ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ

ದಿಡುಪೆ: ಮಲವಂತಿಗೆ ದಿಡುಪೆ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಬೆಳಗ್ಗೆ 7.30 ಕ್ಕೆ ಸರಿಯಾಗಿ ದಿಡುಪೆಯಿಂದ ಸುಮಾರು 2.5k ದೂರದಲ್ಲಿರುವ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಜಕ್ಕೆ, ಮಲವಂತಿಗೆ ಈ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ ಬಸ್ಸ್ ಸೌಲಭ್ಯ ಒದಗಿಸಲು ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಬಂದ ಮನವಿಗೆ ಬೆಳ್ತಂಗಡಿ ಶಾಸಕರು ಹಾಗೂ ರಸ್ತೆ ಸಾರಿಗೆ ಸಂಸ್ಥೆಯು ಸ್ವಂಪಂದಿಸಿ ಕಜಕ್ಕೆ ಭಾಗಕ್ಕೆ ಬಸ್ ಬಿಡಲು ಮುಂದಾಗಿದ್ದು ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರು ಮೂಲಕ ಚಾಲನೆ ನೀಡಿದರು.

ಈ ರಸ್ತೆ ಸಾರಿಗೆ ಸಂಪರ್ಕ ವಿಸ್ತರಣೆ ವ್ಯವಸ್ಥೆಗೆ ದಿನಾಂಕ 01/07/2024 ರಂದು ಮಾನ್ಯ ಶಾಸಕರಾದ ಹರೀಶ್ ಪೂಂಜ KSRTC ಜನಸ್ಪಂದನಾ ಕಾರ್ಯಕ್ರಮ ಏರ್ಪಡಿಸಿದ್ದರು, ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮದ ಗ್ರಾಮದ ಅಭಿವೃದ್ಧಿಯ ಉದ್ದೇಶದಿಂದ ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಜಕ್ಕೆ ಮಲವಂತಿಗೆ ಇದ್ದು,ಇಲ್ಲಿ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಅದಲ್ಲದೆ ವಿವಿಧ ರೀತಿಯ ಚಟುವಟಿಕೆಯಲ್ಲಿ ಹಾಗೂ ಉತ್ತಮ ಶಾಲೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಂತ ವಿದ್ಯಾಸಂಸ್ಥೆಯಾಗಿದ್ದು, ಅದಲ್ಲದೆ ಮಲವಂತಿಗೆ ಮತ್ತು ಮಿತ್ತಬಾಗಿಲು ಕೇವಲ 2 ಗ್ರಾಮದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇಲ್ಲಿಯವರೆಗೆ ರಸ್ತೆ ಇದ್ದರೂ ಕೂಡ ಮೂಲಭೂತ ಸೌಕರ್ಯದ ಕೊರತೆಯಿಂದ ಸುಮಾರು 2.5km ನಡೆದುಕೊಂಡು ಹೋಗುವ ಪರಿಸ್ಥಿತಿ ಸುಮಾರು ವರ್ಷಗಳಿಂದ ನಡೆಯುತ್ತಿತ್ತು, ಸುಮಾರು 250 ಕ್ಕೂ ಅಧಿಕ ಮನೆಗಳಿದ್ದು ಅಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತುಂಬಾ ಅನುಕೂಲ ಆಗುವಂತೆ KSRTC ಪುತ್ತೂರು ವಿಭಾಗ ಕ್ಕೆ ಹಾಗೂKSRTC ಧರ್ಮಸ್ಥಳ ವಿಭಾಗಕ್ಕೆ ಹಾಗೂ ಮಾನ್ಯ ಶಾಸಕರಿಗೆ ಜುಲೈ 01.2024 ರಂದು KSRTC ಜನಸ್ಪಂದನಾ ಸಭೆಯ ಮೂಲಕ ಗ್ರಾಮಸ್ಥರ ಪರವಾಗಿ ನೀಡಿದ ಮನವಿಗೆ ಸ್ಪಂದಿಸಿ. ಬಸ್ ಸಂಚಾರ ವಿಸ್ತರಣೆ ಅನುಕೂಲ ಆಯಿತು.ಇಂದು ಬೆಳಗ್ಗೆ 7.30ಕ್ಕೆ ಸರಿಯಾಗಿ ಎರಡು KSRTC ಬಸ್ ಗಳನ್ನು ದಿಡುಪೆಯಿಂದ ಕಜಕ್ಕೆ ಭಾಗಕ್ಕೆ ವಿಶೇಷ ರೀತಿಯಲ್ಲಿ ಪುಟ್ಟ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಸೇರಿ ಹೂವಿನ ಅಲಂಕಾರ ಪುಷ್ಪಾರ್ಚನೆ ಹಾಗೂ ಸಿಹಿ ತಿಂಡಿ ಹಂಚಿ ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು . ಕರ್ನಾಟಕ ಸಾರಿಗೆ ವ್ಯವಸ್ಥೆಯ ಸಿಬ್ಬಂದಿ ವರ್ಗದವರಾದ ನಾರಾಯಣ ಪೂಜಾರಿ ಮುಂಡಾಜೆ ಹಾಗೂ ಚಾಲಕರು ಮತ್ತು ನಿರ್ವಾಹಕರಾದ ವಿನಾಯಚಂದ್ರ, ಕರುಣಾಕರ, ಮತ್ತು ದಯಾನಂದ ಇವರು ಉಪಸ್ಥಿರಿದ್ದರು. ಹಾಗೂ ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಕೇಶವ ಎಂ.ಕೆ, ಹಾಲು ಉತ್ಪಾದಕರ ಸಹಕಾರಿ ಸಂಘ ಮಲವಂತಿಗೆ ಅಧ್ಯಕ್ಷರಾದ ನಾರಾಯಣ ಗೌಡ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ತೀಕ್ಷಿತ್ ಕೆ.ಕಲ್ಬೆಟ್ಟುಶ್ರೀ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆಯ ಶಿಕ್ಷಕರಾದ ರಂಗನಾಥ ಮತ್ತು ಪರಮೇಶ್ವರ್ SDMC ಅಧ್ಯಕ್ಷರಾದ ಶೇಖರ ಗೌಡ ಪೊದ್ಕೆತರುಹಾಗೂ ಗ್ರಾಮಸ್ಥರಾದ ಮಧುಸೋದನ್ ಮಲ್ಲ, ಶೇಕರ ಗೌಡ ಹೊಳೆಕೆರೆ, ರಾಧಾಕೃಷ್ಣ ಗೌಡ ಮಜಲು,ರಮೇಶ್ ಗೌಡ ವಿದ್ಯಾನಗರ,ಸಚಿನ್ ಗೌಡ ಬದ್ಲಾಯಿ, ಶ್ರೀ ಹರಿ ಭಟ್ ಕಾರ್ಯದರ್ಶಿ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ಸಂಜೀವ ಗೌಡ ಪುನ್ಕೆದಡಿ, ರಮೇಶ್ ಗೌಡ,ಸಂಪತ್ ಪೂಜಾರಿ ಕಜಕ್ಕೆ,ಸಾಗರ್ ಅಡ್ಡಕೊಡಂಗೆ, ರಾಜೇಶ್ ಗೌಡ ಬರ್ಕಲಟ್ಟುಗ್ರಾಮಸ್ಥರು ಹಾಗೂ ಕಜಕ್ಕೆ ಶಾಲೆ ಪುಟಾಣಿಗಳು,ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯಸ್ಥರಾದ ಉಮೇಶ್ ಗೌಡ ಸ್ವಾಗತಿಸಿ, ಮತ್ತು ಶ್ರೀ ವಿದ್ಯಾಗಣಪತಿ ಸೇವೆ ಸಮಿತಿಯ ಕಾರ್ಯದರ್ಶಿಗಳಾದ ಜಯಂತ ಹೆಗ್ಡೆ ಇವರು ವಂದನಾರ್ಪಣೆ ಮಾಡಿದರು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ