ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ನಿಯೋಜಿತ ಅಧ್ಯಕ್ಷರಾದ ಸುರೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಿ.ಎಂ.ಎಸ್ ನ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ ಬಿ.ಕೆ ಅವರು ಸರಕಾರದಿಂದ ಸಿಗುವ ಸೌಲಭ್ಯಗಳು ಸುಲಭವಾಗಿ ಪಡೆಯಲು ಸಂಘಟನೆಯಿಂದ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಉಭಯ ಜಿಲ್ಲೆಗಳಲ್ಲಿ ಇರುವ ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಈ ಸಂಘದಿಂದ ಪ್ರಯೋಜನವಾಗಲಿದೆ ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಾರ್ಮಿಕರು ಪಡೆದುಕೊಳ್ಳಲು ಜಾಗೃತಿ ಮಾಡುವುದು ಅವಶ್ಯಕವಾಗಿದೆ. ಶೋಷಿತ ಕಾರ್ಮಿಕ ವರ್ಗವನ್ನು ಮೇಲೆತ್ತುವುದೇ ಈ ಸಂಘಟನೆಯ ಧ್ಯೇಯವಾಗಿರಲಿ ಹಾಗೂ ಈ ಮೂಲಕ ಕಾರ್ಮಿಕರ ಹಿತಾಸಕ್ತಿಗೆ ದುಡಿಯುವಂತಹ ಸಂಘಟನೆಯಾಗಲಿ ಎಂದು ಆಶೀಸಿದರು.

ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಮಿತಿ ಅಮೂಲ್ಯ ಬೆಳ್ತಂಗಡಿ ಇದರ ಸಮಾಲೋಚಕರಾದ ಶ್ರೀಮತಿ ಉಷಾ ನಾಯಕ್ ಅವರು ಕಾರ್ಮಿಕರಿಗಿರುವ ಸರ್ಕಾರಿ ಸೌಲಭ್ಯಗಳು ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಪಿಂಚಣಿ ಯೋಜನೆ ಮತ್ತು ಇತರ ಇನ್ಶೂರೆನ್ಸ್ ಯೋಜನೆಗಳು ಮತ್ತು ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಇದರ ಬಗ್ಗೆ ವಿವರವಾದ ಮಾಹಿತಿಗಳನ್ನು ತಿಳಿಸಿಕೊಟ್ಟು ಇದನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಿ.ಎಂ.ಎಸ್ ನ ತಾಲೂಕು ಕಾರ್ಯದರ್ಶಿಗಳಾದ ಜಯರಾಜ್ ಸಾಲಿಯಾನ್ ಸಂಘಟನೆಯ ಉದ್ದೇಶಗಳ‌ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟ್ವಾಳ ,ಪುತ್ತೂರು, ಕಡಬ, ಸುಳ್ಯ,ಕುಂದಾಪುರದ ಕಾರ್ಮಿಕ ಪ್ರತಿನಿಧಿಗಳು ಹಾಜರಿದ್ದು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅಯ್ಕೆ ಪ್ರಕ್ರೀಯೆ ನಡೆಯಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಸ್ಥಾಪಕ ಅಧ್ಯಕ್ಷರಾದ ಸೆಲ್ವದೋರೆ ,ಉಪಾದ್ಯಕ್ಷರಾದ ಶಂಕರ್ ಕುಂದಾಪುರ, ಹಾಗೂ ಕಾರ್ಯದರ್ಶಿ ನಾಗರಾಜ ಮಾಚಾರು, ನಾಗೇಂದ್ರ ಭುವನೇಶ್ವರ , ರಾಜ ಮಾಚಾರು , ಸೆಂಥಿಲ್ ಕುಮಾರ್ ಕಡಬ ಉಪಸ್ಥಿತರಿದ್ದರು. ಜನಾರ್ದನ ಕಾನರ್ಪ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 109 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 31 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 48 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 98 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ