ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ ಎಂದು ಡಿಸಿಎಂ ಹೇಳಿದರು.

ರಾಜ ಆದವನೂ ಅಧಿಕಾರ ಕಳೆದುಕೊಳ್ತಾನೆ, ರಾಜಕಾರಣಿ ಆದವನೂ ಅಧಿಕಾರ ಕಳೆದುಕೊಳ್ತಾನೆ. ಹೆಗ್ಗಡೆಯವರು ನಡೆದು ಬಂದ ದಾರಿ ಮತ್ತು ರಾಜ್ಯಕ್ಕೆ ಕೊಟ್ಟ ಮಾರ್ಗದರ್ಶನ ದೊಡ್ಡದು. ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಹೆಗ್ಗಡೆಯವರು ಮಾಡಿದ ಸಾಧನೆ ಧರ್ಮ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ದಾಖಲಾಗಿದೆ ಎಂದರು. ನನ್ನ ತಮ್ಮ ಪ್ರತೀ ವರ್ಷ ಧರ್ಮಸ್ಥಳದಲ್ಲೇ ಹುಟ್ಟು ಹಬ್ಬ ಆಚರಿಸ್ತಾನೆ. ನಾನು ಮತ್ತು ನನ್ನ ಕುಟುಂಬ ಕೂಡ ಇಲ್ಲಿಗೆ ಬರ್ತಾ ಇರ್ತೇವೆ. ನನ್ನ ಯಶಸ್ಸಿನಲ್ಲಿ ಈ ಶಿವನ ಕ್ಷೇತ್ರದ ಪಾಲು ದೊಡ್ಡದಿದೆ. ಮಂಜುನಾಥನ ನಂಬಿದ ಯಾರಿಗೂ ತೊಂದರೆ ಆಗಿಲ್ಲ. ಕೆಲವರು ಧರ್ಮಸ್ಥಳದ ವಿಚಾರದಲ್ಲಿ ವಾದ ಮತ್ತು ಟೀಕೆಗಳನ್ನು ಮಾಡ್ತಾರೆ. ಶ್ರೀಗಳು ಜೈನರು, ಅವರು ಹೇಗೆ ಮಂಜುನಾಥನ ನಂಬ್ತಾರೆ ಅಂತ. ಹೀಗೆ ವಾದ ಮಾಡಿದ ಕೆಲ ನಾಯಕರು, ಸಮಾಜ ಸೇವಕರು, ಚಿಂತಕರೆಲ್ಲ ಇದಾರೆ. ಧರ್ಮ ಯಾವುದಾದರೂ ತತ್ವ ಒಂದೆ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಇಂತಹ ಪವಿತ್ರವಾದ ಕ್ಷೇತ್ರವನ್ನ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕಿದೆ ಎಂದು ಹೇಳಿದರು.ಸಣ್ಣಪುಟ್ಟ ಮಾತನಾಡೋರು ಹಾಗೂ ಟೀಕೆ ಮಾಡೋರು ಬೇಕಾದಷ್ಟು ಜನ ಇರ್ತಾರೆ. ನಾನು ಶ್ರೀಗಳಿಗೆ ಹೇಳೋದು ಇಷ್ಟೇ, ಟೀಕೆಗಳು ಸಾಯ್ತವೆ, ಮಾಡುವ ಕೆಲಸಗಳು ಉಳೀತಾವೆ. ಹಾಗಾಗಿ ನೀವು ಯಾವುದಕ್ಕೂ ಅಂಜುವ ಸಂಧರ್ಭನೇ ಇಲ್ಲ. ನನ್ನಂಥ ಸಾವಿರಾರು ಜನ ಡಿಕೆ ಶಿವಕುಮಾರ್ ನಿಮ್ಮ ಬೆನ್ನಿಗೆ ನಿಲ್ಲಲು ಸಿದ್ದರಿದ್ದೇವೆ. ನಿಮ್ಮ ಪರಿಶುದ್ದವಾದ ಶ್ರಮ, ಸೇವೆ ಇಡೀ ರಾಷ್ಟ್ರದಲ್ಲಿ ನಾವು ಗಮನಿಸಿದ್ದೇವೆ. ಹಾಗಾಗಿ ನೀವು ಚಿಂತೆ ಮಾಡೋದು ಬೇಡ, ಸಮಾಜ ಸೇವೆ ಮಾಡಿ. ಚಿಂತೆ ಮಾಡದೇ ಆರೋಗ್ಯ ಕಾಪಾಡಿಕೊಂಡು ಸೇವೆ ಮುಂದುವರೆಸಿ. ನನ್ನಂಥ ನೂರಾರು ಡಿ.ಕೆ.ಶಿವಕುಮಾರ್ ಈ ಕ್ಷೇತ್ರವನ್ನ ಮತ್ತು ನಿಮ್ಮನ್ನ ರಕ್ಷಣೆ ಮಾಡೋ ಕೆಲಸ ಮಾಡ್ತಾರೆ ಎಂದು ಡಿಕೆಶಿ ತಿಳಿಸಿದರು.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಯಾತ್ರೆ ಕೈಗೊಳ್ಳಲು ವ್ಯಾಗನರ್‌ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿ…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 153 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 226 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 98 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 86 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 36 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ