ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ನಿಯೋಜಿತ ಅಧ್ಯಕ್ಷರಾದ ಸುರೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಿ.ಎಂ.ಎಸ್ ನ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ ಬಿ.ಕೆ ಅವರು ಸರಕಾರದಿಂದ ಸಿಗುವ ಸೌಲಭ್ಯಗಳು ಸುಲಭವಾಗಿ ಪಡೆಯಲು ಸಂಘಟನೆಯಿಂದ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಉಭಯ ಜಿಲ್ಲೆಗಳಲ್ಲಿ ಇರುವ ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಈ ಸಂಘದಿಂದ ಪ್ರಯೋಜನವಾಗಲಿದೆ ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಾರ್ಮಿಕರು ಪಡೆದುಕೊಳ್ಳಲು ಜಾಗೃತಿ ಮಾಡುವುದು ಅವಶ್ಯಕವಾಗಿದೆ. ಶೋಷಿತ ಕಾರ್ಮಿಕ ವರ್ಗವನ್ನು ಮೇಲೆತ್ತುವುದೇ ಈ ಸಂಘಟನೆಯ ಧ್ಯೇಯವಾಗಿರಲಿ ಹಾಗೂ ಈ ಮೂಲಕ ಕಾರ್ಮಿಕರ ಹಿತಾಸಕ್ತಿಗೆ ದುಡಿಯುವಂತಹ ಸಂಘಟನೆಯಾಗಲಿ ಎಂದು ಆಶೀಸಿದರು.

ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಮಿತಿ ಅಮೂಲ್ಯ ಬೆಳ್ತಂಗಡಿ ಇದರ ಸಮಾಲೋಚಕರಾದ ಶ್ರೀಮತಿ ಉಷಾ ನಾಯಕ್ ಅವರು ಕಾರ್ಮಿಕರಿಗಿರುವ ಸರ್ಕಾರಿ ಸೌಲಭ್ಯಗಳು ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಪಿಂಚಣಿ ಯೋಜನೆ ಮತ್ತು ಇತರ ಇನ್ಶೂರೆನ್ಸ್ ಯೋಜನೆಗಳು ಮತ್ತು ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಇದರ ಬಗ್ಗೆ ವಿವರವಾದ ಮಾಹಿತಿಗಳನ್ನು ತಿಳಿಸಿಕೊಟ್ಟು ಇದನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಿ.ಎಂ.ಎಸ್ ನ ತಾಲೂಕು ಕಾರ್ಯದರ್ಶಿಗಳಾದ ಜಯರಾಜ್ ಸಾಲಿಯಾನ್ ಸಂಘಟನೆಯ ಉದ್ದೇಶಗಳ‌ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟ್ವಾಳ ,ಪುತ್ತೂರು, ಕಡಬ, ಸುಳ್ಯ,ಕುಂದಾಪುರದ ಕಾರ್ಮಿಕ ಪ್ರತಿನಿಧಿಗಳು ಹಾಜರಿದ್ದು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅಯ್ಕೆ ಪ್ರಕ್ರೀಯೆ ನಡೆಯಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಸ್ಥಾಪಕ ಅಧ್ಯಕ್ಷರಾದ ಸೆಲ್ವದೋರೆ ,ಉಪಾದ್ಯಕ್ಷರಾದ ಶಂಕರ್ ಕುಂದಾಪುರ, ಹಾಗೂ ಕಾರ್ಯದರ್ಶಿ ನಾಗರಾಜ ಮಾಚಾರು, ನಾಗೇಂದ್ರ ಭುವನೇಶ್ವರ , ರಾಜ ಮಾಚಾರು , ಸೆಂಥಿಲ್ ಕುಮಾರ್ ಕಡಬ ಉಪಸ್ಥಿತರಿದ್ದರು. ಜನಾರ್ದನ ಕಾನರ್ಪ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ