ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ.

ರಾಜ್ಯದಲ್ಲಿ ಡೆಂಗ್ಯೂವಿನ ಆರ್ಭಟ ಜೋರಾಗಿದೆ. ಡೆಂಗ್ಯೂ ಹೆಸರೇ ಹೇಳುವಂತೆ ಭಯಾನಕ ಕಾಯಿಲೆಯಾಗಿದ್ದು, ಒಮ್ಮೆ ದೇಹದೊಳಗೆ ಒಕ್ಕರಿಸಿಕೊಂಡು ಬಿಟ್ಟರೆ ದೇಹದ ಶಕ್ತಿಯನ್ನು ಕುಗ್ಗಿಸಿ ಬಿಡುತ್ತವೆ. ಈ ಡೆಂಗ್ಯೂ ಜ್ವರವೂ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೇ ಹೆಚ್ಚು.

ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವ: ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಡೆಂಗ್ಯೂ ರೋಗ ಹೇಗೆ ಬರುತ್ತದೆ? ಭಾರತದಲ್ಲಿ ಪ್ರತಿ ವರ್ಷ ಡೆಂಗ್ಯೂ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಡೆಂಗ್ಯೂ ವೈರಸ್‌ನಿಂದ ಉಂಟಾಗುವ ವೈರಲ್ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾಗಿರುವ ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ 3-14 ದಿನಗಳ ನಂತರ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಕಕಾಣಿಸಿಕೊಂಡ ತಕ್ಷಣವೇ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ರೋಗದಿಂದ ಗುಣಮುಖರಾಗಬಹುದು.

ಡೆಂಗ್ಯೂವಿನ ರೋಗಲಕ್ಷಣಗಳೇನು?

ಜ್ವರ ವಾಂತಿವಾಕರಿಕೆ ದದ್ದುಗಳು ವಿಪರೀತವಾದ ಮೈ ಕೈ ನೋವು, ಕೀಲು ನೋವು, ತಲೆನೋವು ಈ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಚಿಕಿತ್ಸೆ ಹೇಗೆ: ಸೋಂಕಿತ ವ್ಯಕ್ತಿಯಲ್ಲಿ ವಿಪರೀತ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಬೇಕು. ಅದಲ್ಲದೇ ಈ ಡೆಂಗ್ಯೂ ಕಾಯಿಲೆ ಬಂದ ವ್ಯಕ್ತಿಯು ವಿಶ್ರಾಂತಿ ತೆಗೆದುಕೊಳ್ಳುವುದು ಅವಶ್ಯಕ. ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಹಣ್ಣಿನ ಜ್ಯೂಸ್ ಕುಡಿಯುತ್ತಿರಬೇಕು. ಜ್ವರ ಕಡಿಮೆಯಾಗಲು ಪ್ಯಾರಸಿಟಮಾಲ್ ಮಾತ್ರೆಯೇ ಮುಖ್ಯವಾದ ಔಷಧ. ಅದರೊಂದಿಗೆ ಪಪ್ಪಾಯಿ ಹಾಗೂ ಕೀವಿ ಹಣ್ಣುಗಳ ಸೇವನೆಯಿಂದ ರೋಗವನ್ನು ಗುಣಪಡಿಸಿಕೊಳ್ಳಬಹುದು.

ಮುನ್ನೆಚ್ಚರಿಕೆ ಕ್ರಮಗಳು: ಏಡಿಸ್ ಈಜಿಪ್ಟಿ ಸೊಳ್ಳೆಗಳು ಹೂಕುಂಡಗಳು, ನೀರಿನ ತೊಟ್ಟಿಗಳು, ಟೈರ್ ಗಳಲ್ಲಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಹೀಗಾಗಿ ಕುಂಡಗಳು, ಟೈರ್‌ಗಳು ಮತ್ತಿತರ ವಸ್ತುಗಳನ್ನು ಸ್ವಚ್ಛಗೊಳಿಸಬೇಕು. ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಬಹುದಾಗಿದೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 46 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 33 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 80 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 40 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 239 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”