ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ನಿಯೋಜಿತ ಅಧ್ಯಕ್ಷರಾದ ಸುರೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಿ.ಎಂ.ಎಸ್ ನ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ ಬಿ.ಕೆ ಅವರು ಸರಕಾರದಿಂದ ಸಿಗುವ ಸೌಲಭ್ಯಗಳು ಸುಲಭವಾಗಿ ಪಡೆಯಲು ಸಂಘಟನೆಯಿಂದ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಉಭಯ ಜಿಲ್ಲೆಗಳಲ್ಲಿ ಇರುವ ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಈ ಸಂಘದಿಂದ ಪ್ರಯೋಜನವಾಗಲಿದೆ ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಾರ್ಮಿಕರು ಪಡೆದುಕೊಳ್ಳಲು ಜಾಗೃತಿ ಮಾಡುವುದು ಅವಶ್ಯಕವಾಗಿದೆ. ಶೋಷಿತ ಕಾರ್ಮಿಕ ವರ್ಗವನ್ನು ಮೇಲೆತ್ತುವುದೇ ಈ ಸಂಘಟನೆಯ ಧ್ಯೇಯವಾಗಿರಲಿ ಹಾಗೂ ಈ ಮೂಲಕ ಕಾರ್ಮಿಕರ ಹಿತಾಸಕ್ತಿಗೆ ದುಡಿಯುವಂತಹ ಸಂಘಟನೆಯಾಗಲಿ ಎಂದು ಆಶೀಸಿದರು.

ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಮಿತಿ ಅಮೂಲ್ಯ ಬೆಳ್ತಂಗಡಿ ಇದರ ಸಮಾಲೋಚಕರಾದ ಶ್ರೀಮತಿ ಉಷಾ ನಾಯಕ್ ಅವರು ಕಾರ್ಮಿಕರಿಗಿರುವ ಸರ್ಕಾರಿ ಸೌಲಭ್ಯಗಳು ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಪಿಂಚಣಿ ಯೋಜನೆ ಮತ್ತು ಇತರ ಇನ್ಶೂರೆನ್ಸ್ ಯೋಜನೆಗಳು ಮತ್ತು ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಇದರ ಬಗ್ಗೆ ವಿವರವಾದ ಮಾಹಿತಿಗಳನ್ನು ತಿಳಿಸಿಕೊಟ್ಟು ಇದನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಿ.ಎಂ.ಎಸ್ ನ ತಾಲೂಕು ಕಾರ್ಯದರ್ಶಿಗಳಾದ ಜಯರಾಜ್ ಸಾಲಿಯಾನ್ ಸಂಘಟನೆಯ ಉದ್ದೇಶಗಳ‌ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟ್ವಾಳ ,ಪುತ್ತೂರು, ಕಡಬ, ಸುಳ್ಯ,ಕುಂದಾಪುರದ ಕಾರ್ಮಿಕ ಪ್ರತಿನಿಧಿಗಳು ಹಾಜರಿದ್ದು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅಯ್ಕೆ ಪ್ರಕ್ರೀಯೆ ನಡೆಯಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಸ್ಥಾಪಕ ಅಧ್ಯಕ್ಷರಾದ ಸೆಲ್ವದೋರೆ ,ಉಪಾದ್ಯಕ್ಷರಾದ ಶಂಕರ್ ಕುಂದಾಪುರ, ಹಾಗೂ ಕಾರ್ಯದರ್ಶಿ ನಾಗರಾಜ ಮಾಚಾರು, ನಾಗೇಂದ್ರ ಭುವನೇಶ್ವರ , ರಾಜ ಮಾಚಾರು , ಸೆಂಥಿಲ್ ಕುಮಾರ್ ಕಡಬ ಉಪಸ್ಥಿತರಿದ್ದರು. ಜನಾರ್ದನ ಕಾನರ್ಪ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ಗುರುವಾಯನಕೆರೆ, ಆ.14: ಎಕ್ಸೆಲ್ ಪದವಿ ಪೂರ್ವ ಕಾಲೇಜು, ಗುರುವಾಯನಕೆರೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಆಗಸ್ಟ್ 15 ಹಾಗೂ 16ರಂದು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ ಸಾಧಕರ ಅಭಿನಂದನೆ ಹಾಗೂ “ರಕ್ಷಕ ನಮನ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಗಸ್ಟ್ 15ರಂದು…

    Spread the love

    You Missed

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 2 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 3 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 10 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 11 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 8 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ