ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಜಿಲ್ಲೆಯ ವಕೀಲರ ಶ್ರೇಯೋಭಿವೃದ್ಧಿಗಾಗಿ ಸೊಸೈಟಿ ರಚಿಸುವ ಬಗ್ಗೆ ಹಾಗೂ ಜಿಲ್ಲೆಯ ವಿವಿಧ ವಕೀಲರ ಸಂಘಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಿತು. ಇದಲ್ಲದೆ, ವಕೀಲರ ಹಿತಾಸಕ್ತಿ ಹಾಗೂ ಸಂಘದ ಮುಂದಿನ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಮಂಗಳೂರು ನಿಕಟಪೂರ್ವ ಅಧ್ಯಕ್ಷರಾದ ರಾಘವೇಂದ್ರ ಎಚ್.ವಿ., ಸುಳ್ಯ ಅಧ್ಯಕ್ಷರಾದ ಸುಕುಮಾರ್ ಕುರ್ತುಕುಳಿ, ಮೂಡಬಿದ್ರೆ ನಿಕಟಪೂರ್ವ ಅಧ್ಯಕ್ಷರಾದ ಹರೀಶ್, ಜಗನ್ನಾಥ ರೈ, ದಯಾನಂದ್, ಬೆಳ್ತಂಗಡಿ ನಿಕಟಪೂರ್ವ ಕಾರ್ಯದರ್ಶಿ ಜಯಪ್ರಕಾಶ್, ದಕ್ಷಿಣ ಕನ್ನಡ ಜಿಲ್ಲಾ ಜೊತೆ ಕಾರ್ಯದರ್ಶಿ ನವೀನ್ ಬಿ.ಕೆ., ಸದಸ್ಯರಾದ ಮನೋಹರ್ ಕುಮಾರ್ ಎ., ಶ್ರೀನಿವಾಸ ಗೌಡ ಬೆಳಾಲು ಹಾಗೂ ನರೇಂದ್ರ ಬಂಟ್ವಾಳ ಉಪಸ್ಥಿತರಿದ್ದರು.
ಸಭೆಯಲ್ಲಿ ಜಿಲ್ಲೆಯ ವಕೀಲರ ಸಂಘಗಳ ಬಲವರ್ಧನೆ ಹಾಗೂ ವಕೀಲರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಿತು.





