ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್‌ ಉದ್ಘಾಟನೆ 10ಸಾವಿರ ಆಸನ, ಅತ್ಯಾಧುನಿಕ ಸೌಕರ್ಯಗಳ ಸಂಕೀರ್ಣ ಉಪ ರಾಷ್ಟ್ರಪತಿಯವರಿಂದ ಚಾಲನೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಡಿ ಅತ್ಯಾಕರ್ಷಕ ವಿನ್ಯಾಸ ಹಾಗೂ ವೈಜ್ಞಾನಿಕವಾಗಿ ರೂಪಿತವಾದ 10 ಸಾವಿರ ಆಸನ ಸಾಮರ್ಥದ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಜ. 7ರಂದು ಉದ್ಘಾಟನೆಗೊಳ್ಳಲಿದೆ.

• ಶ್ರೀ ಸಾನ್ನಿಧ್ಯದೊಳಗೆ ಆರಾಮದಾಯಕ ಆಸನದ ವ್ಯವಸ್ಥೆ ಉಪಾಹಾರ, ವೃದ್ಧರು, ಅಂಗವಿಕಲರು, ಮಕ್ಕಳ ಆರೈಕೆ ಕೇಂದ್ರ, ವೈದ್ಯಕೀಯ ನೆರವು, ಟಿವಿ ಸಹಿತ ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ದರ್ಶನದ ಸಮಯ, ಕ್ಷೇತ್ರದ ವಿವಿಧ ಸೇವೆಗಳ ವಿವರಗಳು ಲಭ್ಯವಾಗುವಂತೆ ಡಿಜಿಟಲ್ ತಂತ್ರಜ್ಞಾನ ಅಳವಡಿಸಲಾಗಿದೆ.

• ಯಾರಾದರೂ ತಪ್ಪಿ ಹೋದರೆ ಅಥವಾ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರೂ ಅವರನ್ನು ಗುರುತಿಸುವ ತಂತ್ರಜ್ಞಾನ ಇಲ್ಲಿದೆ.

•10 ಸಾವಿರ ಆಸನ ವ್ಯವಸ್ಥೆ ಡಿಜಿಟಲ್ ತಂತ್ರಜ್ಞಾನದ ಮಾಹಿತಿ, ವಿಶ್ರಾಂತಿ, ಶೌಚಾಲಯ ವ್ಯವಸ್ಥೆ ಹವಾನಿಯಂತ್ರಿತ ಕೊಠಡಿಗಳು

•ಸಾಂಪ್ರದಾಯಿಕ ಮತ್ತು ಆಧುನಿಕ ವಾಸ್ತುಶಿಲ್ಪದೊಂದಿಗೆ ನಿರ್ಮಾಣಗೊಂಡ ಈ ಸಂಕೀರ್ಣ 2.75 ಲಕ್ಷ ಚದರ

•ಅಡಿ ವಿಸ್ತೀರ್ಣ ಹೊಂದಿದೆ ವಿಶಿಷ್ಟ ಕಲಾಕೃತಿಗಳೂ ಇವೆ. ಕಟ್ಟಡಕ್ಕೆ ಸಂಪೂರ್ಣ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಲಾಗಿದೆ.

ಉಪ ರಾಷ್ಟ್ರಪತಿಗಳಿಂದ ಉದ್ಘಾಟನೆ ಜ.7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಡಾ| ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಕೀರ್ಣವನ್ನು ಉದ್ಘಾಟಿಸುವರು.

ಉಪ ರಾಷ್ಟ್ರಪತಿಗಳ ಪತ್ನಿ ಡಾ।ಸುದೇಶ್ ಧನ್‌ಕರ್ ಮುಖ್ಯ ಅತಿಥಿಗಳಾಗಿರುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹೇಮಾವತಿ ವೀ. ಹೆಗ್ಗಡೆ, ಸಂಸದ ಕ್ಯಾ।। ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಡಿ.ಹರ್ಷೇಂದ್ರ ಕುಮಾರ್, ಎಸ್.ಕೆ.ಡಿ.ಆರ್.ಡಿ.ಪಿ. ಸಿಇಒ ಅನಿಲ್ ಕುಮಾರ್ ಎಸ್.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ