ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ.

ರಾಜ್ಯದಲ್ಲಿ ಡೆಂಗ್ಯೂವಿನ ಆರ್ಭಟ ಜೋರಾಗಿದೆ. ಡೆಂಗ್ಯೂ ಹೆಸರೇ ಹೇಳುವಂತೆ ಭಯಾನಕ ಕಾಯಿಲೆಯಾಗಿದ್ದು, ಒಮ್ಮೆ ದೇಹದೊಳಗೆ ಒಕ್ಕರಿಸಿಕೊಂಡು ಬಿಟ್ಟರೆ ದೇಹದ ಶಕ್ತಿಯನ್ನು ಕುಗ್ಗಿಸಿ ಬಿಡುತ್ತವೆ. ಈ ಡೆಂಗ್ಯೂ ಜ್ವರವೂ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೇ ಹೆಚ್ಚು.

ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವ: ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಡೆಂಗ್ಯೂ ರೋಗ ಹೇಗೆ ಬರುತ್ತದೆ? ಭಾರತದಲ್ಲಿ ಪ್ರತಿ ವರ್ಷ ಡೆಂಗ್ಯೂ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಡೆಂಗ್ಯೂ ವೈರಸ್‌ನಿಂದ ಉಂಟಾಗುವ ವೈರಲ್ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾಗಿರುವ ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ 3-14 ದಿನಗಳ ನಂತರ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಕಕಾಣಿಸಿಕೊಂಡ ತಕ್ಷಣವೇ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ರೋಗದಿಂದ ಗುಣಮುಖರಾಗಬಹುದು.

ಡೆಂಗ್ಯೂವಿನ ರೋಗಲಕ್ಷಣಗಳೇನು?

ಜ್ವರ ವಾಂತಿವಾಕರಿಕೆ ದದ್ದುಗಳು ವಿಪರೀತವಾದ ಮೈ ಕೈ ನೋವು, ಕೀಲು ನೋವು, ತಲೆನೋವು ಈ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಚಿಕಿತ್ಸೆ ಹೇಗೆ: ಸೋಂಕಿತ ವ್ಯಕ್ತಿಯಲ್ಲಿ ವಿಪರೀತ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಬೇಕು. ಅದಲ್ಲದೇ ಈ ಡೆಂಗ್ಯೂ ಕಾಯಿಲೆ ಬಂದ ವ್ಯಕ್ತಿಯು ವಿಶ್ರಾಂತಿ ತೆಗೆದುಕೊಳ್ಳುವುದು ಅವಶ್ಯಕ. ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಹಣ್ಣಿನ ಜ್ಯೂಸ್ ಕುಡಿಯುತ್ತಿರಬೇಕು. ಜ್ವರ ಕಡಿಮೆಯಾಗಲು ಪ್ಯಾರಸಿಟಮಾಲ್ ಮಾತ್ರೆಯೇ ಮುಖ್ಯವಾದ ಔಷಧ. ಅದರೊಂದಿಗೆ ಪಪ್ಪಾಯಿ ಹಾಗೂ ಕೀವಿ ಹಣ್ಣುಗಳ ಸೇವನೆಯಿಂದ ರೋಗವನ್ನು ಗುಣಪಡಿಸಿಕೊಳ್ಳಬಹುದು.

ಮುನ್ನೆಚ್ಚರಿಕೆ ಕ್ರಮಗಳು: ಏಡಿಸ್ ಈಜಿಪ್ಟಿ ಸೊಳ್ಳೆಗಳು ಹೂಕುಂಡಗಳು, ನೀರಿನ ತೊಟ್ಟಿಗಳು, ಟೈರ್ ಗಳಲ್ಲಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಹೀಗಾಗಿ ಕುಂಡಗಳು, ಟೈರ್‌ಗಳು ಮತ್ತಿತರ ವಸ್ತುಗಳನ್ನು ಸ್ವಚ್ಛಗೊಳಿಸಬೇಕು. ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಬಹುದಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ