ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ನಿಯೋಜಿತ ಅಧ್ಯಕ್ಷರಾದ ಸುರೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಿ.ಎಂ.ಎಸ್ ನ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ ಬಿ.ಕೆ ಅವರು ಸರಕಾರದಿಂದ ಸಿಗುವ ಸೌಲಭ್ಯಗಳು ಸುಲಭವಾಗಿ ಪಡೆಯಲು ಸಂಘಟನೆಯಿಂದ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಉಭಯ ಜಿಲ್ಲೆಗಳಲ್ಲಿ ಇರುವ ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಈ ಸಂಘದಿಂದ ಪ್ರಯೋಜನವಾಗಲಿದೆ ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಾರ್ಮಿಕರು ಪಡೆದುಕೊಳ್ಳಲು ಜಾಗೃತಿ ಮಾಡುವುದು ಅವಶ್ಯಕವಾಗಿದೆ. ಶೋಷಿತ ಕಾರ್ಮಿಕ ವರ್ಗವನ್ನು ಮೇಲೆತ್ತುವುದೇ ಈ ಸಂಘಟನೆಯ ಧ್ಯೇಯವಾಗಿರಲಿ ಹಾಗೂ ಈ ಮೂಲಕ ಕಾರ್ಮಿಕರ ಹಿತಾಸಕ್ತಿಗೆ ದುಡಿಯುವಂತಹ ಸಂಘಟನೆಯಾಗಲಿ ಎಂದು ಆಶೀಸಿದರು.

ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಮಿತಿ ಅಮೂಲ್ಯ ಬೆಳ್ತಂಗಡಿ ಇದರ ಸಮಾಲೋಚಕರಾದ ಶ್ರೀಮತಿ ಉಷಾ ನಾಯಕ್ ಅವರು ಕಾರ್ಮಿಕರಿಗಿರುವ ಸರ್ಕಾರಿ ಸೌಲಭ್ಯಗಳು ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಪಿಂಚಣಿ ಯೋಜನೆ ಮತ್ತು ಇತರ ಇನ್ಶೂರೆನ್ಸ್ ಯೋಜನೆಗಳು ಮತ್ತು ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಇದರ ಬಗ್ಗೆ ವಿವರವಾದ ಮಾಹಿತಿಗಳನ್ನು ತಿಳಿಸಿಕೊಟ್ಟು ಇದನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಿ.ಎಂ.ಎಸ್ ನ ತಾಲೂಕು ಕಾರ್ಯದರ್ಶಿಗಳಾದ ಜಯರಾಜ್ ಸಾಲಿಯಾನ್ ಸಂಘಟನೆಯ ಉದ್ದೇಶಗಳ‌ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟ್ವಾಳ ,ಪುತ್ತೂರು, ಕಡಬ, ಸುಳ್ಯ,ಕುಂದಾಪುರದ ಕಾರ್ಮಿಕ ಪ್ರತಿನಿಧಿಗಳು ಹಾಜರಿದ್ದು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅಯ್ಕೆ ಪ್ರಕ್ರೀಯೆ ನಡೆಯಿತು.

ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಸ್ಥಾಪಕ ಅಧ್ಯಕ್ಷರಾದ ಸೆಲ್ವದೋರೆ ,ಉಪಾದ್ಯಕ್ಷರಾದ ಶಂಕರ್ ಕುಂದಾಪುರ, ಹಾಗೂ ಕಾರ್ಯದರ್ಶಿ ನಾಗರಾಜ ಮಾಚಾರು, ನಾಗೇಂದ್ರ ಭುವನೇಶ್ವರ , ರಾಜ ಮಾಚಾರು , ಸೆಂಥಿಲ್ ಕುಮಾರ್ ಕಡಬ ಉಪಸ್ಥಿತರಿದ್ದರು. ಜನಾರ್ದನ ಕಾನರ್ಪ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 209 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 73 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 28 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 50 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 73 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 41 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ