ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ.

ರಾಜ್ಯದಲ್ಲಿ ಡೆಂಗ್ಯೂವಿನ ಆರ್ಭಟ ಜೋರಾಗಿದೆ. ಡೆಂಗ್ಯೂ ಹೆಸರೇ ಹೇಳುವಂತೆ ಭಯಾನಕ ಕಾಯಿಲೆಯಾಗಿದ್ದು, ಒಮ್ಮೆ ದೇಹದೊಳಗೆ ಒಕ್ಕರಿಸಿಕೊಂಡು ಬಿಟ್ಟರೆ ದೇಹದ ಶಕ್ತಿಯನ್ನು ಕುಗ್ಗಿಸಿ ಬಿಡುತ್ತವೆ. ಈ ಡೆಂಗ್ಯೂ ಜ್ವರವೂ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೇ ಹೆಚ್ಚು.

ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವ: ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಡೆಂಗ್ಯೂ ರೋಗ ಹೇಗೆ ಬರುತ್ತದೆ? ಭಾರತದಲ್ಲಿ ಪ್ರತಿ ವರ್ಷ ಡೆಂಗ್ಯೂ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಡೆಂಗ್ಯೂ ವೈರಸ್‌ನಿಂದ ಉಂಟಾಗುವ ವೈರಲ್ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾಗಿರುವ ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ 3-14 ದಿನಗಳ ನಂತರ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಕಕಾಣಿಸಿಕೊಂಡ ತಕ್ಷಣವೇ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ರೋಗದಿಂದ ಗುಣಮುಖರಾಗಬಹುದು.

ಡೆಂಗ್ಯೂವಿನ ರೋಗಲಕ್ಷಣಗಳೇನು?

ಜ್ವರ ವಾಂತಿವಾಕರಿಕೆ ದದ್ದುಗಳು ವಿಪರೀತವಾದ ಮೈ ಕೈ ನೋವು, ಕೀಲು ನೋವು, ತಲೆನೋವು ಈ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಚಿಕಿತ್ಸೆ ಹೇಗೆ: ಸೋಂಕಿತ ವ್ಯಕ್ತಿಯಲ್ಲಿ ವಿಪರೀತ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಬೇಕು. ಅದಲ್ಲದೇ ಈ ಡೆಂಗ್ಯೂ ಕಾಯಿಲೆ ಬಂದ ವ್ಯಕ್ತಿಯು ವಿಶ್ರಾಂತಿ ತೆಗೆದುಕೊಳ್ಳುವುದು ಅವಶ್ಯಕ. ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಹಣ್ಣಿನ ಜ್ಯೂಸ್ ಕುಡಿಯುತ್ತಿರಬೇಕು. ಜ್ವರ ಕಡಿಮೆಯಾಗಲು ಪ್ಯಾರಸಿಟಮಾಲ್ ಮಾತ್ರೆಯೇ ಮುಖ್ಯವಾದ ಔಷಧ. ಅದರೊಂದಿಗೆ ಪಪ್ಪಾಯಿ ಹಾಗೂ ಕೀವಿ ಹಣ್ಣುಗಳ ಸೇವನೆಯಿಂದ ರೋಗವನ್ನು ಗುಣಪಡಿಸಿಕೊಳ್ಳಬಹುದು.

ಮುನ್ನೆಚ್ಚರಿಕೆ ಕ್ರಮಗಳು: ಏಡಿಸ್ ಈಜಿಪ್ಟಿ ಸೊಳ್ಳೆಗಳು ಹೂಕುಂಡಗಳು, ನೀರಿನ ತೊಟ್ಟಿಗಳು, ಟೈರ್ ಗಳಲ್ಲಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಹೀಗಾಗಿ ಕುಂಡಗಳು, ಟೈರ್‌ಗಳು ಮತ್ತಿತರ ವಸ್ತುಗಳನ್ನು ಸ್ವಚ್ಛಗೊಳಿಸಬೇಕು. ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಬಹುದಾಗಿದೆ.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 34 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 69 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 31 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 32 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 102 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 177 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ