ಧಾರವಾಡ SDM ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಉದ್ಘಾಟನೆ

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್​ಡೌನ್​ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

ಸತ್ತೂರಿನ ಎಸ್​ಡಿಎಂ ಆಸ್ಪತ್ರೆಯಲ್ಲಿ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ. ಕೊರೊನಾ ವಾರಿಯರ್​ಗಳಾಗಿರುವ ವೈದ್ಯರು ನರ್ಸ್​ಗಳ ಸೇವೆ ಅನನ್ಯವಾದುದು. ಕೋವಿಡ್ ಬಗ್ಗೆ ಮಾಧ್ಯಮಗಳು ಭಯ ಸೃಷ್ಟಿಸದೇ, ಜಾಗೃತಿ ಮೂಡಿಸಬೇಕು. ಶೇ.64 ರಷ್ಟು ಜನ ಗುಣಮುಖರಾಗಿ ಬಿಡುಗಡೆಯಾಗುತ್ತಿದ್ದಾರೆ ಎಂದರು.

ಕೋವಿಡ್ ತಡೆಗೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ತ್ವರಿತವಾಗಿ ಕಾರ್ಯೋನ್ಮುಖರಾದ ಪರಿಣಾಮ ಇಂದು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತಿದೆ. ಜನರ ಅಭಿಪ್ರಾಯ ಆಧರಿಸಿ ಜಿಲ್ಲೆಯಲ್ಲಿ ಹತ್ತು ದಿನಗಳ ಲಾಕ್​ಡೌನ್ ಜಾರಿಯಲ್ಲಿದೆ. ಪ್ರತಿಯೊಬ್ಬರೂ ಸ್ವಯಂ ನಿರ್ಬಂಧ ಹಾಕಿಕೊಂಡು ಕೊರೊನಾ ತಡೆಯಲು ಕೈ ಜೋಡಿಸಬೇಕು ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

ಆನ್​ಲೈನ್ ಗೂಗಲ್ ಮೀಟ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮಾತನಾಡಿ, ಈ ವಿಷಮ ಪರಿಸ್ಥಿತಿ ಎದುರಿಸಿ ಜಯಿಸಬೇಕಾಗಿದೆ. ಸೋಂಕಿನ ಸರಪಳಿ ತುಂಡರಿಸಲು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಜೊತೆಗೆ ಹೆಚ್ಚು ಪರೀಕ್ಷೆಗಳು ಆಗಬೇಕು. ನಮ್ಮ ದೇಶದ ಜನಸಂಖ್ಯೆ, ಜನಸಾಂದ್ರತೆಗೆ ಹೋಲಿಸಿದಾಗ ಕೋವಿಡ್ ನಿಯಂತ್ರಣದಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯುಳ್ಳ ಕ್ರಮಗಳು ಉತ್ತಮ ಪರಿಣಾಮ ನೀಡುತ್ತಿವೆ. ದೇಶದಲ್ಲಿ ಕಳೆದ ಜನವರಿ 1 ರ ಹೊತ್ತಿಗೆ ಪಿಪಿಇ ಕಿಟ್, ಎನ್-95 ಮಾಸ್ಕ್​ಗಳ ಲಭ್ಯತೆ ವಿರಳವಾಗಿತ್ತು. ಈಗ ಪ್ರತಿನಿತ್ಯ ಭಾರತದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಹೊರದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ. ಕೋವಿಡ್ ಭಯಾನಕ ಖಾಯಿಲೆಯಲ್ಲ. ಕಳೆದ ಹತ್ತು ವರ್ಷಗಳಿಂದ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತಮ್ಮ ಆತ್ಮವಿಶ್ವಾಸದಿಂದ ಕೋವಿಡ್​ನಿಂದಲೂ ಗುಣಮುಖರಾಗಿರುವುದನ್ನು ಗಮನಿಸಿದಾಗ ಸಾರ್ವಜನಿಕರ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭಾಗಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭಾಗಿ

ಗೂಗಲ್ ಮೀಟ್ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು, ಎಸ್​ಡಿಎಂ ಅಧಿಕಾರಿಗಳು ಭಾಗವಹಿಸಿದ್ದರು.


ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 117 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 74 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ