ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ.

ರಾಜ್ಯದಲ್ಲಿ ಡೆಂಗ್ಯೂವಿನ ಆರ್ಭಟ ಜೋರಾಗಿದೆ. ಡೆಂಗ್ಯೂ ಹೆಸರೇ ಹೇಳುವಂತೆ ಭಯಾನಕ ಕಾಯಿಲೆಯಾಗಿದ್ದು, ಒಮ್ಮೆ ದೇಹದೊಳಗೆ ಒಕ್ಕರಿಸಿಕೊಂಡು ಬಿಟ್ಟರೆ ದೇಹದ ಶಕ್ತಿಯನ್ನು ಕುಗ್ಗಿಸಿ ಬಿಡುತ್ತವೆ. ಈ ಡೆಂಗ್ಯೂ ಜ್ವರವೂ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೇ ಹೆಚ್ಚು.

ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವ: ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಡೆಂಗ್ಯೂ ರೋಗ ಹೇಗೆ ಬರುತ್ತದೆ? ಭಾರತದಲ್ಲಿ ಪ್ರತಿ ವರ್ಷ ಡೆಂಗ್ಯೂ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಡೆಂಗ್ಯೂ ವೈರಸ್‌ನಿಂದ ಉಂಟಾಗುವ ವೈರಲ್ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾಗಿರುವ ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ 3-14 ದಿನಗಳ ನಂತರ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಕಕಾಣಿಸಿಕೊಂಡ ತಕ್ಷಣವೇ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ರೋಗದಿಂದ ಗುಣಮುಖರಾಗಬಹುದು.

ಡೆಂಗ್ಯೂವಿನ ರೋಗಲಕ್ಷಣಗಳೇನು?

ಜ್ವರ ವಾಂತಿವಾಕರಿಕೆ ದದ್ದುಗಳು ವಿಪರೀತವಾದ ಮೈ ಕೈ ನೋವು, ಕೀಲು ನೋವು, ತಲೆನೋವು ಈ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಚಿಕಿತ್ಸೆ ಹೇಗೆ: ಸೋಂಕಿತ ವ್ಯಕ್ತಿಯಲ್ಲಿ ವಿಪರೀತ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಬೇಕು. ಅದಲ್ಲದೇ ಈ ಡೆಂಗ್ಯೂ ಕಾಯಿಲೆ ಬಂದ ವ್ಯಕ್ತಿಯು ವಿಶ್ರಾಂತಿ ತೆಗೆದುಕೊಳ್ಳುವುದು ಅವಶ್ಯಕ. ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಹಣ್ಣಿನ ಜ್ಯೂಸ್ ಕುಡಿಯುತ್ತಿರಬೇಕು. ಜ್ವರ ಕಡಿಮೆಯಾಗಲು ಪ್ಯಾರಸಿಟಮಾಲ್ ಮಾತ್ರೆಯೇ ಮುಖ್ಯವಾದ ಔಷಧ. ಅದರೊಂದಿಗೆ ಪಪ್ಪಾಯಿ ಹಾಗೂ ಕೀವಿ ಹಣ್ಣುಗಳ ಸೇವನೆಯಿಂದ ರೋಗವನ್ನು ಗುಣಪಡಿಸಿಕೊಳ್ಳಬಹುದು.

ಮುನ್ನೆಚ್ಚರಿಕೆ ಕ್ರಮಗಳು: ಏಡಿಸ್ ಈಜಿಪ್ಟಿ ಸೊಳ್ಳೆಗಳು ಹೂಕುಂಡಗಳು, ನೀರಿನ ತೊಟ್ಟಿಗಳು, ಟೈರ್ ಗಳಲ್ಲಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಹೀಗಾಗಿ ಕುಂಡಗಳು, ಟೈರ್‌ಗಳು ಮತ್ತಿತರ ವಸ್ತುಗಳನ್ನು ಸ್ವಚ್ಛಗೊಳಿಸಬೇಕು. ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಬಹುದಾಗಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 5 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ