ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.

” ಜಿಲ್ಲಾ ರಾಜೋತ್ಸವ ಪ್ರಶಸ್ತಿ’, ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ” ಪುರಸ್ಕೃತ ಕಲಾ ಬ್ರಹ್ಮ ದಿನೇಶ್ ಪ್ರಭು ಕಲ್ಲೊಟ್ಟೆ ಸಾರಥ್ಯದ ಪಲ್ಲವಿ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ನೂತನ ನಾಟಕದಿಬ್ಬಣ ಅತ್ಯಂತ ಯಶಸ್ವಿಯಾಗಿ ಪ್ರಥಮ ಪ್ರದರ್ಶನ ಕಂಡು ಜನಮೆಚ್ಚುಗೆಯನ್ನು ಪಡೆದುಕೊಂಡಿದೆ.

ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ, ಜಗನಾಥ ಶೆಟ್ಟಿ ಕುಡ್ಲ ನಿರ್ದೇಶಿರುವ ನಾಟಕವು  ಅತ್ಯುತ್ತಮ ಕೌಟುಂಬಿಕ ಚಿತ್ರಣವನ್ನು ತೊರಿಸುವುದಲ್ಲದೆ  ಪ್ರಸ್ತುತ ದಿನಗಳಲ್ಲಿ ಅತ್ಯಂತ ಕ್ರೂರವಾಗಿ ಸಮಾಜದ ಹೆಣ್ಣುಮಗಳೊಬ್ಬಳ ಮೇಲೆ ಆಗುವ ದೌರ್ಜನ್ಯವನ್ನೂ, ಕನಸೆಂಬ ಕುದುರೆಯನ್ನೇರಿ ಪ್ರಯಾಣಿಸುತ್ತಿರುವ ಹೆತ್ತವರ ಪಾಡು, ಅತ್ಯಂತ ಧಯನೀಯವಾಗಿ ಪ್ರೇಕ್ಷಕರ ಕಣ್ಣಂಚನ್ನು ಒದ್ದೆಯಾಗಿಸುತ್ತ ಸಮಾಜ ವರ್ಗವು ಒಂದು ದಿಟ್ಟ ನಿರ್ದಾರಕ್ಕೆ ಬರುವಂತೆ ಸಂದೇಶಿಸುವ ರಂಗ ಚಿತ್ರಣವೇ "ದಿಬ್ಬಣ".

 ನಾಟಕದ ಪ್ರಾರಂಭದಿಂದಲೂ ಅಂತ್ಯದವರೆಗೂ ಪ್ರೇಕ್ಷಕರನ್ನು ಒಂದರ ಮೇಲೊಂದು ಭಿನ್ನ ವಿಭಿನ್ನ ಶೈಲಿಯಲ್ಲಿ ಬರುವ ಪಾತ್ರಗಳು,ಮಾಡುವ ಅವಾಂತರಗಳು ಕಥೆಗೆ ಪೂರಕವಾಗಿಯೇ ಇರುವ ಹಾಸ್ಯದ ಸವಿಯು ಪ್ರೇಕ್ಷಕರನ್ನು ಕೂಳಿತಲ್ಲಿ ಕೂರದ ಹಾಗೆ ಕಚಗುಳಿ ಇಡುತ್ತಾ 100% "ದಿಬ್ಬಣ" ಒಂದು ಸೂಪರ್ ಹಿಟ್ ನಾಟಕವಾಗಿ ಹೊರಹೊಮ್ಮಿದೆ.
Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ