ಪಶ್ಚಿಮ ಘಟ್ಟಗಳ ಹಾಗೂ ಕರಾವಳಿ ಪ್ರದೇಶಗಳ ಶಾಶ್ವತ ಸಂಪರ್ಕಕೊಂಡಿಗಾಗಿ ದಿಡುಪೆ ಸಂಸೆ ಎಳನೀರು ರಸ್ತೆ ನಿರ್ಮಾಣಕ್ಕೆ ಸದನದಲ್ಲಿ ಧ್ವನಿಯಾಗುವವರು ಯಾರು??

🖋️• ಸಂಪಾದಕರು 🎯ಕಾಲನಿರ್ಣಯನ್ಯೂಸ್

ಬೆಳ್ತಂಗಡಿ: ಉಭಯ ಜಿಲ್ಲೆಗಳ ಸಂಪರ್ಕಕೊಂಡಿ ನಿರ್ಮಾಣಕ್ಕಾಗಿ ಚಿಕ್ಕಮಗಳೂರು ಉಡುಪಿ ದಕ್ಷಿಣಕನ್ನಡ ಜಿಲ್ಲೆಯ ಲಕ್ಷಾಂತರ ಜನರ ಶತಮಾನದಕನಸ್ಸು ನನಸಾಗಿಸಲು ಹಾಗೂ ಪರ್ಯಾಯ ರಸ್ತೆ ನಿರ್ಮಾಣಕ್ಕಾಗಿ ಜನಪ್ರತಿನಿಧಿಗಳ ಒಗ್ಗಟ್ಟಿನ ಪ್ರದರ್ಶನ ಸದನದಲ್ಲಿ ಧ್ವನಿಯಾಗಲಿ.

ಮಂಗಳೂರು ಬೆಂಗಳೂರು ಸಂಪರ್ಕ ಕೊಂಡಿಗಳು ನಿರಂತರವಾಗಿ ಕಳಚಿಕೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿದ್ದು ಮಳೆಗಾಲದ ಸಮಯದಲ್ಲಿ ಚಾರ್ಮಾಡಿ ಘಾಟ್, ಶಿರಾಡಿ ಘಾಟಿಯಲ್ಲಿ ಸಂಚಾರಕ್ಕೆ ತೊಡಕಾಗುತ್ತಿದ್ದು ಇದಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಸರ್ಕಾರವನ್ನು ಮತ್ತೆ ಎಚ್ಚರಿಸುವ ಬಗ್ಗೆ ಜನಪ್ರತಿನಿಧಿಗಳು ಆಸಕ್ತರಾಗಬೇಕು. ಹಾಗೂ ಇದಕ್ಕಾಗಿ ಈ ಸಮಯ ಸೂಕ್ತವಾಗಿದೆ. ಮಂಗಳೂರು ಮಾಣಿ ರಸ್ತೆಯ ಮೂಲಕ ಗುಂಡ್ಯ ಶಿರಾಡಿಘಾಟ್ ಮೂಲಕ ಸಕಲೇಶಪುರ ಸಂಪರ್ಕ , ಮಂಗಳೂರು ಬಿಸಿರೋಡ್, ಬೆಳ್ತಂಗಡಿ ಉಜಿರೆ ಚಾರ್ಮಾಡಿ ಕೊಟ್ಟಿಗೆಹಾರ,ಹಾಸನ ಮಾರ್ಗವಾಗಿ ಬೆಂಗಳೂರು, ಮೈಸೂರು ಸಂಪರ್ಕ, ಮಂಗಳೂರು, ಪುತ್ತೂರು ಸುಳ್ಯ ಸಂಪಾಜೆ ಮೂಲಕ ಮೈಸೂರು ಬೆಂಗಳೂರು ಸಂಪರ್ಕ ಮಾಡಬಹುದು ಆದರೆ ಇತ್ತೀಚಿನ ದಿನಗಳಲ್ಲಿ ಶಿರಾಡಿಘಾಟ್, ಚಾರ್ಮಾಡಿ ಘಾಟ್, ಸಂಪಾಜೆ ಘಾಟ್ ಪ್ರತಿವರ್ಷ ಮಳೆಯಿಂದ ಸಂಚಾರಕ್ಕೆ ತೋಡಕು ಉಂಟಾಗಿ ಸಂಪರ್ಕ ಕೊಂಡಿ ಕಳಚಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ತೇಪೆ ಕಾರ್ಯದ ಬದಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ. ಚಾರ್ಮಾಡಿ ಘಾಟ್ ಹಾಗೂ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆ ಅಗಲೀಕರಣ ಮಾಡಲು ಆಗದೇ ಇದರಿಂದ ನಿರಂತರ ಪ್ರಾಕೃತಿಕ ದುರಂತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂದಕ್ಕೂ ಸಮಸ್ಯೆ ಕಟ್ಟಿಟ್ಟಬುತ್ತಿ.

ಧಾರ್ಮಿಕ ಕೇಂದ್ರಗಳ ಸಂಪರ್ಕ ಕೊಂಡಿಯೂ ಹೌದು:

ಇತಿಹಾಸ ಪ್ರಸಿದ್ಧ ಕ್ಷೇತ್ರಗಳಾದ ಶ್ರೀ ಕುಕ್ಕೆಸುಬ್ರಹ್ಮಣ್ಯದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ , ಕಾಜೂರು ದರ್ಗಾ ಶರೀಫ್ ಮಸೀದಿ , ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ ಕ್ಷೇತ್ರ ಹಾಗೂ ಇತರ ಧಾರ್ಮಿಕ ಕ್ಷೇತ್ರಗಳಿಗೆ ಹತ್ತಿರದ ಸಂಪರ್ಕ ಸೇತುವು ಇದಾಗಿದೆ.

ಪ್ರವಾಸೋದ್ಯಮಕ್ಕೂ ಇದು ಪೂರಕ:

ಪಶ್ಚಿಮ ಘಟ್ಟಗಳ ಸ್ವಾದವನ್ನು ಅರಿಯಲು ಹಾಗೂ ಎರ್ಮಾಯಿಫಾಲ್ಸ್,ಬಂಡಾಜೆ ಪಾಲ್ಸ್, ಕಡಮಗುಂಡಿ ಫಾಲ್ಸ್, ಸಿರಿಮನೆ ಫಾಲ್ಸ್, ಹಾಗೂ ವಿವಿಧ ಜಲಪಾತಗಳನ್ನು ಈ ಸಂಪರ್ಕ ರಸ್ತೆಯಿಂದ ಸಂದಿಸಬಹುದಾಗಿದೆ.

ಪರ್ಯಾಯ ಹಾಗೂ ಶಾಶ್ವತ ಪರಿಹಾರ ಹೇಗೆ: ಮಂಗಳೂರು ಉಜಿರೆ ಸೋಮಂತ್ತಡ್ಕ ಕಾನರ್ಪ ಕಾಜೂರು ಡಿಡುಪೆ ಸಂಸೆ ಎಳನೀರು ಸಂಪರ್ಕ ವ್ಯವಸ್ಥೆ ಮಾಡುವ ಬಗ್ಗೆ ಅನುಮೋದನೆ ಮಾಡಿಸುವಲ್ಲಿ ಜನಪ್ರತಿನಿಧಿಗಳು ಪ್ರಯತ್ನಿಸಬೇಕು ಇದರಿಂದ ಕೇವಲ 5ರಿಂದ 7ಕಿ.ಮಿ ಒಳಗೆ ಅರಣ್ಯದೊಳಗೆ ರಸ್ತೆ ನಿರ್ಮಾಣ ಆಗಬೇಕಾಗಿದೆ ಈಗಾಗಲೇ ಈ ಸಂಪರ್ಕಕ್ಕಾಗಿ ಕಚ್ಚಾರಸ್ತೆ ನಿರ್ಮಾಣ ಆಗಿದ್ದು ಇದರ ಅಗಲೀಕರಣ ಹಾಗೂ ಯೋಗ್ಯ ರಸ್ತೆ ನಿರ್ಮಾಣ ಆಗಬೇಕಾಗಿದೆ ಇದಕ್ಕಾಗಿ ಸುರಂಗ ಮಾರ್ಗ ಮಾಡಿದರು ಯಾವುದೇ ಅರಣ್ಯಕ್ಕಾಗಲಿ ವನ್ಯಜೀವಿಗಳ ಓಡಾಟಕ್ಕಾಗಲಿ ಸಮಸ್ಯೆ ಇಲ್ಲದೆ ಮಾಡಬಹುದು ಕನಿಷ್ಠ 7ಕಿ.ಮೀಗೆ ಫ್ಲೈಓವರ್ ರಸ್ತೆ ನಿರ್ಮಾಣವನ್ನು ಮಾಡಬಹುದಾಗಿದೆ. ಚಾರ್ಮಾಡಿ ಶಿರಾಡಿ ಸಂಪಾಜೆ ಘಾಟ್ ಸುಮಾರು 30ಕಿ.ಮೀ ರಿಂದ 40ಕಿ.ಮೀ ದೂರ ಸಂಚಾರ ಇದ್ದು ಇದಕ್ಕೆ ಪರ್ಯಾಯವಾಗಿ ದಿಡುಪೆ ಸಂಸೆ ಎಳನೀರು ರಸ್ತೆ ಅಭಿವೃದ್ಧಿ ಮಾಡುವುದು ಬಹಳ ಯೋಗ್ಯಕರ.

ಕಳಸ ತಾಲೂಕಿನ ಸಂಸೆಯಿಂದ ಬೆಳ್ತಂಗಡಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಬಗ್ಗೆ ಶಾಸಕರಾದ  ನಯನಾ ಮೋಟಮ್ಮ ಮತ್ತು ಹರೀಶ್‍ ಪೂಂಜಾ ರವರು ಈ ಹಿಂದೆ ಸ್ಥಳ ಪರಿಶೀಲನೆ ನಡೆಸಿದ್ದರು.  

ದಿಡುಪೆ-ಸಂಸೆ ರಸ್ತೆ ಸರ್ವೇ ಕಾರ್ಯ ನಡೆಸಿ ವನ್ಯಜೀವಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ 6 ಅಡಿ ಅಗಲದ ಸರ್ವಋತು ರಸ್ತೆ, ಉಳಿದೆಡೆ 12 ಅಡಿ ಅಗಲದ ರಸ್ತೆ ನಿರ್ಮಿಸುವ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್‌) ರಚಿಸಿ ಸರಕಾರಕ್ಕೆ ಈ ಹಿಂದೆಯೇ ಸಲ್ಲಿಸಲಾಗಿದೆ.

ಸದನದಲ್ಲಿ ಮತ್ತೆ ಸಂಪರ್ಕಕೊಂಡಿಗಾಗಿ ಮರುಧ್ವನಿ ಆಗಬೇಕಾಗಿದೆ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ರಾಜ್ಯ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಒಟ್ಟಾಗಿ ಸದನದಲ್ಲಿ ಧ್ವನಿಗೂಡಿಸಿದಲ್ಲಿ ಪಶ್ಚಿಮ ಘಟ್ಟದ ಹಾಗೂ ಕರಾವಳಿ ಸಂಪರ್ಕ ಕೊಂಡಿಯನ್ನು ಶಾಶ್ವತವಾಗಿ ಜೋಡಿಸುವ ಕಾರ್ಯ ಮಾಡಬಹುದಾಗಿದೆ.

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 53 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 50 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 27 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 22 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 48 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ