ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ನಿಯೋಜಿತ ಅಧ್ಯಕ್ಷರಾದ ಸುರೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಿ.ಎಂ.ಎಸ್ ನ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ ಬಿ.ಕೆ ಅವರು ಸರಕಾರದಿಂದ ಸಿಗುವ ಸೌಲಭ್ಯಗಳು ಸುಲಭವಾಗಿ ಪಡೆಯಲು ಸಂಘಟನೆಯಿಂದ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಉಭಯ ಜಿಲ್ಲೆಗಳಲ್ಲಿ ಇರುವ ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಈ ಸಂಘದಿಂದ ಪ್ರಯೋಜನವಾಗಲಿದೆ ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಾರ್ಮಿಕರು ಪಡೆದುಕೊಳ್ಳಲು ಜಾಗೃತಿ ಮಾಡುವುದು ಅವಶ್ಯಕವಾಗಿದೆ. ಶೋಷಿತ ಕಾರ್ಮಿಕ ವರ್ಗವನ್ನು ಮೇಲೆತ್ತುವುದೇ ಈ ಸಂಘಟನೆಯ ಧ್ಯೇಯವಾಗಿರಲಿ ಹಾಗೂ ಈ ಮೂಲಕ ಕಾರ್ಮಿಕರ ಹಿತಾಸಕ್ತಿಗೆ ದುಡಿಯುವಂತಹ ಸಂಘಟನೆಯಾಗಲಿ ಎಂದು ಆಶೀಸಿದರು.

ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಮಿತಿ ಅಮೂಲ್ಯ ಬೆಳ್ತಂಗಡಿ ಇದರ ಸಮಾಲೋಚಕರಾದ ಶ್ರೀಮತಿ ಉಷಾ ನಾಯಕ್ ಅವರು ಕಾರ್ಮಿಕರಿಗಿರುವ ಸರ್ಕಾರಿ ಸೌಲಭ್ಯಗಳು ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಪಿಂಚಣಿ ಯೋಜನೆ ಮತ್ತು ಇತರ ಇನ್ಶೂರೆನ್ಸ್ ಯೋಜನೆಗಳು ಮತ್ತು ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಇದರ ಬಗ್ಗೆ ವಿವರವಾದ ಮಾಹಿತಿಗಳನ್ನು ತಿಳಿಸಿಕೊಟ್ಟು ಇದನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಿ.ಎಂ.ಎಸ್ ನ ತಾಲೂಕು ಕಾರ್ಯದರ್ಶಿಗಳಾದ ಜಯರಾಜ್ ಸಾಲಿಯಾನ್ ಸಂಘಟನೆಯ ಉದ್ದೇಶಗಳ‌ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟ್ವಾಳ ,ಪುತ್ತೂರು, ಕಡಬ, ಸುಳ್ಯ,ಕುಂದಾಪುರದ ಕಾರ್ಮಿಕ ಪ್ರತಿನಿಧಿಗಳು ಹಾಜರಿದ್ದು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅಯ್ಕೆ ಪ್ರಕ್ರೀಯೆ ನಡೆಯಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಸ್ಥಾಪಕ ಅಧ್ಯಕ್ಷರಾದ ಸೆಲ್ವದೋರೆ ,ಉಪಾದ್ಯಕ್ಷರಾದ ಶಂಕರ್ ಕುಂದಾಪುರ, ಹಾಗೂ ಕಾರ್ಯದರ್ಶಿ ನಾಗರಾಜ ಮಾಚಾರು, ನಾಗೇಂದ್ರ ಭುವನೇಶ್ವರ , ರಾಜ ಮಾಚಾರು , ಸೆಂಥಿಲ್ ಕುಮಾರ್ ಕಡಬ ಉಪಸ್ಥಿತರಿದ್ದರು. ಜನಾರ್ದನ ಕಾನರ್ಪ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 47 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 108 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ