡುಪಿ ಜಿಲ್ಲೆಯ ಕುಂದಾಪುರದ ಸ್ಮಶಾನದಲ್ಲಿ ಕಂಡುಬಂದ ವಿಚಿತ್ರ ದೃಶ್ಯ. ಯಾರದ್ದೋ ಹೆಸರಿನಲ್ಲಿ ಇಲ್ಲಿ ಬೇರೆ ಯಾರದ್ದೋ ದೇಹದ ಅಂತ್ಯ ಸಂಸ್ಕಾರಕ್ಕೆ ಇಲ್ಲಿ ಸಿದ್ದತೆ ನಡೆದಿತ್ತು.

ಕುಂದಾಪುರದ ನೇರಂಬಳ್ಳಿ ನಿವಾಸಿ 60 ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ನಂತರ ಕೋವಿಡ್ ಪಾಸಿಟವ್ ಆಗಿದೆ ಎಂದು ಅವರನ್ನು ಉಡುಪಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಉಡುಪಿ ಆಸ್ಪತ್ರೆಯಿಂದ ವ್ಯಕ್ತಿಯ ಮನೆಗೆ ಕರೆ ಮಾಡಿ, ನಿಮ್ಮ ತಂದೆ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ನಾವೇ ಅಂತ್ಯ ಸಂಸ್ಕಾರ ಮಾಡುತ್ತೇವೆ ಎಂದಿದ್ದರು. ನಂತರ ಮನೆಯವರ ಒತ್ತಾಯಕ್ಕೆ ಆರೋಗ್ಯ ಸಿಬ್ಬಂದಿಗಳು ಮೃತದೇಹವನ್ನು ಕುಂದಾಪುರ ಸ್ಮಶಾನಕ್ಕೆ ತಂದಿದ್ದರು.

ಸ್ಮಶಾನದಲ್ಲಿ ಮೃತದೇಹದ ಅಂತಿಮ ದರ್ಶನ ಪಡೆಯಲು ಮನೆಯವರು ಒತ್ತಾಯಿಸಿದಾಗ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೆ ಐವರಿಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮೃತದೇಹ ಅದಲು ಬದಲಾಗಿರುವುದು ಬೆಳಕಿಗೆ ಬಂದಿದೆ.

ಆರೋಗ್ಯ ಸಿಬ್ಬಂದಿಯ ನಿರ್ಲ್ಯಕ್ಷ್ಯದ ಕುರಿತು ವ್ಯಕ್ತಿಯ ಮನೆಯವರು ಆಸ್ಪತ್ರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಿಬ್ಬಂದಿಯ ನಿರ್ಲ್ಯಕ್ಷ್ಯದ ಕುರಿತು ವ್ಯಕ್ತಿಯ ಮನೆಯವರು ಆಸ್ಪತ್ರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಶಾನದಲ್ಲಿ ನೂರಾರು ಮಂದಿ ಆಗಮಿಸಿದ್ದು, ಅಸಮಧಾನ ವ್ಯಕ್ತಪಡಿಸಿದ್ದಾರೆ. ತಾಲೂಕು ಅರೋಗ್ಯಾಧಿಕಾರಿ ನಾಗಭೂಷಣ್, ಸಹಾಯಕ ಆಯುಕ್ತ ರಾಜು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ