ವಾತ್ಸಲ್ಯ ಕುಟುಂಬಕ್ಕೆ ಸೂರು ಒದಗಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆಯವರ ಸೇವಾಮನೋಭಾವನೆಯ ಚಿಂತನೆಯಡಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಸೂರು ನಿರ್ಮಾಣ ಮಾಡಿ ಹಸ್ತಾಂತರಿಸುವ ಮಹತ್ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಂಪೂರ್ಣ ವೆಚ್ಚವನ್ನು ಭರಿಸಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಎರಡು ಅರ್ಹ ವಾತ್ಸಲ್ಯ ಕುಟುಂಬಗಳಿಗೆ ಮನೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗಣೇಶ್.ಬಿ ಯವರು ಕಸ್ತೂರಮ್ಮ ಹಾಗೂ ಮಲ್ಲಮ್ಮ ಭೀಮಣ್ಣ ದಂಪತಿಗಳಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡಿದರು.

ನಿರ್ಗತಿಕ ಕುಟುಂಬಗಳು ಸಮಾಜದಲ್ಲಿ ಎಲ್ಲರಂತೆ ನೆಮ್ಮದಿಯ ಜೀವನ ನಡೆಸಿ ಬಾಳಿಬದುಕಲು ವಾತ್ಸಲ್ಯ ಯೋಜನೆ ಸಹಕಾರಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕಳೆದ 4ದಶಕಗಳಿಂದ ರಾಜ್ಯಾದ್ಯಂತ ತನ್ನ ಸೇವಾ ಚಟುವಟಿಕೆಗಳನ್ನು ಮುನ್ನಡೆಸುತ್ತಾ ಬರುತ್ತಿದ್ದು ರಾಜ್ಯದಲ್ಲಿ 12ಸಾವಿರಕ್ಕೂ ಹೆಚ್ಚಿನ ಅತ್ಯಂತ ಕಡುಬಡವ ವೃದ್ಧ ಕುಟುಂಬಗಳಿಗೆ ತನ್ನ ಜೀವನ ನಿರ್ವಹಣೆಯ ಅಗತ್ಯತೆಗಳನ್ನು ಪೂರೈಸಲು ನೆರವಾಗುವ ನಿಟ್ಟಿನಲ್ಲಿ ಮಾಸಿಕ ಸಹಾಯಧನ ನೀಡುತ್ತಿದ್ದು ನಿರ್ಗತಿಕ ಕುಟುಂಬಗಳ ಸದಸ್ಯರು ತನ್ನ ಹಸಿವನ್ನು ನೀಗಿಸಲು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ನೆರವಾಗುತ್ತಿದೆ. ಇಂತಹ ಅರ್ಹ ಕುಟುಂಬಗಳನ್ನು ಗುರುತಿಸಿ ಪಾತ್ರೆಪರಿಕರಗಳು, ವಸ್ತ್ರ ಹಾಗೂ ಅಗತ್ಯ ವಸ್ತುಗಳ ಕಿಟ್ ಗಳನ್ನು ಒದಗಿಸಿ ಇದೀಗ ವಾಸಿಸಲು ಯೋಗ್ಯವಲ್ಲದ ಮನೆಯಲ್ಲಿರುವ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡುವ ಕಾರ್ಯಕ್ಕೆ ನಮ್ಮ ಸಂಸ್ಥೆ ಮುಂದಾಗಿದೆ. ಇಂದಿನ ಈ ಆಧುನಿಕ ಯುಗದಲ್ಲಿಯೂ ಇಂತಹ ಹಲವು ಕುಟುಂಬಗಳಿದ್ದು ಇವರಿಗೆ ಆಸರೆಯನ್ನೊದಗಿಸುವ ಡಾ. ಹೇಮಾವತಿ ವಿ ಹೆಗ್ಗಡೆಯವರ ಕನಸು ಇದೀಗ ನನಸಾಗಿದೆ. ವಾತ್ಸಲ್ಯ ಮನೆಯೊಂದಿಗೆ ಮೂಲಭೂತ ಸೌಕರ್ಯ ಗಳಾದ ಸ್ನಾನ ಗೃಹ ಮತ್ತು ಶೌಚಾಲಯವನ್ನು ನಿರ್ಮಾಣ ಮಾಡಿ ಇಂದು ಹಸ್ತಾಂತರ ಮಾಡಿದ್ದೇವೆ ಈ ಕುಟುಂಬಗಳಿಗೆ ಮುಂದಿನ ದಿನಗಳಲ್ಲಿ ಒಳಿತಾಗಲಿ ಎಂದು ಶುಭಹಾರೈಸಿದರು.

ವಾತ್ಸಲ್ಯ ಫಲಾನುಭವಿ ಕಸ್ತೂರಮ್ಮರವರು ವಾಸವಿದ್ದ ಗುಡಿಸಲು ಹಾಗೂ ನೂತನವಾಗಿ ನಿರ್ಮಿಸಿರುವ ಮನೆ
ವಾತ್ಸಲ್ಯ ಫಲಾನುಭವಿ ಮಲ್ಲಮ್ಮ ಭೀಮಣ್ಣರು ಈ ಹಿಂದೆ ವಾಸವಾಗಿದ್ದ ಗುಡಿಸಲು ಹಾಗೂ ನೂತನವಾಗಿ ನಿರ್ಮಿಸಿರುವ ಮನೆ

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್, ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ ಕಾನರ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸತೀಶ್ ಬಳೆ, ವಾಣಿಶ್ರೀ ಯುವಬ್ರಿಗೇಡ್ ಗಬ್ಬೂರು ಇದರ ಸದಸ್ಯರು, ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಕಾರ್ಯಕರ್ತರು, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಯವರು ಹಾಗೂ ಊರಿನ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 6 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ