🚩 “ಧರ್ಮ‌ನಿಂದನಾ ವಿರೋಧಿ ಕಾಯಿದೆ” ಯನ್ನು ಜಾರಿಗೆ ತನ್ನಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಗ್ರಹ

ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ನಾಟಕಗಳು, ಚಲನಚಿತ್ರಗಳಲ್ಲಿ, ಜಾಹಿರಾತು ಇತ್ಯಾದಿ ವಿವಿಧ ಮಾಧ್ಯಮಗಳಿಂದ ಹಿಂದೂ ಧರ್ಮ, ಹಿಂದೂ ದೇವತೆಗಳು, ಹಿಂದೂ ಸಮಾಜ ‌ಹಾಗೂ ಹಿಂದೂ ಸಂತರ ಅಪಮಾನ ಮಾಡಲಾಗುತ್ತಿದೆ. ಇವುಗಳನೆಲ್ಲಾ ಹಿಂದೂ ಸಮಾಜವು ವಿರೋಧ ಮಾಡುತ್ತಿದೆಯಾದರೂ ಇಂತಹ ಅಪಮಾನ ವಿರುದ್ಧ ಸೂಕ್ತ ಕಾನೂನು ಜಾರಿಗೊಳಿಸದ ಕಾರಣ ಅಪಮಾನ ಮಾಡುವವರು ನಿರಂತರ ಮಾಡುತ್ತಾ ಇರುತ್ತಾರೆ. ಹಿಂದೂ ಧರ್ಮ, ದೇವತೆ, ಸಾಧು-ಸಂತರ ಅಪಮಾನವನ್ನು ತಡೆಗಟ್ಟಲು ಕಠಿಣ ಕಾನೂನು ಜಾರಿಗೆಗೊಳಿಸಬೇಕು ಮತ್ತು ತಕ್ಷಣವೇ ಅದರ ಅನುಸಾರ ಕಾರ್ಯಾಚರಣೆ ಪ್ರಾರಂಭಿಸಬೇಕೆಂದು ಬೇಡಿಕೆಯನ್ನು ನೀಡುತ್ತಾ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ತಹಶಿಲ್ದಾರರಾದ ಶ್ರೀ.ಶಂಕರ್ ಇವರ ಮೂಲಕ ಕೇಂದ್ರ ಗೃಹಸಚಿವರು ಮತ್ತು ಕಾನೂನು ಸಚಿವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ.ಮೋಹನ್ ಬೆಳ್ತಂಗಡಿ, ವಿಶ್ವಹಿಂದೂ ಪರಿಷತ್ ತಾಲೂಕು ಪ್ರಧಾನ ಕಾರ್ಯದರ್ಶಿ, ಶ್ರೀ.ಕೇಶವ ಅಚ್ಚಿನಡ್ಕ, ಬೆಳ್ತಂಗಡಿ ನಗರ ಬಿಜೆಪಿ ಕಾರ್ಯದರ್ಶಿ, ಶ್ರೀ.ಉದಯ್ ಕುಮಾರ್ ವಕೀಲರು ಬಂದಾರು, ಮತ್ತು ಶ್ರೀ. ಮುರುಳಿಧರ ಕೆಲ್ಲಗುತ್ತು, ಪ್ರಗತಿಪರ ಕೃಷಿಕರು ಮತ್ತು ಸಮಿತಿಯ ಕಾರ್ಯಕರ್ತರು ಉಪಸ್ಥಿತಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ