ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಪತ್ತು ನಿರ್ವಹಣಾ ಘಟಕ ಲೋಕಾರ್ಪಣೆ, ವಿಪತ್ತು ನಿರ್ವಹಣೆ ಸಾಮಾಜಿಕ ಹೊಣೆಗಾರಿಕೆಯಾಗಿದೆ : ಡಾ.ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ ಮತ್ತು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಸ್ವಯಂ ಸೇವಕರು ಧೈರ್ಯ, ತ್ಯಾಗ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ಹೊಂದಿದ್ದು, ಸ್ವಯಂ ಸ್ಪೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು ಹಾಗೂ ಸಿದ್ಧರಾಗಿರಬೇಕು,
ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ತಕ್ಷಣ ಸ್ಪಂದಿಸಬೇಕು. ಮೊದಲು ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಬಳಿಕ ಇತರರ ರಕ್ಷಣೆಗೆ ನೆರವಾಗಬೇಕು. ಪ್ರಜ್ಞಾವಂತರಾಗಿ ತಾವೂ ಬದುಕಿ, ಇತರರೂ ಬದುಕಲು ನೆರವಾಗುವುದು ಮಾನವ ಧರ್ಮವಾಗಿದೆ. ಆಪತ್ತು ನಿರ್ವಹಣೆ ಮಾಡಲು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ವೈಜ್ಞಾನಿಕವಾಗಿ ಶಿಸ್ತು ಬದ್ಧವಾಗಿ ವಿಪತ್ತು ನಿರ್ವಹಣೆ ಸ್ವಯಂ ಸೇವಕರಿಗೆ ಮಾಹಿತಿ, ಮಾರ್ಗದರ್ಶನ ಹಾಗೂ ತರಬೇತಿಯ ಅಗತ್ಯವಾಗಿದೆ. ರಕ್ಷಣಾ ಪರಿಕರಗಳ ಸಮರ್ಪಕ ಬಳಕೆ ಬಗ್ಗೆಯೂ ಅವರಿಗೆ ಮಾಹಿತಿ ನೀಡಲಾಗುವುದು. ಸ್ವಯಂ ಸೇವಕರು ತಮ್ಮ ಮನೆಯವರಿಗೂ, ನೆರೆಕರೆಯವರಿಗೂ ವಿಪತ್ತು ನಿರ್ವಹಣೆ ಬಗ್ಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮಾತನಾಡಿ, ಸೂಕ್ತ ತರಬೇತಿಯಿಂದ ಸ್ವಯಂ ಸೇವಕರು ಉತ್ತಮ ರೀತಿಯ ಸೇವೆ ನೀಡಲು ಅನುಕೂಲವಾಗುತ್ತದೆ, ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಧರ್ಮಸ್ಥಳದ ಕೊಡುಗೆ ಮತ್ತು ಸಹಕಾರವನ್ನು ಧನ್ಯತೆಯಿಂದ ಅವರು ಸ್ಮರಿಸುತ್ತಾ ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ, ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ಜನರ ಪ್ರಾಣ ಹಾಗೂ ಸಂಪತ್ತಿನ ರಕ್ಷಣೆಗೆ ಕಟಿಬದ್ಧರಾಗಿರಬೇಕು ಎಂದು ಸಲಹೆ ನೀಡಿದರು.

ಡಿ. ಸುರೇಂದ್ರ ಕುಮಾರ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಗೋಪಾಲ್‍ಲಾಲ್ ಮೀನಾ, ಮಂಗಳೂರು ಘಟಕದ ಅಧಿಕಾರಿ ವಿಜಯಕುಮಾರ್ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ 55 ಸೂಕ್ಷ್ಮ ಪ್ರದೇಶಗಳಲ್ಲಿ ಸ್ವಯಂ ಸೇವಕರ ತಂಡಗಳನ್ನು ರಚಿಸಿ ತರಬೇತಿ ನೀಡಲಾಗುವುದು.

ಪ್ರಥಮವಾಗಿ ಬೆಳ್ತಂಗಡಿ ತಾಲೂಕಿನ 200 ಸ್ವಯಂ ಸೇವಕರ ತಂಡ ಸೋಮವಾರ ಧರ್ಮಸ್ಥಳದಲ್ಲಿ ಉದ್ಘಾಟನೆ ಮಾಡಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಗೋಪಾಲ್‍ ಲಾಲ್ ಮೀನಾ ವಿಪತ್ತು ನಿರ್ವಹಣೆ ಹಾಗೂ ಪರಿಕರಗಳ ಬಳಕೆ ಬಗ್ಗೆ ತರಬೇತಿ ನೀಡಿದರು.

ಸ್ವಯಂ ಸೇವಕರಿಗೆ ರಕ್ಷಣಾ ಪರಿಕರಗಳನ್ನು ವಿತರಣೆಯ ಜೊತೆಗೆ ನೇತ್ರಾವತಿ ಸ್ನಾನಘಟ್ಟದಲ್ಲಿ ವಿಪತ್ತು ನಿರ್ವಹಣೆಯ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ