ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ನಿಯೋಜಿತ ಅಧ್ಯಕ್ಷರಾದ ಸುರೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಿ.ಎಂ.ಎಸ್ ನ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ ಬಿ.ಕೆ ಅವರು ಸರಕಾರದಿಂದ ಸಿಗುವ ಸೌಲಭ್ಯಗಳು ಸುಲಭವಾಗಿ ಪಡೆಯಲು ಸಂಘಟನೆಯಿಂದ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಉಭಯ ಜಿಲ್ಲೆಗಳಲ್ಲಿ ಇರುವ ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಈ ಸಂಘದಿಂದ ಪ್ರಯೋಜನವಾಗಲಿದೆ ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಾರ್ಮಿಕರು ಪಡೆದುಕೊಳ್ಳಲು ಜಾಗೃತಿ ಮಾಡುವುದು ಅವಶ್ಯಕವಾಗಿದೆ. ಶೋಷಿತ ಕಾರ್ಮಿಕ ವರ್ಗವನ್ನು ಮೇಲೆತ್ತುವುದೇ ಈ ಸಂಘಟನೆಯ ಧ್ಯೇಯವಾಗಿರಲಿ ಹಾಗೂ ಈ ಮೂಲಕ ಕಾರ್ಮಿಕರ ಹಿತಾಸಕ್ತಿಗೆ ದುಡಿಯುವಂತಹ ಸಂಘಟನೆಯಾಗಲಿ ಎಂದು ಆಶೀಸಿದರು.

ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಮಿತಿ ಅಮೂಲ್ಯ ಬೆಳ್ತಂಗಡಿ ಇದರ ಸಮಾಲೋಚಕರಾದ ಶ್ರೀಮತಿ ಉಷಾ ನಾಯಕ್ ಅವರು ಕಾರ್ಮಿಕರಿಗಿರುವ ಸರ್ಕಾರಿ ಸೌಲಭ್ಯಗಳು ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಪಿಂಚಣಿ ಯೋಜನೆ ಮತ್ತು ಇತರ ಇನ್ಶೂರೆನ್ಸ್ ಯೋಜನೆಗಳು ಮತ್ತು ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಇದರ ಬಗ್ಗೆ ವಿವರವಾದ ಮಾಹಿತಿಗಳನ್ನು ತಿಳಿಸಿಕೊಟ್ಟು ಇದನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಿ.ಎಂ.ಎಸ್ ನ ತಾಲೂಕು ಕಾರ್ಯದರ್ಶಿಗಳಾದ ಜಯರಾಜ್ ಸಾಲಿಯಾನ್ ಸಂಘಟನೆಯ ಉದ್ದೇಶಗಳ‌ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟ್ವಾಳ ,ಪುತ್ತೂರು, ಕಡಬ, ಸುಳ್ಯ,ಕುಂದಾಪುರದ ಕಾರ್ಮಿಕ ಪ್ರತಿನಿಧಿಗಳು ಹಾಜರಿದ್ದು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅಯ್ಕೆ ಪ್ರಕ್ರೀಯೆ ನಡೆಯಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಸ್ಥಾಪಕ ಅಧ್ಯಕ್ಷರಾದ ಸೆಲ್ವದೋರೆ ,ಉಪಾದ್ಯಕ್ಷರಾದ ಶಂಕರ್ ಕುಂದಾಪುರ, ಹಾಗೂ ಕಾರ್ಯದರ್ಶಿ ನಾಗರಾಜ ಮಾಚಾರು, ನಾಗೇಂದ್ರ ಭುವನೇಶ್ವರ , ರಾಜ ಮಾಚಾರು , ಸೆಂಥಿಲ್ ಕುಮಾರ್ ಕಡಬ ಉಪಸ್ಥಿತರಿದ್ದರು. ಜನಾರ್ದನ ಕಾನರ್ಪ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ