ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಪತ್ತು ನಿರ್ವಹಣಾ ಘಟಕ ಲೋಕಾರ್ಪಣೆ, ವಿಪತ್ತು ನಿರ್ವಹಣೆ ಸಾಮಾಜಿಕ ಹೊಣೆಗಾರಿಕೆಯಾಗಿದೆ : ಡಾ.ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ ಮತ್ತು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಸ್ವಯಂ ಸೇವಕರು ಧೈರ್ಯ, ತ್ಯಾಗ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ಹೊಂದಿದ್ದು, ಸ್ವಯಂ ಸ್ಪೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು ಹಾಗೂ ಸಿದ್ಧರಾಗಿರಬೇಕು,
ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ತಕ್ಷಣ ಸ್ಪಂದಿಸಬೇಕು. ಮೊದಲು ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಬಳಿಕ ಇತರರ ರಕ್ಷಣೆಗೆ ನೆರವಾಗಬೇಕು. ಪ್ರಜ್ಞಾವಂತರಾಗಿ ತಾವೂ ಬದುಕಿ, ಇತರರೂ ಬದುಕಲು ನೆರವಾಗುವುದು ಮಾನವ ಧರ್ಮವಾಗಿದೆ. ಆಪತ್ತು ನಿರ್ವಹಣೆ ಮಾಡಲು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ವೈಜ್ಞಾನಿಕವಾಗಿ ಶಿಸ್ತು ಬದ್ಧವಾಗಿ ವಿಪತ್ತು ನಿರ್ವಹಣೆ ಸ್ವಯಂ ಸೇವಕರಿಗೆ ಮಾಹಿತಿ, ಮಾರ್ಗದರ್ಶನ ಹಾಗೂ ತರಬೇತಿಯ ಅಗತ್ಯವಾಗಿದೆ. ರಕ್ಷಣಾ ಪರಿಕರಗಳ ಸಮರ್ಪಕ ಬಳಕೆ ಬಗ್ಗೆಯೂ ಅವರಿಗೆ ಮಾಹಿತಿ ನೀಡಲಾಗುವುದು. ಸ್ವಯಂ ಸೇವಕರು ತಮ್ಮ ಮನೆಯವರಿಗೂ, ನೆರೆಕರೆಯವರಿಗೂ ವಿಪತ್ತು ನಿರ್ವಹಣೆ ಬಗ್ಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮಾತನಾಡಿ, ಸೂಕ್ತ ತರಬೇತಿಯಿಂದ ಸ್ವಯಂ ಸೇವಕರು ಉತ್ತಮ ರೀತಿಯ ಸೇವೆ ನೀಡಲು ಅನುಕೂಲವಾಗುತ್ತದೆ, ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಧರ್ಮಸ್ಥಳದ ಕೊಡುಗೆ ಮತ್ತು ಸಹಕಾರವನ್ನು ಧನ್ಯತೆಯಿಂದ ಅವರು ಸ್ಮರಿಸುತ್ತಾ ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ, ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ಜನರ ಪ್ರಾಣ ಹಾಗೂ ಸಂಪತ್ತಿನ ರಕ್ಷಣೆಗೆ ಕಟಿಬದ್ಧರಾಗಿರಬೇಕು ಎಂದು ಸಲಹೆ ನೀಡಿದರು.

ಡಿ. ಸುರೇಂದ್ರ ಕುಮಾರ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಗೋಪಾಲ್‍ಲಾಲ್ ಮೀನಾ, ಮಂಗಳೂರು ಘಟಕದ ಅಧಿಕಾರಿ ವಿಜಯಕುಮಾರ್ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ 55 ಸೂಕ್ಷ್ಮ ಪ್ರದೇಶಗಳಲ್ಲಿ ಸ್ವಯಂ ಸೇವಕರ ತಂಡಗಳನ್ನು ರಚಿಸಿ ತರಬೇತಿ ನೀಡಲಾಗುವುದು.

ಪ್ರಥಮವಾಗಿ ಬೆಳ್ತಂಗಡಿ ತಾಲೂಕಿನ 200 ಸ್ವಯಂ ಸೇವಕರ ತಂಡ ಸೋಮವಾರ ಧರ್ಮಸ್ಥಳದಲ್ಲಿ ಉದ್ಘಾಟನೆ ಮಾಡಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಗೋಪಾಲ್‍ ಲಾಲ್ ಮೀನಾ ವಿಪತ್ತು ನಿರ್ವಹಣೆ ಹಾಗೂ ಪರಿಕರಗಳ ಬಳಕೆ ಬಗ್ಗೆ ತರಬೇತಿ ನೀಡಿದರು.

ಸ್ವಯಂ ಸೇವಕರಿಗೆ ರಕ್ಷಣಾ ಪರಿಕರಗಳನ್ನು ವಿತರಣೆಯ ಜೊತೆಗೆ ನೇತ್ರಾವತಿ ಸ್ನಾನಘಟ್ಟದಲ್ಲಿ ವಿಪತ್ತು ನಿರ್ವಹಣೆಯ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!